ದರ್ಶನ್ ಜಾಮೀನು ರದ್ದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ, ಪೊಲೀಸರಿಗೆ ಸೂಚನೆ

Published : Aug 14, 2025, 05:38 PM IST
Karnataka Home Minister G Parameshwara (Photo/ANI)

ಸಾರಾಂಶ

ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತು ಡಿ ಗ್ಯಾಂಗ್ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕಾನೂನು ಪಾಲನೆಯ ಮಹತ್ವವನ್ನು ಒತ್ತಿ ಹೇಳಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತು ಡಿ ಗ್ಯಾಂಗ್ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. "ಕಾನೂನು ಎಲ್ಲರಿಗೂ ಒಂದೇ. ದೇಶದಲ್ಲಿ ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ನೆಲದ ಕಾನೂನನ್ನು ಎಲ್ಲರೂ ಗೌರವಿಸಬೇಕು. ಮುಂದಿನ ನ್ಯಾಯ ಹೋರಾಟ ಮಾಡಲು ಆರೋಪಿಗಳಿಗೆ ಅವಕಾಶ ಇದೆ, ಅದಕ್ಕೂ ದೇಶದ ಕಾನೂನಿನಲ್ಲಿ ಅವಕಾಶವಿದೆ. ನಾವು ಕಾನೂನನ್ನೇ ಪಾಲಿಸಬೇಕು" ಎಂದು ಅವರು ಹೇಳಿದ್ದಾರೆ.

ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ್ ಸೂಚನೆ

ನಟ ದರ್ಶನ್ ಜಾಮೀನು ರದ್ದಾದ ಬೆನ್ನಲ್ಲೇ ಬೆಳಗ್ಗೆ ಪೊಲೀಸ್ ಹಿರಿಯ ಅಧಿಕಾರಿಗಳು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಮಾಹಿತಿ ನೀಡಿದರು. ವಿಧಾನಸೌಧ ಲಾಂಜ್‌ನಲ್ಲಿ ನಡೆದ ಈ ಸಭೆಯಲ್ಲಿ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮುಂದುವರಿಯಲು ಸಚಿವರು ಸೂಚಿಸಿದರು. ಕೋರ್ಟ್ ಕೂಡಲೇ ಶರಣಾಗಬೇಕು ಎಂದು ಹೇಳಿದೆ. ಹಾಜರಾಗದೆ ಹೋದರೆ ಕೋರ್ಟ್ ವಾರೆಂಟ್ ಜಾರಿಗೆ ತರಲಿದೆ. ಆದ್ದರಿಂದ ಕಾನೂನಿನ ಪ್ರಕಾರ ಪ್ರತಿಕ್ರಿಯೆ ಏನಿದೆಯೋ ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಗೃಹ ಸಚಿವರು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

112 ಹುದ್ದೆ ನೇಮಕಾತಿ ಮುಂದುವರಿಕೆಗೆ ಕೆಪಿಎಸ್ಸಿಗೆ ನೀಡಿದ್ದ ಅನುಮತಿ ವಾಪಸ್!
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌