
ರಾಯಚೂರು (ಮಾ.20): ಜಿಲ್ಲೆಯಲ್ಲಿ ಮತ್ತೆ ಗರಿಷ್ಠ ತಾಪಮಾನ ಬುಧವಾರ ದಾಖಲಾಗಿದೆ. 42.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, ರಾಜ್ಯದಲ್ಲೇ ಅತ್ಯಧಿಕ ತಾಪಮಾನವಾಗಿದೆ.
ಬೇಸಿಗೆಯ ಬಿರುಬಿಸಿಲಿನ ಹೊಡೆತ ಆರಂಭಗೊಂಡಿದೆ. ಬಿಸಿಲ ನಾಡಿನಾದ್ಯಂತ ಉಷ್ಣಗಾಳಿಯ ಪರಿಣಾಮ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಮಂಗಳವಾರ ಕಲಬುರಗಿಯಲ್ಲಿ 42.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿತ್ತು. ಬುಧವಾರವೂ ಸಹ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗರಿಷ್ಠ ತಾಪಮಾನ ಮುಂದುವರೆದಿದೆ. ಇದರಿಂದಾಗಿ ಜಿಲ್ಲೆ ಜನರು ಬೆಳಗ್ಗೆಯಿಂದಲೇ ಸೂರ್ಯನ ತಾಪವನ್ನು ಅನುಭವಿಸುವಂತಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ತಾಪಮಾನದಿಂದಾಗಿ ಬಿಸಿಲೂರಿನ ಮಂದಿ ಕಂಗಾಲಾಗಿದ್ದು, ಮನೆಯನ್ನು ಬಿಟ್ಟು ಬರಲು ಹಿಂದೇಟು ಹಾಕುತ್ತಿದ್ದಾರೆ.
ಕಳೆದ 24 ಗಂಟೆಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ 42.7 ಡಿ.ಸೆ., ಬೀದರ್ ಮತ್ತು ಬಾಗಲಕೋಟೆಯಲ್ಲಿ 41.9 ಡಿ.ಸೆ, ಬೆಳಗಾವಿಯಲ್ಲಿ 41.8, ಕಲಬುರಗಿಯಲ್ಲಿ 41.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ರಾಜ್ಯದ 17 ಜಿಲ್ಲೆಗಳಲ್ಲಿ 40 ಡಿ.ಸೆ.ಗೂ ಅಧಿಕ ತಾಪಮಾನ ದಾಖಲುಗೊಂಡಿದೆ.
ಇದನ್ನೂ ಓದಿ: Raichur: ರಾಜ್ಯದಲ್ಲೆ ರಾಯಚೂರಿನಲ್ಲಿ ಗರಿಷ್ಠ ತಾಪಮಾನ ದಾಖಲು , ಆರಂಭದಲ್ಲೇ 41.4 ಡಿ.ಸೆ ಗರಿಷ್ಠ ಬೇಸಿಗೆಯ ತಾಪ!
ಉಷ್ಣಗಾಳಿ, ಕನಿಷ್ಠ ತಾಪಮಾನದ ಏರಿಕೆ ಹಾಗೂ ಆರ್ದ್ರತೆ ಪ್ರಮಾಣವು ಹೆಚ್ಚಾಗಿರುತ್ತಿರುವುದರಿಂದ ವಾತಾವರಣದಲ್ಲಿ 1 ರಿಂದ 2 ಡಿ.ಸೆ.ಬಿಸಿಲು ಜಾಸ್ತಿ ಯಾಗುತ್ತಿದೆ. ಬೇಸಿಗೆಯ ಬಿಸಿಲು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಡಳಿತ ಈಗಾಗಲೇ ಕಟ್ಟೆಚ್ಚರಿಕೆಯ ಸಂದೇಶ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ