
ತುಮಕೂರು[ಡಿ.31‘]: ಕೆಪಿಸಿಸಿ ಅಧ್ಯಕ್ಷ ಪಟ್ಟತಾನಾಗಿಯೇ ಒಲಿದು ಬಂದರೆ ನಿರ್ವಹಿಸುವ ಇಂಗಿತವನ್ನು ಮಾಜಿ ಸಂಸದ ಮುದ್ದಹನುಮೇಗೌಡ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸಲ್ಲಿ ಐದೇ ನಿಮಿಷದಲ್ಲಿ ಟೋಪಿ ತೆಗೆದುಬಿಡ್ತಾರೆ: ಡಿಕೆಶಿ
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ 10 ವರ್ಷ ಕಾಲ ಕೆಲಸ ಮಾಡಿದ ಅನುಭವ ಇದೆ. ಈ ಅನುಭವದ ಆಧಾರದ ಮೇಲೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕೊಟ್ಟರೂ ಸುಲಭವಾಗಿ ನಿರ್ವಹಿಸಿಕೊಂಡು ಹೋಗುತ್ತೇನೆ ಎಂದರು. ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಮಾಧ್ಯಮದಲ್ಲಿ ನನ್ನ ಹೆಸರು ಬಂದಿದೆ ಅಷ್ಟೇ. ನಾನು ಆಕಾಂಕ್ಷಿತನಾಗಲು ಅದೇನು ಅಧಿಕಾರವಲ್ಲ, ಅದೊಂದು ಜವಾಬ್ದಾರಿ. ಆ ಜವಾಬ್ದಾರಿಯನ್ನು ಯಾಕೆ, ಯಾರಿಗೆ, ಯಾವಾಗ ಕೊಡಬೇಕೆಂದು ನಿರ್ಧರಿಸುವುದು ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದರು.
ಅಧ್ಯಕ್ಷ ಪಟ್ಟತಾನಾಗಿಯೇ ಒಲಿದು ಬಂದರೆ ಯಾವ ರಾಜಕಾರಣಿಯೂ ಬೇಡ ಅನ್ನುವುದಿಲ್ಲ. ಆದರೆ, ಹೈಕಮಾಂಡ್ ಮನಸ್ಸಿನಲ್ಲಿ ಏನಿದ ಎಂಬುವುದು ಗೊತ್ತಿಲ್ಲ. ಅವರ ಯಾವುದೇ ನಿರ್ಧಾರವನ್ನು ನಾವು ಸ್ವಾಗತಿಸುವುದಾಗಿ ತಿಳಿಸಿದರು.
ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ: ಅಲ್ಲಂ ವೀರಭದ್ರಪ್ಪ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ