
ಬೆಂಗಳೂರು (ಅ.30): ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರು ರಾಜ್ಯ ಕಂಡ ಮುತ್ಸದ್ಧಿ ನಾಯಕರು. ಮೌಲ್ಯಾಧಾರಿತ ರಾಜಕೀಯದ ಪ್ರವರ್ತಕರು. ದಕ್ಷ ಆಡಳಿತಕ್ಕೆ, ಪ್ರಾಮಾಣಿಕತೆಗೆ ಮಾದರಿಯಾಗಿದ್ದಾರೆ. ಕರ್ನಾಟಕದಲ್ಲಿ ದೀರ್ಘ ಕಾಲದ ಕಾಂಗ್ರೆಸ್ ಆಡಳಿತವನ್ನು ಕೊನೆಗೊಳಿಸಿ ಪ್ರಥಮ ಕಾಂಗ್ರೆಸ್ಸೇತರ ಮುಖ್ಯಮಂತ್ರಿಯಾಗಿದ್ದವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವಪೂರ್ಣ ನಮನ ಸಲ್ಲಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ 95ನೇ ಜನ್ಮದಿನದ ಹಿನ್ನೆಲೆಯಲ್ಲಿ ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದು, ಹೆಗಡೆಯವರು ರಾಜ್ಯದಲ್ಲಷ್ಟೇ ಅಲ್ಲದೆ ರಾಷ್ಟ್ರಮಟ್ಟದಲ್ಲಿ ಪ್ರಭಾವಿ ನಾಯಕರಾಗಿದ್ದರು. ಕೇಂದ್ರದಲ್ಲಿ ವಿ.ಪಿ.ಸಿಂಗ್ ನೇತೃತ್ವದ ಸರ್ಕಾರ ರಚನೆಯಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು ಎಂದು ಸ್ಮರಿಸಿದ್ದಾರೆ.
ರಾಜ್ಯದ ಅಭಿವೃದ್ಧಿಯ ಕನಸುಗಳನ್ನು ಬಿಚ್ಚಿಟ್ಟ ಸಿಎಂ ಬೊಮ್ಮಾಯಿ
ಹೆಗಡೆಯವರ ಜೊತೆ ನನ್ನ ತಂದೆ ಎಸ್.ಆರ್.ಬೊಮ್ಮಾಯಿ ಅವರ ಸ್ನೇಹ ಸಂಬಂಧ ಅವರ ಜೀವನದ ಅಂತ್ಯದವರೆಗೂ ಇತ್ತು. ಹೆಗಡೆಯವರ ಸಂಪುಟದಲ್ಲಿ ಸಚಿವರಾಗಿ ಜನತಾದಳವನ್ನು ಸಂಘಟಿಸಿ ಅಧಿಕಾರಕ್ಕೆ ತರುವಲ್ಲಿ ಹೆಗಡೆಯವರು ಮತ್ತು ಬೊಮ್ಮಾಯಿಯವರು ಅವಿಶ್ರಾಂತವಾಗಿ ಶ್ರಮಿಸಿದ್ದರು. ಹೆಗಡೆಯವರ ಜೀವನ ಮತ್ತು ಕೊಡುಗೆ ನಮಗೆ ಸದಾ ಆದರ್ಶಪ್ರಾಯವಾಗಿದೆ. ರಾಜ್ಯದ ಅಭಿವೃದ್ಧಿಗೆ ಅವರು ಹಾಕಿಕೊಟ್ಟಮಾರ್ಗವೇ ನಮ್ಮ ಸಂಕಲ್ಪವಾಗಿರುತ್ತದೆ ಎಂದು ತಿಳಿಸಿದ್ದಾರೆ.
ಹೆಗಡೆಯವರು ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಆಡಳಿತ ವಿಕೇಂದ್ರೀಕರಣಕ್ಕೆ ಅವರು ಮಾಡಿದ ಪಂಚಾಯತ್ ರಾಜ್ ವ್ಯವಸ್ಥೆ ದೇಶದಲ್ಲಿ ಅನುಕರಣೀಯವೆಂದು ಪ್ರಶಂಸೆಗೆ ಪಾತ್ರವಾಗಿದೆ ಎಂದು ಬಣ್ಣಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ