
ಶಿವಮೊಗ್ಗ : ಶಿವಮೊಗ್ಗ-ಯಶವಂತಪುರ ನಡುವೆ ಆರಂಭಗೊಂಡಿರುವ ಜನ ಶತಾಬ್ಧಿ ರೈಲಿನಲ್ಲಿ ಪ್ರಯಾಣಿಸಲು ಇಚ್ಛಿಸುವವರು ತಮ್ಮ ಸೀಟುಗಳನ್ನು ಮೊದಲೇ ಬುಕ್ಕಿಂಗ್ ಮಾಡಬೇಕು. ಕೊನೆ ಗಳಿಗೆಯಲ್ಲಿ ನಿಲ್ದಾಣದಲ್ಲಿ ಟಿಕೆಟ್ ಪಡೆದು ರೈಲಿಗೆ ಹತ್ತಿ ಸೀಟಿಗಾಗಿ ಹುಡುಕಾಟ ನಡೆಸುವಂತಿಲ್ಲ. ಏಕೆಂದರೆ ಈ ರೈಲಿನ ಎಲ್ಲ ಸೀಟುಗಳೂ ಮುಂಗಡ ಕಾಯ್ದಿರಿಸುವಿಕೆಗೆ ಒಳಪಟ್ಟಿದೆ.
ರೈಲು ನಿಲ್ದಾಣ ಬಿಡುವ ಅರ್ಧಗಂಟೆ ಮೊದಲಿನವರೆಗೂ ಆನ್ಲೈನ್ನಲ್ಲಿ ಅಥವಾ ಹಿಂದಿನ ದಿನ ರಾತ್ರಿ 8ರವರೆಗೂ ಕೌಂಟರ್ನಲ್ಲಿ ಟಿಕೆಟ್ ಬುಕ್ ಮಾಡಬಹುದು. ಬೆಂಗಳೂರು ಶಿವಮೊಗ್ಗ ಮಧ್ಯೆ ಈಗ ಸಂಚರಿಸುವ ಈಗಿನ ಪ್ಯಾಸೆಂಜರ್ ರೈಲು 8ಗಂಟೆ ತೆಗೆದುಕೊಂಡರೆ, ಎಕ್ಸಪ್ರೆಸ್ ರೈಲುಗಳು 6.30 ಗಂಟೆ ತೆಗೆದುಕೊಳ್ಳುತ್ತದೆ. ಆದರೆ ಜನ ಶತಾಬ್ದಿ ಎಕ್ಸ್ಪ್ರೆಸ್ ರೈಲು ಭದ್ರಾವತಿ, ಕಡೂರು, ತುಮಕೂರಿನಲ್ಲಿ ಮಾತ್ರ ನಿಲ್ಲುವ ಕಾರಣ ಕೇವಲ 5 ಗಂಟೆಯಲ್ಲೇ ಶಿವಮೊಗ್ಗದಿಂದ ಯಶವಂತಪುರ ತಲುಪುತ್ತದೆ.
ವೇಳಾಪಟ್ಟಿ: ಈ ಜನ ಜತಾಬ್ದಿ ಎಕ್ಸ್ಪ್ರೆಸ್ ರೈಲು (ರೈಲು ಸಂಖ್ಯೆ- 12090) ಸೋಮವಾರ, ಬುಧವಾರ, ಶುಕ್ರವಾರ ಹಾಗೂ ಶನಿವಾರ ಶಿವಮೊಗ್ಗದಿಂದ ಬೆಳಗ್ಗೆ 5.15ಕ್ಕೆ ಹೊರಟು, 10.10ಕ್ಕೆ ಯಶವಂತಪುರ ತಲುಪಲಿದೆ. ಅದೇ ದಿನಗಳಲ್ಲಿ ಯಶವಂತಪುರದಿಂದ (ರೈಲು ಸಂಖ್ಯೆ- 12089) ಸಂಜೆ 5.30ಕ್ಕೆ ಹೊರಟು ರಾತ್ರಿ 10.10 ಕ್ಕೆ ಶಿವಮೊಗ್ಗ ತಲುಪುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ