
ಬೆಂಗಳೂರು: ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಯನ್ನು ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ನಾಯಕರೊಂದಿಗೆ ಸಮಾಲೋಚಿಸಿದ ನಂತರವೇ ಆಯ್ಕೆ ಮಾಡಲಾಗಿದೆ.
ಹೈಕಮಾಂಡ್ ಸೂಚನೆಯಂತೆ ನಾನು ಚುನಾವಣೆ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸೂಚನೆಯಂತೆ ಬಳ್ಳಾರಿ ಲೋಕಸಭಾ ಉಪ ಚುನಾವಣೆ ಪ್ರಚಾರಕ್ಕೆ ತೆರಳುತ್ತೇನೆ. ಆದರೆ, ‘ನಾನು ನಾಯಕ’ ಎಂದು ಮಾಧ್ಯಮಗಳ ಮುಂದೆ ಎದೆ ಉಬ್ಬಿಸಿಕೊಂಡು ಹೋದರೆ ಸಾಲದು.
ಕ್ಷೇತ್ರದಲ್ಲಿ ರಂಗಕ್ಕೆ ಇಳಿದು ಪ್ರಚಾರ ನಡೆಸಬೇಕು. ಅದನ್ನು ನಾನು ಮಾಡುತ್ತೇನೆ ಎಂದು ಪರೋಕ್ಷವಾಗಿ ಸಚಿವ ಡಿ.ಕೆ.ಶಿವಕುಮಾರ್ಗೆ ಟಾಂಗ್ ನೀಡಿದರು. ಬಳ್ಳಾರಿಗೆ ಸಂಬಂಧಿಸಿದಂತೆ ಕಾಂಗ್ರೆಸ್ನಲ್ಲಿ ಭಿನ್ನಾಭಿಪ್ರಾಯವಿಲ್ಲ. ಹೈಕಮಾಂಡ್ ಸೂಚಿಸಿರುವ ಅಭ್ಯರ್ಥಿ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ