
ಬೆಂಗಳೂರು(ಜೂ.02): ದೂರುದಾರ ಮತ್ತು ಆರೋಪಿಗಳು ರಾಜಿ ಮೂಲಕ ಅತ್ಯಾಚಾರ ಪ್ರಕರಣವನ್ನೂ ಮುಕ್ತಾಯಗೊಳಿಸಬಹುದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಮಹಿಳೆಯೊಬ್ಬರು ತಮ್ಮ ಕುಟುಂಬದ ನಾಲ್ವರು ಸದಸ್ಯರ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸಿದೆ.
ಪ್ರಕರಣದಲ್ಲಿ ಆರೋಪಿಗಳಾಗಿದ್ದ ಬೆಂಗಳೂರಿನ ಬ್ಯಾಡರಹಳ್ಳಿ ನಿವಾಸಿಗಳಾದ ಕೆ.ಸತೀಶ್, ಶ್ರೀನಿವಾಸ್, ಕೋಕಿಲ ಮತ್ತು ಮಮತಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
ಹೈದರಾಬಾದ್: ಪತಿಯೊಂದಿಗೆ ಅನೈತಿಕ ಸಂಬಂಧ ಶಂಕೆ: ಮಹಿಳೆ ಮೇಲೆ ಐವರಿಂದ ರೇಪ್ ಮಾಡಿಸಿ ವಿಡಿಯೋ ಚಿತ್ರೀಕರಿಸಿದ ಪತ್ನಿ
ಮಹಿಳೆಯೊಬ್ಬರು 2022ರ ಫೆ.16ರಂದು ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಿಸಿ, ಸತೀಶ್ ವಿರುದ್ಧ ಅತ್ಯಾಚಾರ ಹಾಗೂ ಉಳಿದ ಮೂವರು ಆರೋಪಿಗಳ ವಿರುದ್ಧ ಜೀವ ಬೆದರಿಕೆ, ಅವಮಾನ ಪಡಿಸಿದ ಮತ್ತು ವಸೂಲಿ ಮಾಡಿದ ಆರೋಪ ಮಾಡಿದ್ದರು. ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಈ ಪ್ರಕರಣ ರದ್ದುಪಡಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ