Renukaswamy Darshan Case: ದರ್ಶನ್ ಕೇಸ್‌ನಲ್ಲಿ ಬಿಗ್‌ ಅಪ್ಡೇಟ್, ಸುಪ್ರೀಂ ಕೋರ್ಟ್ ನಲ್ಲಿ ಹೀಗಂತ ಅರ್ಜಿ ಹಾಕೇಬಿಟ್ರು!

Published : Jun 23, 2026, 02:09 PM IST
Darshan

ಸಾರಾಂಶ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್, ತಮ್ಮ ಕಾನೂನು ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಈ ಹಿಂದೆ ಸುಪ್ರೀಂ ಕೋರ್ಟ್ ವಿಧಿಸಿದ್ದ ಕಠಿಣ ಷರತ್ತುಗಳನ್ನು ಸಡಿಲಿಸುವಂತೆ ಕೋರಿ, ಅವರು ಮತ್ತೆ ಸುಪ್ರೀಂ ಕೋರ್ಟ್‌ಗೆ ವಿಶೇಷ ಮಾರ್ಪಾಡು ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ, ಜೈಲಿನಿಂದ ಹೊರಬರಲು ತಮ್ಮ ಕಾನೂನು ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಇದೀಗ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ಹಿಂದೆ ಕೋರ್ಟ್ ನೀಡಿದ್ದ ಕಠಿಣ ಆದೇಶ ಹಾಗೂ ಷರತ್ತುಗಳನ್ನು ಮಾರ್ಪಾಡು ಮಾಡುವಂತೆ ಕೋರಿ ವಿಶೇಷ ಅರ್ಜಿ (Modification Petition) ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವೇನು? ದರ್ಶನ್ ಆಕ್ಷೇಪವೇನು?

ಕಳೆದ ಮೇ 15ರಂದು ಸುಪ್ರೀಂ ಕೋರ್ಟ್ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಒಂದು ಮಹತ್ವದ ಆದೇಶ ನೀಡಿತ್ತು. ಆ ಆದೇಶದ ಪ್ರಕಾರ, ಪ್ರಕರಣದ ವಿಚಾರಣಾ ನ್ಯಾಯಾಲಯದಲ್ಲಿ ಕನಿಷ್ಠ ಒಂದು ವರ್ಷದ ಅವಧಿಯೊಳಗೆ ಪ್ರಮುಖ 60 ಸಾಕ್ಷಿಗಳ ವಿಚಾರಣೆಯನ್ನು ಪೂರ್ಣಗೊಳಿಸಬೇಕು. ಈ ಒಂದು ವರ್ಷದ ಅವಧಿ ಮುಗಿಯುವವರೆಗೆ ನಟ ದರ್ಶನ್ ಮತ್ತೆ ಜಾಮೀನಿಗಾಗಿ ಅರ್ಜಿ ಸಲ್ಲಿಸುವಂತಿಲ್ಲ ಎಂಬ ಕಠಿಣ ಗಡುವನ್ನು ವಿಧಿಸಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್‌ನ ಈ ಆದೇಶದಿಂದಾಗಿ ತಮಗೆ ಸುದೀರ್ಘ ಕಾಲ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿರುವುದರಿಂದ, ದರ್ಶನ್ ಈಗ ಸುಪ್ರೀಂ ಕೋರ್ಟ್ ನೀಡಿದ್ದ ಮೇ 15ರ ಆದೇಶದ ಷರತ್ತುಗಳನ್ನು ಸಡಿಲಿಸುವಂತೆ ಮನವಿ ಮಾಡಿದ್ದಾರೆ.

ಅರ್ಜಿಯಲ್ಲಿ ದರ್ಶನ್ ಕೋರಿರುವ ಪ್ರಮುಖ ಅಂಶಗಳು:

ನಟ ದರ್ಶನ್ ಪರ ವಕೀಲರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಈ ಮಾರ್ಪಾಡು ಅರ್ಜಿಯಲ್ಲಿ ಪ್ರಮುಖವಾಗಿ ಎರಡು ರಿಯಾಯಿತಿಗಳನ್ನು ಕೋರಿದ್ದಾರೆ.

ಮರು ಜಾಮೀನು ಅರ್ಜಿ ಸಲ್ಲಿಸಲು ವಿಧಿಸಲಾಗಿರುವ ಒಂದು ವರ್ಷದ ಸುದೀರ್ಘ ಕಾಲಾವಕಾಶದ ಗಡುವನ್ನು ಗಣನೀಯವಾಗಿ ಕಡಿಮೆ ಮಾಡಬೇಕು.

ಒಂದು ವರ್ಷದಲ್ಲಿ 60 ಪ್ರಮುಖ ಸಾಕ್ಷಿಗಳ ವಿಚಾರಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಆದರೆ ಇಷ್ಟು ದೊಡ್ಡ ಸಂಖ್ಯೆಯ ಸಾಕ್ಷಿಗಳ ವಿಚಾರಣೆ ವಿಳಂಬವಾಗುವುದರಿಂದ, ಈ ಸಾಕ್ಷಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕು ಎಂದು ಅರ್ಜಿಯಲ್ಲಿ ವಿನಂತಿಸಲಾಗಿದೆ.

ಜಡ್ಜ್ ಕಚೇರಿಯಲ್ಲೇ ಇತ್ಯರ್ಥ ಸಾಧ್ಯತೆ?

ನಟ ದರ್ಶನ್ ಸಲ್ಲಿಸಿರುವ ಈ ತಿದ್ದುಪಡಿ ಅರ್ಜಿಯ ವಿಚಾರಣೆಯ ಅಧಿಕೃತ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಆದರೆ, ಕಾನೂನು ತಜ್ಞರ ಪ್ರಕಾರ ಈ ಅರ್ಜಿಯು ಮುಕ್ತ ನ್ಯಾಯಾಲಯದ ಪೀಠದ (Open Court Bench) ಮುಂದೆ ವಿಚಾರಣೆಗೆ ಬರಬಹುದು ಅಥವಾ ನ್ಯಾಯಾಧೀಶರ ಕಚೇರಿಯಲ್ಲೇ (Chamber) ಇತ್ಯರ್ಥವಾಗುವ ಸಾಧ್ಯತೆಯೂ ದಟ್ಟವಾಗಿದೆ.

ಕೋರ್ಟ್‌ನಿಂದ ವಿಧಿಸಲಾದ ಕಠಿಣ ನಿಯಮಗಳ ನಡುವೆಯೇ ದರ್ಶನ್ ಸುಪ್ರೀಂ ಕೋರ್ಟ್‌ಗೆ ಈ ಅರ್ಜಿ ಸಲ್ಲಿಸಿರುವುದು, ಅವರ ಬಿಡುಗಡೆಯ ಹಾದಿಗಾಗಿ ತಂತ್ರಜ್ಞರು ನಡೆಸುತ್ತಿರುವ ಮತ್ತೊಂದು ಹಾದಿಯನ್ನು ತೋರಿಸುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗೃಹಲಕ್ಷ್ಮಿಯರೇ ಮತ್ತೊಮ್ಮೆ ಅರ್ಜಿ ಹಾಕಲು ರೆಡಿಯಾಗಿ! ಇನ್ನೆರಡು ದಿನದಲ್ಲಿ ಪ್ರಕ್ರಿಯೆ ಆರಂಭ, ಈ ದಾಖಲೆಗಳು ರೆಡಿ ಇರಲಿ
ಇಂದಿನಿಂದ 3 ದಿನ ರಾಜ್ಯದಲ್ಲಿ ಉತ್ತಮ ಮಳೆಯ ಮುನ್ಸೂಚನೆ; ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್