ಕೋವಿಡ್‌ ಲ್ಯಾಬ್‌ನ 922 ನೌಕರರಿಗೆ ಅಪಾಯ ಭತ್ಯೆ

Kannadaprabha News   | Asianet News
Published : Jun 03, 2021, 07:29 AM IST
ಕೋವಿಡ್‌ ಲ್ಯಾಬ್‌ನ 922 ನೌಕರರಿಗೆ ಅಪಾಯ ಭತ್ಯೆ

ಸಾರಾಂಶ

* ಪ್ರಯೋಗಾಲಯಗಳಲ್ಲಿ ಕೋವಿಡ್‌ ಪರೀಕ್ಷಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ಸಿಬ್ಬಂದಿ ನೇಮಕ * 10 ಸಾವಿರ ರು. ಕೋವಿಡ್‌ ಅಪಾಯ ಪ್ರೋತ್ಸಾಹಧನ  * 922 ಮಂದಿ ಹೊರ ಗುತ್ತಿಗೆ ನೌಕರರಿಗೆ ಕೋವಿಡ್‌ ಮಾಸಿಕ ಅಪಾಯ ಭತ್ಯೆ ಘೋಷಣೆ

ಬೆಂಗಳೂರು(ಜೂ.03): ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಕೋವಿಡ್‌ ಪರೀಕ್ಷಾ ಪ್ರಯೋಗಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 922 ಮಂದಿ ಹೊರ ಗುತ್ತಿಗೆ ನೌಕರರಿಗೆ ಕೋವಿಡ್‌ ಮಾಸಿಕ ಅಪಾಯ ಭತ್ಯೆ ಘೋಷಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶಿದೆ. 

ರಾಜ್ಯದ 20 ಪ್ರಯೋಗಾಲಯಗಳಲ್ಲಿ ಕೋವಿಡ್‌ ಪರೀಕ್ಷಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ಹೊರ ಗುತ್ತಿಗೆ ಆಧಾರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಸಿಬ್ಬಂದಿ ನೇಮಕವಾಗಿದ್ದಾರೆ. 

ರಾಜ್ಯದಲ್ಲಿ 30 ಸಾವಿರ ದಾಟಿದ ಕೊರೋನಾ ಸಾವು

ಸಂಶೋಧನಾ ವಿಜ್ಞಾನಿ, ಸಂಶೋಧನಾ ಸಹಾಯಕ, ಲ್ಯಾಬ್‌ ತಂತ್ರಜ್ಞ, ಡೇಟಾ ಎಂಟ್ರಿ ಆಪರೇಟರ್‌ಗಳಿಗೆ 5000 ರು., ಶುಶ್ರೂಷಕರಿಗೆ 8000 ರು. ಮತ್ತು ಡಿ ಗ್ರೂಪ್‌ ನೌಕರರಿಗೆ 10 ಸಾವಿರ ರು. ಕೋವಿಡ್‌ ಅಪಾಯ ಪ್ರೋತ್ಸಾಹಧನ ನೀಡಲು ಇಲಾಖೆ ಆದೇಶಿಸಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!