ಜಾತಿ ಗಣತಿ ವರದಿ ಪುನರ್‌ ಪರಿಶೀಲನೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

Published : Dec 24, 2022, 02:00 AM IST
ಜಾತಿ ಗಣತಿ ವರದಿ ಪುನರ್‌ ಪರಿಶೀಲನೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಸಾರಾಂಶ

ಆಯೋಗದಿಂದ ಮರುಪರಿಶೀಲನೆ ವರದಿ ಬಂದ ಬಳಿಕ ಬಿಡುಗಡೆ: ಸಚಿವ ಕೋಟ ಹೇಳಿಕೆ, ಜಾತಿ ಗಣತಿ ವರದಿ ಈವರೆಗೂ ಬಿಡುಗಡೆ ಮಾಡದ್ದಕ್ಕೆ ಕೆ.ಪಿ.ನಂಜುಂಡಿ ವಿಶ್ವಕರ್ಮ ಆಕ್ಷೇಪ

ವಿಧಾನ ಪರಿಷತ್‌(ಡಿ.24): ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ-2015’ಯನ್ನು (ಜಾತಿ ಜನಗಣತಿ) ಪುನರ್‌ ಪರಿಶೀಲಿಸುವ ಅಗತ್ಯವಿದೆ ಎಂದು ಹಿಂದುಳಿದ ವರ್ಗಗಳ ಆಯೋಗ ಹೇಳಿದ್ದು, ಪುನರ್‌ ಪರಿಶೀಲನಾ ವರದಿ ಬಂದ ಕೂಡಲೇ ಅದರ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಚ್‌.ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದಾಗ ಈ ವರದಿಯನ್ನು ಸಿದ್ಧಪಡಿಸಲಾಗಿದೆ. ಆದರೆ, ಸರ್ಕಾರಕ್ಕೆ ಸಲ್ಲಿಸಿಲ್ಲ. ಆಯೋಗ ಹಾಲಿ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಅವರು ಈ ವರದಿಯ ಪುನರ್‌ ಪರಿಶೀಲನೆ ಅಗತ್ಯವಿದೆ ಎಂದು ಹೇಳಿದ್ದಾರೆ. ಹಾಗಾಗಿ ಅವರು ಪುನರ್‌ ಪರಿಶೀಲಿಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ಕೂಡಲೇ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಜಾತಿಗಣತಿ ವರದಿ ಕಾಂಗ್ರೆಸ್‌ ಸೋರಿಕೆ ಮಾಡಿರಲಿಲ್ಲವೇ?: ಸುಧಾಕರ್‌ ವಾಗ್ದಾಳಿ

ಸರ್ಕಾರದ ಉತ್ತರಕ್ಕೆ ಸಮಾಧಾನಗೊಳ್ಳದ ಕೆ.ಪಿ.ನಂಜುಂಡಿ ಅವರು, 162 ಕೋಟಿ ರು. ವೆಚ್ಚ ಮಾಡಿ ಸಿದ್ಧಪಡಿಸಿರುವ ವರದಿ ಬಿಡುಗಡೆಗೆ ಮೀನಾಮೇಷ ಎಣಿಸುತ್ತಿರುವುದಕ್ಕೆ ಕಾರಣವೇನು? ಸಮಾಜದಲ್ಲಿ ವಿಶ್ವಕರ್ಮ ಸೇರಿದಂತೆ ಹಿಂದುಳಿದ, ತುಳಿತಕ್ಕೆ ಒಳಗಾದ ಹಲವು ಸಮುದಾಯಗಳಿದ್ದು ಅವುಗಳು ತಮ್ಮ ನೈಜ ಜನಸಂಖ್ಯೆಯನ್ನು ತಿಳಿದುಕೊಂಡು ಅದರ ಆಧಾರದ ಮೇಲೆ ಅಭಿವೃದ್ಧಿಗೆ ಅನುದಾನ, ಸೌಲಭ್ಯಗಳನ್ನು ಬಯಸುವುದು ಅವರವರ ಹಕ್ಕಲ್ಲವೇ? ಎಷ್ಟುದಿನಗಳಲ್ಲಿ ವರದಿ ಪುನರ್‌ ಪರಿಶೀಲಿಸಿ ವರದಿ ನೀಡಲಾಗುತ್ತದೆ ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು. ಇಲ್ಲದಿದ್ದರೆ ನಾನು ಬಾವಿಗಿಳಿದು ಧರಣಿ ಕೂರಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದಕ್ಕೆ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌ ಸೇರಿದಂತೆ ಕಾಂಗ್ರೆಸ್‌ನ ಇತರೆ ಸದಸ್ಯರೂ ದನಿಗೂಡಿಸಿದರು.

ಇದಕ್ಕೆ ಸಚಿವರು, ಆಯೋಗ ವರದಿಯನ್ನು ಪುನರ್‌ ಪರಿಶೀಲಿಸಿ ಸಲ್ಲಿಸಿದ ಕೂಡಲೇ ಅದಕ್ಕೊಂದು ಅಂತಿಮ ರೂಪ ನೀಡಿ ಬಿಡುಗಡೆ ಮಾಡಲು ಕ್ರಮ ವಹಿಸುವ ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಏರ್‌ಪೋರ್ಟ್‌ ಪಿಕ್-ಅಪ್ ನಿಯಮ ಸಡಿಲಿಕೆ: ಫ್ರೀ ಪಾರ್ಕಿಂಗ್ 15 ನಿಮಿಷಕ್ಕೆ ವಿಸ್ತರಣೆ!
ಬೇರೆಯದನ್ನು ಬಿಟ್ಟು, 120 ಅಡಿಕೆ ಮರಗಳನ್ನು ಅರಣ್ಯ ಇಲಾಖೆ ಕಡಿದಿದ್ದು ಯಾಕೆ? ಅನಂತಮೂರ್ತಿ ಹೆಗಡೆ ಆಕ್ರೋಶ