'ಐದು ವರ್ಷ ನಾನೇ ಸಿಎಂ' ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಡಿಕೆಶಿ ಸಿಎಂ ಆಗಲೇಬೇಕು ಎಂದ ರಾಮನಗರ ಶಾಸಕ ಇಕ್ಬಾಲ್!

Published : Nov 02, 2023, 06:09 PM IST
'ಐದು ವರ್ಷ ನಾನೇ ಸಿಎಂ' ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಡಿಕೆಶಿ ಸಿಎಂ ಆಗಲೇಬೇಕು ಎಂದ ರಾಮನಗರ ಶಾಸಕ ಇಕ್ಬಾಲ್!

ಸಾರಾಂಶ

ಒಂದೂವರೆ ವರ್ಷದ ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಸಿಎಂ ಆಗಬೇಕು. ಅವರು ಸಿಎಂ ಆಗಬೇಕು ಅನ್ನೋದು ನಮ್ಮ ಆಸೆ ಎಂದು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು.

ಬೆಂಗಳೂರು (ನ.2): ಒಂದೂವರೆ ವರ್ಷದ ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಸಿಎಂ ಆಗಬೇಕು. ಅವರು ಸಿಎಂ ಆಗಬೇಕು ಅನ್ನೋದು ನಮ್ಮ ಆಸೆ ಎಂದು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರ ಸಂಬಂದ ಮಾದ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಡಿಕೆ
ಪಕ್ಷದ ಅಧ್ಯಕ್ಷರಾಗಿ ಸಂಘಟನೆ ಮಾಡಿದ್ದಾರೆ. ಕಳೆದ ಚುನಾವಣೆ ವೇಳೆ ಶಕ್ತಿ ಮೀರಿ ಕೆಲಸ ಮಾಡುವ ಮೂಲಕ ಪಕ್ಷವನ್ನ ಅಧಿಕಾರಕ್ಕೆ ತಂದಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್‌ಗೆ ಅವಕಾಶ ಸಿಗಲೇಬೇಕು ರಾಜ್ಯದ ಜನತೆ ಕೂಡಾ ಅದನ್ನೇ ಬಯಸಿದ್ದಾರೆ ಎನ್ನುವ ಮೂಲಕ ಡಿಕೆ ಶಿವಕುಮಾರ ಪರ ಬ್ಯಾಟಿಂಗ್ ಮಾಡಿದ ರಾಮನಗರ ಶಾಸಕ ಇಕ್ಬಾಲ್ ಹುಸೇನ್.

ಐದು ವರ್ಷವೂ ನಾನೇ ಸಿಎಂ ಆಗಿರ್ತೀನಿ: ಬದಲಾವಣೆ ಬಗ್ಗೆ ಮಾತನಾಡಿದವರಿಗೆ ಎಚ್ಚರಿಕೆ ರವಾನಿಸಿದ ಸಿದ್ದರಾಮಯ್ಯ

ಇಂದು ವಿಜಯಪುರದಲ್ಲಿ ಸಿಎಂ ಬದಲಾವಣೆ ವಿಚಾರ ಮಾತಾಡುವವರು ಕೆಲಸಕ್ಕೆ ಬಾರದವರು ಎಂಬ ಸಿಎಂ ಸ್ವಪಕ್ಷೀಯ ಶಾಸಕರ ವಿರುದ್ಧ ಹೇಳಿಕೆ ಪ್ರಸ್ತಾಪಿಸಿ, ಇಲ್ಲಿ ಕೆಲಸಕ್ಕೆ ಬಾರದವರು ಯಾರೂ ಇಲ್ಲ. ಎಲ್ಲರೂ ಕೆಲಸಕ್ಕೆ ಬರುವವರೇ. ಅವರನ್ನ ಶಾಸಕ ಅಂತ ಕರೆಯುತ್ತಾರೆ. ಅವರ ಬಗ್ಗೆ ಕೀಳಾಗಿ ಮಾತನಾಡಬಾರದು ಎಂದು ತಿರುಗೇಟು ನೀಡಿದರು.

100 ರಮೇಶ್‌ ಜಾರಕಿಹೊಳಿ ಬಂದ್ರೂ ಡಿಕೆಶಿ ಟಚ್‌ ಮಾಡಲಾಗದು: ಶಾಸಕ ಗಣಿಗ ರವಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!