ರೇಣುಕಾಸ್ವಾಮಿ ಕೊಲೆ ಕೇಸ್‌: ಜೈಲಿಂದ ಮನೆಗೆ ಹೋಗಲು ವೈದ್ಯರ ಮೇಲೆ ಒತ್ತಡ ಹಾಕಿದ್ರಾ ನಟ ದರ್ಶನ್‌?

Published : Nov 26, 2024, 09:34 AM IST
ರೇಣುಕಾಸ್ವಾಮಿ ಕೊಲೆ ಕೇಸ್‌: ಜೈಲಿಂದ ಮನೆಗೆ ಹೋಗಲು ವೈದ್ಯರ ಮೇಲೆ ಒತ್ತಡ ಹಾಕಿದ್ರಾ ನಟ ದರ್ಶನ್‌?

ಸಾರಾಂಶ

ನಟ ದರ್ಶನ್‌ಗೆ ಆಪರೇಷನ್ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಹೇಳಿದ ಬೆನ್ನಲ್ಲೇ ಅನುಮಾನಗಳು ಎದ್ದಿವೆ. ಜೈಲಿನಿಂದ ಬೆಂಗಳೂರಿಗೆ ಹೋಗಲು ಕೊಲೆ ಆರೋಪಿ ದರ್ಶನ್‌ ವೈದ್ಯರ ಮೇಲೆ ಒತ್ತಡ ಹೇರಿದ್ರಾ?. ಬಳ್ಳಾರಿಯ ಬಿಮ್ಸ್ ವೈದ್ಯರ ಮೇಲೆ ಒತ್ತಡ ಹಾಕಿ ಅನಾರೋಗ್ಯದ ಬಗ್ಗೆ ಸುಳ್ಳು ವರದಿ ರೆಡಿ ಮಾಡಿಸಿದ್ರಾ ದರ್ಶನ್? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. 

ಬಳ್ಳಾರಿ(ನ.26):  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅನಾರೋಗ್ಯದ ಬಗ್ಗೆ ಹಲವು ಅನುಮಾನಗಳು ಎದ್ದಿವೆ. ಹೌದು, ಜಾಮೀನು ಸಿಕ್ಕೂ ಮೂರು ವಾರಗಳಾದರೂ ಇನ್ನೂ ದರ್ಶನ್‌ ಆಪರೇಷನ್ ಮಾಡಿಕೊಂಡಿಲ್ಲ. 

ನಟ ದರ್ಶನ್‌ಗೆ ಆಪರೇಷನ್ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಹೇಳಿದ ಬೆನ್ನಲ್ಲೇ ಅನುಮಾನಗಳು ಎದ್ದಿವೆ. ಜೈಲಿನಿಂದ ಬೆಂಗಳೂರಿಗೆ ಹೋಗಲು ಕೊಲೆ ಆರೋಪಿ ದರ್ಶನ್‌ ವೈದ್ಯರ ಮೇಲೆ ಒತ್ತಡ ಹೇರಿದ್ರಾ?. ಬಳ್ಳಾರಿಯ ಬಿಮ್ಸ್ ವೈದ್ಯರ ಮೇಲೆ ಒತ್ತಡ ಹಾಕಿ ಅನಾರೋಗ್ಯದ ಬಗ್ಗೆ ಸುಳ್ಳು ವರದಿ ರೆಡಿ ಮಾಡಿಸಿದ್ರಾ ದರ್ಶನ್? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. 

ದರ್ಶನ್‌ಗೆ ಮಧ್ಯಂತರ ಜಾಮೀನು ಯಾಕೆ ಕ್ಯಾನ್ಸಲ್ ಮಾಡಬೇಕು?ಕೋರ್ಟ್ ಹಾದಿ ತಪ್ಪಿಸಿದ್ದು ನಿಜವೇ?

ಪ್ರಭಾವಿ ಮಂತ್ರಿ ಒಬ್ಬರಿಂದ ಬಿಮ್ಸ್ ವೈದ್ಯರ ಮೇಲೆ ಒತ್ತಡ? ಹೇರಿಸಲಾಗಿದ್ಯಾ?. ಪ್ರಭಾವಿ ಮಂತ್ರಿ ಒಬ್ಬರ ಒತ್ತಡಕ್ಕೆ ಮಣಿದು ದರ್ಶನ್‌ಗೆ ಕೂಡಲೇ ಆಪರೇಷನ್ ಹಾಕಬೇಕು ಎಂದು ಬಿಮ್ಸ್ ವೈದ್ಯರು ವರದಿ ಕೊಟ್ರಾ?. ಅದೇ ವರದಿಯನ್ನ ದರ್ಶನ್ ಪರ ವಕೀಲರು ನ್ಯಾಯಾಲಕ್ಕೆ ಸಲ್ಲಿಸಿದ್ದರು.  

ಸ್ವಲ್ಪ ದಿನದಲ್ಲೇ ದರ್ಶನ್‌ಗೆ ಆಪರೇಷನ್ ಮಾಡದೇ ಹೊದ್ರೆ ಕಿಡ್ನಿ ಸಮಸ್ಯೆ, ಸ್ಟ್ರೋಕ್ ಆಗತ್ತೆ ಎಂದು ವಕೀಲರು ವಾದಿಸಿದ್ದರು. ಹೀಗಾಗಿ ನ್ಯಾಯಾಲಯ ದರ್ಶನ್‌ಗೆ ಆಪರೇಷನ್‌ ಮಾಡಿಸುವಂತೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈಗ ನೋಡಿದ್ರೆ ಬೇಲ್ ಸಿಕ್ಕು 3 ವಾರ ಕಳೆದ್ರೂ ಆಪರೇಷನ್ ಮಾತ್ರ ಇಲ್ಲ‌‌. 

ಕುಂಟುತ್ತಾ ಹೋಗಿ ಆಸ್ಪತ್ರೆಗೆ ದಾಖಲಾದ ನಟ ದರ್ಶನ್‌: ಯಾವ್ಯಾವ ಪರೀಕ್ಷೆ ಮಾಡಿಸುತ್ತಾರೆ ಗೊತ್ತಾ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ ಬೆನ್ನುಹುರಿ ಹಾಗೂ ಕಾಲಿಗೆ ಚಿಕಿತ್ಸೆ ಪಡೆಯುವ ಸಲುವಾಗಿ ಶುಕ್ರವಾರ ಬೆಂಗಳೂರಿನ ಬಿಜಿಎಸ್ ಗ್ಲೆನೆಗಲ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ತೂಗುದೀಪ ಕೋರ್ಟ್‌ನಿಂದ 6 ವಾರಗಳ ಕಾಲ ಜಾಮೀನು ಪಡೆದು ಬೆನ್ನು ನೋವಿಗೆ ಚಿಕಿತ್ಸೆ ಪಡೆದುಕೊಳ್ಳಲು ಬಳ್ಳಾರಿ ಜೈಲಿನಿಂದ ಹೊರಗೆ ಬಂದಿದ್ದಾರೆ. ಮೊನ್ನೆ ಬಳ್ಳಾರಿ ಜೈಲಿನಿಂದ ಕುಂಟುತ್ತಾ ಬೆನ್ನು ನೋವಿನಿಂದ ಬಳಲುತ್ತಾ ಹೊರಬಂದ ದರ್ಶನ್‌ನನ್ನು ಕಾರಿನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. 

ಸರ್ಜರಿ ಅಗತ್ಯ.. ಆಪರೇಷನ್ ಆಗದಿದ್ದರೆ ಭವಿಷ್ಯ ಅಪಾಯ: ದರ್ಶನ್‌ಗೆ ಸೋಮವಾರ ಸಂಕಟ!

ಇದಾದ ನಂತರ ನಿನ್ನೆ ದರ್ಶನ್ ತಮ್ಮ ಪುತ್ರ ವಿನೀಶ್ ಅವರ ಬರ್ತಡೇ ಅನ್ನು ಅದ್ಧೂರಿಯಾಗಿ ಆಚರಣೆ ಮಾಡಿದ್ದರು. ಜೊತೆಗೆ, ದರ್ಶನ ಅವರ ಎಲ್ಲ ದುಬಾರಿ ಕಾರುಗಳನ್ನು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸ್ವಚ್ಛಗೊಳಿಸಿ ಪೂಜೆ ಮಾಡಲಾಯಿತು. ಇದಾದ ನಂತರ ಇಂದು ಬೆನ್ನುನೋವಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಹೋಗಲು ನಿರ್ಧರಿಸಿದ್ದರು. ಇದರ ಬೆನ್ನಲ್ಲಿಯೇ ನಟ ದರ್ಶನ್ ಜಯನಗರದ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗೆ ಬರುವುದಾಗಿ ಕರೆ ಮಾಡಿ ಮಾಹಿತಿ ನೀಡಿದ್ದರಂತೆ. ಶುಕ್ರವಾರ ಮಾಧ್ಯಾಹ್ನ 1 ಗಂಟೆ ಒಳಗಾಗಿ ಆಸ್ಪತ್ರೆಗೆ ಬರುವುದಾಗಿಯೂ ತಿಳಿಸಿದ್ದರಂತೆ.  ಆದರೆ, ಕೊನೇ ಕ್ಷಣದಲ್ಲಿ ಮನೆಯಲ್ಲಿ ನಿರ್ಧಾರ ಬದಲಿಸಿದ್ದಾರೆ. ಬೆನ್ನು ನೋವಿಗೆ ನೇರವಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಬದಲಾಗಿ, ಮೊದಲು ತಪಾಸಣೆ ಮಾಡಿಸಿಕೊಂಡು ಫಿಸಿಯೋಥೆರಫಿ ಸೇರಿದಂತೆ ಇತರೆ ಚಿಕಿತ್ಸಾ ವಿಧಾನದ ಮೂಲಕ ಗುಣಪಡಿಸಬಹುದೇ ಎಂಬುದನ್ನು ಪ್ರಯತ್ನಿಸುತ್ತಾರೆ.  

ಯಾವ್ಯಾವ ಪರೀಕ್ಷೆ ಮಾಡಿಸುತ್ತಾರೆ ದರ್ಶನ್: 

ನಟ ದರ್ಶನ್ ಮಧ್ಯಾಹ್ನ 2.30ರ ನಂತರ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಗೆ ಬಂದಿದ್ದಾರೆ. ಇಂದು ಹಲವು ವೈದ್ಯಕೀಯ ಪರೀಕ್ಷೆ ನಡೆಸಿ ನಾಳೆಯೊಳಗೆ ದರ್ಶನ್ ಕುಟುಂಬಸ್ಥರಿಗೆ ವರದಿಯನ್ನು ನೀಡಲಾಗುತ್ತದೆ. ದರ್ಶನ್ ಗೆ ತೀವ್ರ ಬೆನ್ನುನೋವು ಕಾಡ್ತಿರೋ ಹಿನ್ನೆಲೆಯಲ್ಲಿ ಇಂದು ಇಸಿಜಿ, ಸ್ಕ್ಯಾನಿಂಗ್, ಬಿಪಿ, ಶುಗರ್, ರಕ್ತ ಪರೀಕ್ಷೆ, ಲಿವರ್ ಫಂಕ್ಷನ್ ಟೆಸ್ಟ್ (LFT) ಪರೀಕ್ಷೆಗಳನ್ನು ಮಾಡಿಸುವ ಸಾಧ್ಯತೆಯಿದೆ. ಮೊದಲಿಗೆ ಫಿಸಿಯೋಥೆರಪಿ ಹಾಗೂ ಔಷಧಿಯಿಂದ ಗುಣಪಡಿಸಲು ಮನವಿ ಮಾಡಲಾಗಿದೆ. ಫಿಸಿಯೋ ಥೆರಪಿಯಲ್ಲಿ ಬೆನ್ನುನೋವು ಗುಣವಾಗದಿದ್ದಲ್ಲಿ ಸರ್ಜರಿಗೆ ಕೊನೆ ಆಯ್ಕೆಯನ್ನು ಇಟ್ಟುಕೊಳ್ಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!