ಸಾವಿರ ಕಂಬ ಬಸದಿಗೆ ರವೀನಾ ಟಂಡನ್‌ ಪುತ್ರಿಯಿಂದ ಆನೆ ಗಿಫ್ಟ್‌!

Published : Aug 30, 2025, 11:21 AM IST
Raveen tondon daughter

ಸಾರಾಂಶ

ಬಾಲಿವುಡ್ ತಾರೆ ರವೀನಾ ಟಂಡನ್ ಮತ್ತು ಅವರ ಪುತ್ರಿ ರಾಶಾ ತಾದಾನಿ ಮೂಡುಬಿದಿರೆಯ ಸಾವಿರ ಕಂಬದ ಬಸದಿಗೆ ಯಾಂತ್ರೀಕೃತ ಐರಾವತವನ್ನು ಕೊಡುಗೆಯಾಗಿ ನೀಡಿದ್ದಾರೆ. ಪೇಟಾ ಇಂಡಿಯಾದ ಪ್ರೇರಣೆಯಿಂದ ಈ ಕೊಡುಗೆ ನೀಡಲಾಗಿದೆ. 

ಮೂಡುಬಿದಿರೆ: (ದಕ್ಷಿಣ ಕನ್ನಡ): ಯಾಂತ್ರೀಕೃತ ಐರಾವತವನ್ನು ಜೈನಕಾಶಿ ಮೂಡುಬಿದಿರೆಯ ಐತಿಹಾಸಿಕ ಸಾವಿರ ಕಂಬದ ಬಸದಿಗೆ ಬಾಲಿವುಡ್ ತಾರೆ ರವೀನಾ ಟಂಡನ್ ಮತ್ತು ಆಕೆಯ ಪುತ್ರಿ ರಾಶಾ ತಾದಾನಿ ಕೊಡುಗೆಯಾಗಿ ನೀಡಿದರು.

ಪಳಗಿಸಿದ ಆನೆಗಳನ್ನು ಬಳಸುವುದರಿಂದ ಕಾಡಿನ ಸಹಜ ಬದುಕನ್ನು ಕಸಿದುಕೊಂಡು ಹಿಂಸೆ ನೀಡಿದಂತಾಗುತ್ತದೆ ಎಂದು ಅದರ ವಿರುದ್ಧ ನೈಜ ಆನೆಗಳನ್ನೇ ಹೋಲುವ ಮೆಕ್ಯಾನಿಕಲ್ ಆನೆಗಳನ್ನು ಪ್ರೋತ್ಸಾಹಿಸಿ ಎನ್ನುತ್ತಿರುವ ಪೇಟಾ ಇಂಡಿಯಾದ ಮುಂಬೈ ಮೂಲದ ಪ್ರೇರಣೆಯಿಂದ ಬಾಲಿವುಡ್ ತಾರಾ ಕುಟುಂಬದ ಕೊಡುಗೆಯಾಗಿ ಈ ಐರಾವತ ಒದಗಿ ಬಂದಿದೆ.

ಇದನ್ನೂ ಓದಿ: ನಾಗರಹೊಳೆಯಲ್ಲಿ ಸಸಿ ನೆಟ್ಟು ಪರಿಸರ ಕಾಳಜಿ ಮೆರೆದ ರವೀನಾ ಟಂಡನ್

ಜೈನಕಾಶಿಯಲ್ಲಿ ಚಾತುರ್ಮಾಸನಿರತ 108 ಗುಲಾಬ್ ಭೂಷಣ ಮುನಿ ಮಹಾರಾಜರು ನೂತನ ಐರಾವತವನ್ನು ಅನಾವರಣಗೊಳಿಸಿದರು. ಮೆಕ್ಯಾನಿಕಲ್ ಐರಾವತ ದೇಶದಲ್ಲೇ ಮೊದಲ ಬಾರಿಗೆ ಜೈನ ಬಸದಿಗೆ ಬಂದಂತಾಗಿದೆ.

 3 ಮೀ. ಎತ್ತರ, 800 ಕೆ.ಜಿ. ಭಾರವಾಗಿದ್ದು ರಬ್ಬರ್, ಫೈಬರ್, ಮೆಟಲ್, ಮೆಶ್, ಫೋಮ್, ಕಬ್ಬಿಣ ಹಾಗೂ ಐದು ಮೋಟಾರುಗಳ ನೆರವಿನಿಂದ ನಿರ್ಮಿಸಲಾಗಿದೆ. ವಿದ್ಯುತ್ ಸಂಪರ್ಕ ನೀಡಿ ಅದನ್ನು ನೈಜ ಆನೆಯಂತೆ ಬಳಸಿಕೊಳ್ಳಲು ಸಾಧ್ಯವಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌