
ಬೆಂಗಳೂರು(ಮಾ.20): ಬಿಸಿಲಿನಿಂದ ಬಳಲಿ ಬೆಂಡಾಗಿದ್ದ ಸಿಲಿಕಾನ್ ಸಿಟಿ ಬೆಂಗಳೂರಿಗೆ ವರುಣ ತಂಪೆರೆದಿದ್ದಾನೆ. ಮಳೆ ಬೆಂಗಳೂರಿನ ಮಂದಿಯ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡುವುದರ ಜತೆ ಜತೆಗೆ ಆತಂಕವನ್ನೂ ಮೂಡುವಂತೆ ಮಾಡಿದೆ.
ರಾಜ್ಯದಲ್ಲಿ 40 ಡಿಗ್ರಿ ದಾಟಲಿದೆ ತಾಪಮಾನ..! ಇನ್ನೆರಡು ದಿನ ಕೆಲವೆಡೆ ಮಳೆ
ಬಿಸಿಲಿನಿಂದ ಬೇಯುತ್ತಿದ್ದ ನಗರಕ್ಕೆ ಮಳೆರಾಯ ತಂಪೆರೆದಿದ್ದಾನೆ. ನಗರದ ಕೆ.ಆರ್. ಮಾರ್ಕೆಟ್, ಚಾಮರಾಜ ಪೇಟೆ, ಮಾಗಡಿ ರೋಡ್ ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಕೆಲವೆಡೆ ಧಾರಾಕಾರ ಮಳೆಯಾದರೆ, ಮತ್ತೆ ಕೆಲವೆಡೆ ತುಂತುರು ಮಳೆಯಾಗಿದೆ. ಇದರಿಂದಾಗಿ ಕಚೇರಿಗೆ ತೆರಳಿದ್ದ ಉದ್ಯೋಗಿಗಳು ಟ್ರಾಫಿಕ್ ಕಿರಿಕಿರಿ ಅನುಭವಿಸಬೇಕಾಯಿತು.
ವಾಹನ ಸವಾರರಿಗೆ ಕೊರೋನಾ ಜಾಗೃತಿ, ಬೆಂಗಳೂರು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ!
ವಾತಾವರಣದಲ್ಲಿ ಉಷ್ಣತೆ ಹೆಚ್ಚಾದರೆ ಕೊರೋನಾ ವೈರಸ್ ಸೋಂಕು ಹಬ್ಬವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಆದರೆ ನಗರದಲ್ಲಿ ಮಳೆಯಾಗಿರುವುದು ಬೆಂಗಳೂರಿನ ಮಂದಿಗೆ ಆತಂಕಕ್ಕೊಳಗಾಗುವಂತೆ ಮಾಡಿದೆ. ಮಲೆನಾಡಿನಲ್ಲಿ ಮಳೆಯಾದರೆ ಮಂಗನ ಕಾಯಿಲೆ ಹತೋಟಿಗೆ ಬರುವ ಸಾಧ್ಯತೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ