ಇಂದಿನಿಂದ ಕರ್ನಾಟಕದಲ್ಲಿ ಮಳೆಯಬ್ಬರ ತುಸು ಇಳಿಕೆ?

Published : Aug 08, 2022, 03:00 AM IST
ಇಂದಿನಿಂದ ಕರ್ನಾಟಕದಲ್ಲಿ ಮಳೆಯಬ್ಬರ ತುಸು ಇಳಿಕೆ?

ಸಾರಾಂಶ

ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ

ಬೆಂಗಳೂರು(ಆ.07): ರಾಜ್ಯದಲ್ಲಿ ಸೋಮವಾರದಿಂದ ಮಳೆಯ ಅಬ್ಬರ ತುಸು ತಗ್ಗುವ ಲಕ್ಷಣಗಳಿವೆ. ಆದರೆ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ ಬುಧವಾರದ ತನಕ ಭಾರಿ ಮಳೆಯ ‘ಆರೆಂಜ್‌ ಅಲರ್ಟ್‌’ ಇರಲಿದೆ. ಬುಧವಾರದ ಬಳಿಕ ಮಳೆ ಇನ್ನಷ್ಟು ಕಡಿಮೆಯಾಗಲಿದೆ.

ಬುಧವಾರದವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗೆ ‘ಆರೆಂಜ್‌ ಅಲರ್ಟ್‌’ ನೀಡಲಾಗಿದೆ. ಉಳಿದಂತೆ ಹಾಸನ, ಶಿವಮೊಗ್ಗ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ ಮತ್ತು ಬೀದರ್‌ ಜಿಲ್ಲೆಗೆ ‘ಯೆಲ್ಲೋ ಅಲರ್ಟ್‌’ ಇರಲಿದೆ.

ಮಳೆ ಅವಾಂತರ, ರಾತ್ರಿಯಿಡಿ ಪರದಾಡಿದ ನಿವಾಸಿಗಳು

ಬುಧವಾರ ಬೆಳಗ್ಗೆ 8.30ರಿಂದ ಶುಕ್ರವಾರದವರೆಗೆ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. ಮಲೆನಾಡಿನ ಜಿಲ್ಲೆಗಳನ್ನು ಹೊರತು ಪಡಿಸಿದರೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾನುವಾರದ ಹವಾಮಾನ ಮುನ್ಸೂಚನೆಯ ಪ್ರಕಾರ ಭಾರಿ ಮಳೆಯ ಸಾಧ್ಯತೆಗಳಿಲ್ಲ.

ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆ ಅವಧಿಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕಾಗಿತ್ತು. ಕೊಲ್ಲೂರು, ಭಾಗಮಂಡಲ ತಲಾ 16 ಸೆಂ.ಮೀ, ಉತ್ತರ ಕನ್ನಡದ ಸಿದ್ದಾಪುರ ಮತ್ತು ಕಾಸಲ್‌ರಾಕ್‌, ಕೊಡಗಿನ ಮೂರ್ನಾಡು, ಉಡುಪಿ ತಲಾ 11, ಮಂಗಳೂರು ವಿಮಾನ ನಿಲ್ದಾಣ, ಉಡುಪಿಯ ಕೋಟ, ಕೊಡಗಿನ ಸೋಮವಾರಪೇಟೆಯಲ್ಲಿ ತಲಾ 10 ಸೆಂ.ಮೀ. ಮಳೆಯಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ