ನಾಲ್ವರು ಕಾಂಗ್ರೆಸ್ ಅತೃಪ್ತ ಶಾಸಕರು ಅನರ್ಹ?

Published : Feb 08, 2019, 11:39 AM ISTUpdated : Feb 08, 2019, 11:50 AM IST
ನಾಲ್ವರು ಕಾಂಗ್ರೆಸ್ ಅತೃಪ್ತ ಶಾಸಕರು ಅನರ್ಹ?

ಸಾರಾಂಶ

ಕರ್ನಾಟಕ ಸಂಸತ್ ವಿಸ್ತರಣೆಯಾದ ಬಳಿಕ ಅತೃಪ್ತರ ಗುಂಪು ಸೃಷ್ಟಿಯಾಗಿದ್ದು, ಹಲವು ರೀತಿಯ ಪ್ರಯೋಗಗಳಿಗೂ ಜಗ್ಗದ ಇವರ ವಿರುದ್ಧ ಅನರ್ಹತೆ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ಮುಂದಾಗಿದೆ. 

ಬೆಂಗಳೂರು :  ಸತತ ನೋಟಿಸ್, ವಿಪ್‌ಗಳಿಗೂ ಜಗ್ಗದೇ ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಳ್ಳುತ್ತಿರುವ ಅತೃಪ್ತ ಶಾಸಕರ ಸದಸ್ಯತ್ವ ಅನರ್ಹತೆಯ ಕ್ರಮಕ್ಕೆ ಕಾಂಗ್ರೆಸ್ ಸಂಪೂರ್ಣ ಸಜ್ಜಾಗಿದೆ. 

ಹಲವು ದಿನಗಳಿಂದ ಸರ್ಕಾರದ ವಿರುದ್ಧವೇ ಸಮರ ಸಾರುತ್ತಿರುವ ನಾಲ್ವರು ಅತೃಪ್ತ ಶಾಸಕರ ವಿರುದ್ಧ ಅನರ್ಹತೆ ಅಸ್ತ್ರ ಪ್ರಯೋಗಿಸಲು ನಿರ್ಧಾರ ಮಾಡಲಾಗಿದೆ. 

ಬಜೆಟ್ ಮಂಡನೆಗೂ ಮುನ್ನ ಅತೃಪ್ತರ ರಾಜೀನಾಮೆ ?

ರಮೇಶ್  ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಡಾ. ಉಮೇಶ್ ಜಾಧವ್, ಬಿ. ನಾಗೇಂದ್ರ ವಿರುದ್ಧ ಅಸ್ತ್ರ ಪ್ರಯೋಗಿಸಲು ನಿರ್ಧರಿಸಲಾಗಿದೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. 

ದೋಸ್ತಿ ಸರ್ಕಾರ ಉಳಿಸಲು 5 ಸಚಿವರ ರಾಜೀನಾಮೆ ?

ಈ ಸಭೆಗೆ ಹಾಜರಾದರೇ ಬಚಾವ್ ಆಗುತ್ತಾರೆ.  ಇಲ್ಲದಿದ್ದರೆ ಕ್ರಮ ಖಚಿತ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಡಕ್ ಎಚ್ಚರಿಕೆಯನ್ನು ರವಾನಿಸಿದ್ದರೂ ಬಗ್ಗದ ನಾಲ್ವರ ವಿರುದ್ಧ ಕ್ರಮ ಮುಂದಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ