ಕಾರವಾರ: ಅಂಬೇಡ್ಕರ್ ಜಯಂತಿಗೆ ಗೈರಾದ ಜನಪ್ರತಿನಿಧಿಗಳು!

Published : Apr 15, 2025, 04:59 AM ISTUpdated : Apr 15, 2025, 06:46 AM IST
ಕಾರವಾರ: ಅಂಬೇಡ್ಕರ್ ಜಯಂತಿಗೆ ಗೈರಾದ ಜನಪ್ರತಿನಿಧಿಗಳು!

ಸಾರಾಂಶ

ಸಂಸತ್ತು, ವಿಧಾನಸೌಧದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಹೆಸರಿನಲ್ಲಿ ಭಾರಿ ಜಟಾಪಟಿ ನಡೆಸುವ ಜನಪ್ರತಿನಿಧಿಗಳು ಅದೇ ಬಾಬಾ ಸಾಹೇಬ ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳದೆ ಇರುವುದು ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ.

ಕಾರವಾರ (ಏ.15): ಸಂಸತ್ತು, ವಿಧಾನಸೌಧದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಹೆಸರಿನಲ್ಲಿ ಭಾರಿ ಜಟಾಪಟಿ ನಡೆಸುವ ಜನಪ್ರತಿನಿಧಿಗಳು ಅದೇ ಬಾಬಾ ಸಾಹೇಬ ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳದೆ ಇರುವುದು ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ.

ಸಂವಿಧಾನದ ಪುಸ್ತಕವನ್ನೇ ಹಿಡಿದು ಓಡಾಡುವವರ ಪಕ್ಷದ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಬಾರದೆ ಇರುವುದು ದಲಿತ ಸಂಘಟನೆಗಳ ಬೇಸರಕ್ಕೆ ಕಾರಣವಾಗಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಬೇಡ್ಕರ್ ದಿನಾಚರಣೆಯನ್ನು ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಬೇಕಿತ್ತು. ಅವರ ಅನುಪಸ್ಥಿತಿಯಲ್ಲಿ ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ ಉದ್ಘಾಟಿಸಿದರು.

ಸ್ಥಳೀಯ ಶಾಸಕ ಸತೀಶ ಸೈಲ್ ಅಧ್ಯಕ್ಷತೆ ವಹಿಸಬೇಕಿತ್ತು. ಆದರೆ ಅವರೂ ಬರಲಿಲ್ಲ. ಅವರ ಬದಲು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧ್ಯಕ್ಷತೆ ವಹಿಸಿದರು. ಸಚಿವರು, ಬೇರೆ ಕ್ಷೇತ್ರಗಳ ಶಾಸಕರು ದೂರದಿಂದ ಬರಬೇಕು ಎನ್ನೋಣ. ಆದರೆ ಸ್ಥಳೀಯ ಶಾಸಕರು ಏಕೆ ಬರಲಿಲ್ಲ? ಅವರಾದರೂ ಬರಬೇಕಿತ್ತು ಎಂಬ ಮಾತುಗಳು ಕೇಳಿಬಂದವು.

ಇದನ್ನೂ ಓದಿ: ಬೆಂಗಳೂರು: ದೇಶದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಪಣ!

ಇನ್ನು ಅತಿಥಿಗಳಾಗಿ ಸಂಸದರು, ಎಲ್ಲ ಶಾಸಕರ ಹೆಸರನ್ನೂ ಆಹ್ವಾನ ಪತ್ರಿಕೆಯಲ್ಲಿ ಹಾಕಲಾಗಿತ್ತು. ಆದರೆ ಯಾರೊಬ್ಬರೂ ಬರಲಿಲ್ಲ. ದಲಿತ ಮುಖಂಡರೊಬ್ಬರು ಇದನ್ನು ಸಮಾರಂಭದಲ್ಲೇ ಪ್ರಸ್ತಾಪಿಸಿದರು.

ಯಾವುದೇ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಜನಪ್ರತಿನಿಧಿಗಳ ಹೆಸರು ಹಾಕದೆ ಇದ್ದಲ್ಲಿ ವಿಧಾನಸೌಧ, ಜಿಪಂ ಸಭೆ ಹಾಗೂ ಇತರ ಸಭೆಗಳಲ್ಲಿ ಶಿಷ್ಟಾಚಾರ ಉಲ್ಲಂಘನೆ, ಹಕ್ಕುಚ್ಯುತಿಯಾಗಿದೆ ಎಂದು ಅಬ್ಬರಿಸುವ ಜನಪ್ರತಿನಿಧಿಗಳು ಮಹಾನ್ ನಾಯಕರ ಜಯಂತಿಗಳ ಆಹ್ವಾನ ಪತ್ರಿಕೆಗಳಲ್ಲಿ ಪ್ರತಿ ಬಾರಿ ಹೆಸರಿದ್ದರೂ ಸೌಜನ್ಯಕ್ಕಾಗಿಯಾದರೂ ಅತ್ತ ಸುಳಿಯುವುದಿಲ್ಲ. ಡಾ. ಅಂಬೇಡ್ಕರ್ ಅವರಂತಹ ನಾಯಕರ ಜಯಂತಿಗೂ ಬಾರದೆ ಸಮಾಜಕ್ಕೆ ಏನು ಸಂದೇಶ ಕೊಡುತ್ತಾರೆ ಎನ್ನುವುದು ಪ್ರಶ್ನೆಯಾಗಿದೆ. ಬೇಸರದ ಸಂಗತಿ: ಸಚಿವರು, ಶಾಸಕರು ಆಗಮಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರೂ ಸಾಕಿತ್ತು. ಅಂಬೇಡ್ಕರ್ ರೂಪಿಸಿದ ಸಂವಿಧಾನದ ಮೀಸಲಾತಿಯಿಂದ ಗೆದ್ದು ಬಂದ ಇವರು ಅಂಬೇಡ್ಕರ್ ಜಯಂತಿಗೆ ಬಾರದೆ ಇರುವುದು ಬೇಸರದ ಸಂಗತಿ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಸದಸ್ಯ ದೀಪಕ ಕುಡಾಳಕರ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!