
ಉಡುಪಿ (ಆ.24): ರಾಜ್ಯದಲ್ಲಿ ಸರ್ಕಾರದಿಂದ ಆಚರಿಸಲಾಗುವ ಜಯಂತಿಗಳ ಸಂಖ್ಯೆ ಹೆಚ್ಚಾಗಿದೆ ಎಂಬ ಭಾವನೆ ಇದೆ.
ಶುಕ್ರವಾರ ನಡೆಯಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಭೆಯಲ್ಲಿ ಜಯಂತಿಗಳ ಸಂಖ್ಯೆ ಕಡಿಮೆಗೊಳಿಸುವ ಬಗ್ಗೆ ವಿಸ್ತೃತ ಚರ್ಚೆ ಮಾಡುತ್ತೇವೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿ ಕನ್ನಡ ಮತ್ತು ಸಂಸ್ಕೃತಿ, ಯುವಜನ ಸೇವೆ, ಶಿಕ್ಷಣ ಹಾಗೂ ಸಂಬಂಧಿತ ಇತರೆ ಇಲಾಖೆಗಳು ಒಟ್ಟಾಗಿ ಹೆಚ್ಚು ಅರ್ಥಪೂರ್ಣವಾಗಿ ಜಯಂತಿಗಳ ಆಚರಣೆ ನಡೆಸಲು ಒತ್ತು ನೀಡುತ್ತೇವೆ.
ನಾರಾಯಣಗುರುಗಳ ಹೆಸರಲ್ಲಿ ಶೀಘ್ರ ನಿಗಮ: ಸಚಿವ ಸುನೀಲ್
ಸದ್ಯ ಸ್ವಾತಂತ್ರ್ಯದ ಅಮೃತ ಮಹೋತ್ಸವವೂ ನಡೆಯುತ್ತಿದ್ದು, ಇದನ್ನೂ ಸಂಭ್ರಮದಿಂದ ಆಚರಿಸಬೇಕಿದೆ. ಜನರಲ್ಲಿ ದೇಶಭಕ್ತಿಯ ವಾತಾವರಣ ನಿರ್ಮಿಸುವ ಕಾರ್ಯಕ್ರಮ ರೂಪಿಸುತ್ತೇವೆ. ಅಧಿವೇಶನದೊಳಗೆ ಈ ಕುರಿತ ರೂಪುರೇಷೆ ಅಂತಿಮಗೊಳಿಸಲಿದ್ದೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ