
ಶಿವಮೊಗ್ಗ(ಜೂ.10): ರಾಜ್ಯಸಭೆ ಎರಡು ಸ್ಥಾನಕ್ಕೆ ರಾಜ್ಯ ಬಿಜೆಪಿ ಕೋರ್ಕಮಿಟಿ ಕಳುಹಿಸಿದ ಹೆಸರಿಗೆ ಬದಲಾಗಿ ಸಾಮಾನ್ಯ ಕಾರ್ಯಕರ್ತರನ್ನು ಆಯ್ಕೆ ಮಾಡಿದ ಬಿಜೆಪಿ ಹೈಕಮಾಂಡ್ ಕ್ರಮ ಮಾದರಿ. ಇದು ಮುಂದಿನ ದಿನಗಳಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ನೀಡಬೇಕೆಂಬ ಸಂದೇಶವೂ ಹೌದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರದಿಂದ ಒಂದು ಸ್ಪಷ್ಟ ಸೂಚನೆ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ನಮಗೆ ಇದು ಮಾದರಿ ಮಾರ್ಗಸೂಚಿ ಎಂದು ವಿಶ್ಲೇಷಿಸಿದರು.
ಹೈಕಮಾಂಡ್ ಆಯ್ಕೆಗೆ ಇಡೀ ರಾಜ್ಯದ ಕಾರ್ಯಕರ್ತರು, ನಾಯಕರು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎಲ್ಲ ಕಡೆಯಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದರಿಂದ ಯಾರೊಬ್ಬರಿಗೂ ಅಸಮಾಧಾನವಾಗುವ ಪ್ರಶ್ನೆಯೇ ಇಲ್ಲ. ಯಾರ ಹೆಸರನ್ನು ರಾಜ್ಯ ಸಮಿತಿ ಕಳುಹಿಸಿತ್ತೋ ಆ ನಾಯಕರೇ ಈ ಆಯ್ಕೆಯನ್ನು ಒಪ್ಪಿ ಸಂತೋಷ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಬೇರೆ ಯಾರಿಗೆ ಅಸಮಾಧಾನ ಆಗಲು ಸಾಧ್ಯ ಎಂದರು.
ಮಾಡಿಯೇ ತೀರುತ್ತೇವೆಂದು ಸರ್ಕಾರದ ವಿರುದ್ಧ ತೊಡೆತಟ್ಟಿ ನಿಂತ ಸಿದ್ದರಾಮಯ್ಯ...!
ರಾಜ್ಯದಿಂದ ಯಾರದೇ ಹೆಸರು ಹೋದರೂ ಪಕ್ಷದ ಹಿರಿಯರು ಕುಳಿತು ಸರಿಯಾದ ತೀರ್ಮಾನ ಕೈಗೊಳ್ಳುತ್ತಾರೆ. ಇದು ಕುಟುಂಬದ ಹಿರಿಯರು ನಿರ್ಧಾರ ಕೈಗೊಳ್ಳುವ ರೀತಿಯಲ್ಲಿ. ಜಿಲ್ಲೆ, ರಾಜ್ಯ ಮತ್ತು ದೇಶದ ಹಿತದೃಷ್ಟಿಯಿಂದ ಅತ್ಯುತ್ತಮ ನಿರ್ಧಾರ. ಇದರಿಂದ ಪಕ್ಷದಲ್ಲಿ ಸಂಘಟನಾತ್ಮಕ ಪ್ರಕ್ರಿಯೆ ಹೆಚ್ಚಾಗುತ್ತದೆ. ಪಕ್ಷ ಬಲಿಷ್ಠವಾಗುತ್ತದೆ ಎಂದು ಹೇಳಿದರು.
ಆದರೆ ಈ ಹೆಸರುಗಳನ್ನು ನಾವು ಕಳುಹಿಸಿರಲಿಲ್ಲ. ಕೇಂದ್ರವೇ ಈ ನಿರ್ಧಾರಕ್ಕೆ ಬಂದಿದೆ ಎಂದ ಅವರು ಹೈಕಮಾಂಡ್ನ ಈ ನಿಲುವು ತಾನು ಗಟ್ಟಿಎಂದು ತೋರಿಸಿಕೊಳ್ಳುವ ಹೆಜ್ಜೆಯೇ ಎಂಬ ಪ್ರಶ್ನೆಗೆ ಆ ರೀತಿಯಲ್ಲ. ಭವಿಷ್ಯದ ಕಾರ್ಯಸೂಚಿ ಹೇಗಿರಬೇಕು ಎಂಬ ಸೂಚನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ