ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ಸ್ಫೋಟಕ ಟ್ವಿಸ್ಟ್!

Published : Jun 09, 2021, 12:37 PM ISTUpdated : Jun 09, 2021, 01:01 PM IST
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ಸ್ಫೋಟಕ ಟ್ವಿಸ್ಟ್!

ಸಾರಾಂಶ

* ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ಸ್ಫೋಟಕ ಟ್ವಿಸ್ಟ್..! * ಮತ್ತೆ ಎಸ್ ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿ ರಜೆ ವಿಸ್ತರಣೆ * ಮತ್ತೆ 20 ದಿನ ರಜೆ ತೆಗೆದುಕೊಂಡಿರುವ ಸೌಮೆಂದು ಮುಖರ್ಜಿ

ಬೆಂಗಳೂರು(ಜೂ.09): ದಿನೇ ದಿನೇ ಮಹತ್ವದ ಬೆಳವಣಿಗೆಗಳ ಮೂಲಕ ಇಡೀ ರಾಜ್ಯದ ಗಮನ ಸೆಳೆದಿರುವ ರಮೇಶ್ ಜಾರಕಿಹೊಳಿ ಸಿಡಿ ಕೇಸ್‌ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಹೌದು ತನಿಖೆ ನಡೆಸುತ್ತಿರುವ ಎಸ್‍ಐಟಿ ಮುಖ್ಯಸ್ಥರೇ ದೀರ್ಘ ರಜೆಯ ಮೇಲೆ ತೆರಳಿದ್ದು, ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಎಸ್‌ಐಟಿ ನಡೆಸುತ್ತಿದೆ. ಆದರೀಗ ಈ ಎಸ್‌ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿ ತಮ್ಮ ರಜೆಯನ್ನು 20 ದಿನಗಳವರೆಗೆ ವಿಸ್ತರಿಸಿದ್ದಾರೆ. ಈ ಮೂಲಕ ಮುಖ್ಯಸ್ಥರಿಲ್ಲದೇ ಸಂಸ್ಥೆ ತನಿಖೆ ನಡೆಸುವಂತಾಗಿದೆ. 

ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಆರೋಪಿಗಳಿಗೆ ಜಾಮೀನು

ಎಸ್‌ಐಟಿ ಮುಖ್ಯಸ್ಥರ ರಜೆ ಹಲವು ವದಂತಿಗಳನ್ನು ಹುಟ್ಟು ಹಾಕಿದೆ. ಅನಾರೋಗ್ಯ ಕಾರಣ ನೀಡಿ ಸೌಮೆಂದು ಮುಖರ್ಜಿ ಸುಧೀರ್ಘ ರಜೆಗೆ ಹೋಗಿದ್ದಾರಾದರೂ, ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಒತ್ತಡ ಸಹಿಲಾರದೇ ರಜೆ ಮೇಲೆ ತೆರಳಿದ್ರಾ..? ಎಂಬ ಅನುಮಾನ ಮೂಡಿದೆ. ಅಲ್ಲದೇ ಇಡೀ ಪ್ರಕರಣ ಬೇರೆ ರೀತಿ ಸಾಗುತ್ತಾ ಇದೆ, ಹೀಗಿರುವಾಗ ಇದೇ ವಿಚಾರಕ್ಕೆ ಹೊರನಡೆದ್ರಾ..? ಎಂಬ ಮಾತುಗಳೂ ಸದ್ದು ಮಾಡಿವೆ. 

ಅದೇನಿದ್ದರೂ ಸೌಮೆಂದು ಮರಳಿ ಬಂದ ಬಳಿಕವಷ್ಟೇ ಈ ಎಲ್ಲಾ ಅನುಮಾನಗಳಿಗೆ ಉತ್ತರ ಸಿಗಲಿದೆ. ಸದ್ಯ ಅವರ ಅನುಪಸ್ಥಿತಿಯಲ್ಲಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತನಿಖೆಯ ಜವಾಬ್ದಾರಿ ಹೊತ್ತಿದ್ದಾರೆ.

'ಎಲ್ಲಾ ಸರಿ ಹೋಗಲಿ, ಕುಟುಂಬದೊಂದಿಗೆ ಮಾತಾಡಲ್ಲ' ಯುವತಿ ಸ್ಪಷ್ಟನೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ
ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ