ರೇಶನ್‌ ಕಾರ್ಡುದಾರರೇ ಎಚ್ಚರ..!

Kannadaprabha News   | Asianet News
Published : Dec 13, 2020, 07:53 AM IST
ರೇಶನ್‌ ಕಾರ್ಡುದಾರರೇ ಎಚ್ಚರ..!

ಸಾರಾಂಶ

ರೇಶನ್‌ ಕಾರ್ಡುದಾರರೇ ಎಚ್ಚರ .. ರಾಜ್ಯದಲ್ಲಿ ಲಕ್ಷಾಂತರ ಸಮಖ್ಯೆಯಲ್ಲಿ ಪಡಿತರ ಪಡೆಯುವ ರೇಶನ್ ಕಾರ್ಡುದಾರರು ಇಲ್ಲೊಮ್ಮೆ ಗಮನಿಸಿ

ಬೆಂಗಳೂರು (ಡಿ.13): ಅನ್ನಭಾಗ್ಯ ಯೋಜನೆಯಡಿ ಸಿಗುವ ಆಹಾರ ಧಾನ್ಯಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಹಣಕ್ಕಾಗಿ ಮಾರಾಟ ಮಾಡುವ ಫಲಾನುಭವಿಗಳ ಪಡಿತರ ಚೀಟಿ ಆರು ತಿಂಗಳು ಅಮಾನತು ಆಗಲಿದೆ.

ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ಹೊರಡಿಸಿದ್ದು, ಅಕ್ರಮವಾಗಿ ಪಡಿತರ ಆಹಾರ ಧಾನ್ಯ ಮಾರಾಟಕ್ಕೆ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ತಿಂಗಳು ಉಚಿತವಾಗಿ ಹಂಚಿಕೆಯಾಗುವ ಅಕ್ಕಿಯನ್ನು ಫಲಾನುಭವಿಗಳು ಹಣಕ್ಕೆ ಮಾರಾಟ ಮಾಡುತ್ತಿರುವ ಪ್ರಕರಣಗಳು ಇಲಾಖೆ ಗಮನಕ್ಕೆ ಬಂದಿವೆ. ಹೀಗಾಗಿ ಅನ್ನಭಾಗ್ಯದ ಅಕ್ಕಿ ಮಾರಾಟ ಮಾಡಿ ಸಿಕ್ಕಿಬೀಳುವ ಫಲಾನುಭವಿಯ ಪಡಿತರ ಚೀಟಿ ಆರು ತಿಂಗಳು ಅಮಾನತು ಮಾಡಿ ಹಾಗೂ ಮಾರುಕಟ್ಟೆದರದಲ್ಲಿ ಅಕ್ಕಿಯನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗುವುದು ಎಂದು ಇಲಾಖೆ ಆದೇಶದಲ್ಲಿ ಎಚ್ಚರಿಕೆ ನೀಡಿದೆ.

ಹೊಸ ರೇಶನ್‌ ಕಾರ್ಡ್‌ ವಿತರಣೆ ಮತ್ತೆ ಶುರು ...

ಕೇಂದ್ರವು ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ಅಕ್ಕಿಗೆ 30 ರು.ನಂತೆ ಖರೀದಿಸಿ ರಾಜ್ಯಕ್ಕೆ 3 ರು.ಗೆ ಅಕ್ಕಿ ನೀಡುತ್ತಿದೆ. ಪ್ರತಿ ತಿಂಗಳು ರಾಜ್ಯಕ್ಕೆ 2.17 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿ ಸರಬರಾಜು ಮಾಡುತ್ತಿದೆ. ಹಾಗಾಗಿ,ಕೇಂದ್ರ ಸಹಕಾರದೊಂದಿಗೆ ಸರ್ಕಾರವು ಆಹಾರ ಧಾನ್ಯ ವಿತರಣೆ ಮಾಡುತ್ತಿದೆ. ರಾಜ್ಯದಲ್ಲಿ 1,17,01,012 ಬಿಪಿಎಲ್‌, 10,92,580 ಅಂತ್ಯೋದಯ ಹಾಗೂ 21,05,000 ಎಪಿಎಲ್‌ ಕಾರ್ಡ್‌ ಸೇರಿ ಒಟ್ಟು 1,48,98,592 ಕಾರ್ಡ್‌ಗಳಿವೆ. ಪ್ರತಿ ತಿಂಗಳು 19,972 ನ್ಯಾಯಬೆಲೆ ಅಂಗಡಿಗಳಿಂದ ಪ್ರತಿ ಸದಸ್ಯನಿಗೆ 5 ಕೆಜಿ ಅಕ್ಕಿ ಹಾಗೂ ಪ್ರತಿ ಕುಟುಂಬಕ್ಕೆ 2 ಕೆಜಿ ಗೋಧಿ ವಿತರಿಸಲಾಗುತ್ತಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Discover Koppal: ವಿಶ್ವದ ಗಮನ ಸೆಳೆಯಲಿದೆ ಹಿರೇಬೆಣಕಲ್: ಡಿಸ್ಕವರ್ ಕೊಪ್ಪಳಕ್ಕೆ ಡಿಸಿ ವಿದ್ಯುಕ್ತ ಚಾಲನೆ
Breaking News: ಕೋಮುದ್ವೇಷ ಭಾಷಣ ಆರೋಪ: ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎಫ್‌ಐಆರ್!