
ಬೆಂಗಳೂರು[ಡಿ.01]: ನನ್ನ ನೇತೃತ್ವದಲ್ಲಿ ಕ್ಷಿಪ್ರಕ್ರಾಂತಿ ನಡೆಯಲಿದೆ ಎಂಬ ಸುದ್ದಿ ಬೆನ್ನ ಹಿಂದೆ ಕಾಂಗ್ರೆಸ್ನ ಪ್ರಭಾವಿ ನಾಯಕರೊಬ್ಬರಿದ್ದು, ನನ್ನ ಘನತೆಗೆ ಚ್ಯುತಿ ತರಲು ಈ ನಾಯಕರು ಷಡ್ಯಂತ್ರ ನಡೆಸಿದ್ದಾರೆ ಎಂದು ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ.
ಶುಕ್ರವಾರ ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ದೇಶಪೂರ್ವಕವಾಗಿ ನನ್ನ ಬಗ್ಗೆ ಅಪಪ್ರಚಾರ ಮಾಡುವ ಕೆಲಸ ಆಗುತ್ತಿದೆ. ನನ್ನೊಂದಿಗೆ ಯಾವ ಕಾಂಗ್ರೆಸ್ ಶಾಸಕರೂ ಸಂಪರ್ಕದಲ್ಲಿ ಇಲ್ಲ. ನಾನು ಮುಂಬೈ, ಮಹಾರಾಷ್ಟ್ರಕ್ಕೆ ಹೋಗುತ್ತಿದ್ದೇನೆ ಎಂಬುದೆಲ್ಲಾ ಶುದ್ಧ ಸುಳ್ಳು, ನಾನು ಬೆಂಗಳೂರಿನಲ್ಲಿಯೇ ಇದ್ದೇನೆ ಎಂದು ಸ್ಪಷ್ಟಪಡಿಸಿದರು.
ಪಕ್ಷದಲ್ಲಿ ಅಸಮಾಧಾನ ಇದ್ದದ್ದು ಸತ್ಯ. ಆದರೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ನಮ್ಮ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಎಲ್ಲವೂ ಬಗೆಹರಿದಿದೆ. ರಾಹುಲ್ ಗಾಂಧಿ ಅವರು ಎಲ್ಲ ಸಮಸ್ಯೆ ಬಗೆಹರಿಸಿದ ಬಳಿಕವೂ ಪಕ್ಷ ಬಿಡುವ ಅನಿವಾರ್ಯತೆ ನನಗೆ ಇಲ್ಲ. ಆದರೆ ನನ್ನ ಘನತೆಗೆ ಚ್ಯುತಿ ತರಲು ನಮ್ಮ ಕಾಂಗ್ರೆಸ್ ಪಕ್ಷದವರೇ ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಪಕ್ಷದ ಪ್ರಭಾವಿ ನಾಯಕರೊಬ್ಬರು ಈ ಷಡ್ಯಂತ್ರದ ಹಿಂದೆ ಇದ್ದಾರೆ ಎಂದು ಆರೋಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ