
ಬೆಂಗಳೂರು (ಫೆ.4): ರಾಜ್ಯದ 100 ರಾಮ ಮಂದಿರಗಳ ಜೀರ್ಣೋದ್ಧಾರಕ್ಕೆ ಬಜೆಟ್ ನಲ್ಲಿ ಹಣ ಮೀಸಲಿಡುವಂತೆ ಸರ್ಕಾರಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶನಿವಾರ ಮನವಿ ಮಾಡಿಕೊಂಡಿದ್ದಾರೆ.
ಬಜೆಟ್ ಪೂರ್ವ ಸಭೆಯಲ್ಲಿ ಸಚಿವರೂ ಆಗಿರುವ ಸಿದ್ದರಾಮಯ್ಯ ಅವರೊಂದಿಗಿನ ಮುಜರಾಯಿ ಇಲಾಖೆಯ ಸಚಿವರೂ ಆಗಿರುವ ರಾಮಲಿಂಗಾ ರೆಡ್ಡಿಯವರು 100 ರಾಮ ಮಂದಿರಗಳ ಜೀರ್ಣೋದ್ಧಾರಕ್ಕೆ ಬಜೆಟ್ ನಲ್ಲಿ ಹಣ ಒದಗಿಸುವಂತೆ ಮನವಿ ಸಲ್ಲಿಸಿದರು.
ಸರ್ಕಾರಿ ನೌಕರಿ ಕೊಡಿಸೋದಾಗಿ ಲಕ್ಷ ಲಕ್ಷ ವಂಚನೆ; ಬಗೆದಷ್ಟು ಬಯಲಾಗ್ತಿದೆ ಕಾಂಗ್ರೆಸ್ ನಾಯಕಿ ಕರ್ಮಕಾಂಡ!
ಈ ಕುರಿತು ಪ್ರತಿಕ್ರಿಯೆ ನೀಡಿದ ರಾಮಲಿಂಗಾರೆಡ್ಡಿಯವರು, ಬಜೆಟ್ನಲ್ಲಿ ಎಷ್ಟು ಪ್ರಮಾಣದ ಹಂಚಿಕೆಯಾಗಿದ್ದರೂ, ನಾವು ಇಲಾಖೆಯಲ್ಲಿ ನಮ್ಮದೇ ಆದ ಹಣವನ್ನು ಹೊಂದಿರುವುದರಿಂದ ಆ ಹಣವನ್ನು ರಾಮ ಮಂದಿರಗಳ ಜೀರ್ಣೋದ್ಧಾರಕ್ಕೆ ಬಳಕೆ ಮಾಡಲಾಗುವುದು ಎಂದು ಹೇಳಿದರು.
ರಾಮಲಿಂಗಾರೆಡ್ಡಿಯನ್ನು ಡಿಸಿಎಂ ಮಾಡುವಂತೆ ಪಟ್ಟು, ಅದಾಗಲ್ಲ ರೆಡ್ಡಿ ನಿಗಮ ಮಾಡ್ತೀನೆಂದ ಸಿಎಂ ಸಿದ್ದರಾಮಯ್ಯ!
ರಾಮ ಹುಟ್ಟಿ 7500 ಸಾವಿರ ವರ್ಷ ಆಯಿತು ರಾಮ ಮಂದಿರ ಎಷ್ಟು ಕಟ್ಟಿದ್ದಾರೆ. ಬಿಜೆಪಿಯವರು ಈಗ ರಾಮ ರಾಮ ಎಂದು ಓಡಾಡುತಿದ್ದಾರೆ. ಅಯೋಧ್ಯೆ ರಾಮ ಮಂದಿರ ಬಾಗಿಲು ತೆಗೆದು ಪೂಜೆಗೆ ಅವಕಾಶ ನೀಡಿದ್ದು ನಮ್ಮ ರಾಜೀವ್ ಗಾಂಧಿ. ನಮ್ಮ ಅಧಿಕಾರಾವಧಿಯಲ್ಲಿ ಎಷ್ಟು ದೇವಸ್ಥಾನಗಳಿಗೆ ಅನುಧಾನ ಕೊಟ್ಟಿದ್ದೇವೆ ಎಂಬುದರ ಬಗ್ಗೆ ಪಟ್ಟಿ ಬಿಡುಗಡೆಗೊಳಿಸುತ್ತೇನೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ