
ಬೆಂಗಳೂರು(ಜೂ.29): ಹಿಂದಿನ ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ಕೈಗೊಂಡಿದ್ದ ಎಲ್ಲ ಕಾಮಗಾರಿಗಳಿಗೂ ಹಣ ಬಿಡುಗಡೆಗೆ ತಡೆ ನೀಡಿದ್ದ ರಾಜ್ಯ ಸರ್ಕಾರ, ಇದೀಗ ಅಂತಹ ಮುಂದುವರೆದ ಕಾಮಗಾರಿಗಳಿಗೆ ಬಿಲ್ಲುಗಳ ನೈಜತೆ ಪರಿಶೀಲಿಸಿ ಇಲಾಖಾ ಸಚಿವರ ಅನುಮೋದನೆ ಪಡೆದು ಹಣ ಬಿಡುಗಡೆಗೆ ಆದೇಶಿಸಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಎಲ್ಲಾ ಇಲಾಖೆಗಳು ಹಾಗೂ ಅವುಗಳ ವ್ಯಾಪ್ತಿಯ ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಿ ಬಿಜೆಪಿ ಅಧಿಕಾರಾವಧಿಯಲ್ಲಿ ಕೈಗೊಂಡಿದ್ದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡದಂತೆ ಹಾಗೂ ಆರಂಭವೇ ಆಗದ ಕಾಮಗಾರಿಗಳನ್ನು ತಡೆ ಹಿಡಿದು ಮೇ 22ರಂದು ಆದೇಶಿಸಿತ್ತು. ಈ ಪೈಕಿ ಪ್ರಾರಂಭವಾಗದಿರುವ ಕಾಮಗಾರಿಗಳಿಗೆ ನೀಡಿದ್ದ ತಡೆಯನ್ನು ಯಥಾಸ್ಥಿತಿ ಮುಂದುವರೆಸಿದೆ. ಈಗಾಗಲೇ ಆರಂಭವಾಗಿರುವ ಅಥವಾ ಮುಂದುವರೆದ ಕಾಮಗಾರಿಗಳಿಗೆ ಬಿಲ್ಲುಗಳ ನೈಜತೆ ಹಾಗೂ ನಿಯಮಾನುಸಾರವಾಗಿದೆಯೇ ಎಂದು ಖಾತ್ರಿ ಪಡಿಸಿಕೊಂಡು ಹಣ ಬಿಡುಗಡೆ ಮಾಡಬೇಕು. ಹಣ ಬಿಡುಗಡೆಗೆ ಸಂಬಂಧಿಸಿದ ಇಲಾಖಾ ಸಚಿವರ ಅನುಮೋದನೆ ಪಡೆಯಬೇಕು ಎಂದು ಸೂಚಿಸಲಾಗಿದೆ.
ಇದು ಪಕ್ಕಾ ಶೇ.60 ಕಮಿಷನ್ ಸರ್ಕಾರ, ನಾವು ಕಾದು ನೋಡುತ್ತೇವೆ: ನಳಿನ್ ಕುಮಾರ್ ಕಟೀಲ್
ಅಲ್ಲದೆ ಎಲ್ಲಾ ಶಾಸನಬದ್ಧ ಪಾವತಿಗಳನ್ನು ಹಾಗೂ ಬಾಹ್ಯ ನೆರವಿನ ಮುಂದುವರೆದ ಯೋಜನೆಗಳಿಗೆ ಸಂಬಂಧಿಸಿದಂತೆ ಹಣ ಬಿಡುಗಡೆ, ಪಾವತಿಗಳನ್ನು ಮಾಡುವುದು. ಮುಂದುವರೆದ ಕಾರ್ಯಕ್ರಮಗಳ, ಯೋಜನೆಗಳಿಗೆ ಸರಕು ಮತ್ತು ಸೇವೆಗಳ ಸಂಗ್ರಹಣೆಗಳ ಸಂಬಂಧವೂ ಹಣ ಬಿಡುಗಡೆ ಮಾಡಬಹುದು ಎಂದು ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ