ಭವಿಷ್ಯದ ಮೆಟ್ರೋ ಎಲಿವೆಟೆಡ್‌ ಕೆಳಗೆ ರಸ್ತೆ: ಡಿ.ಕೆ.ಶಿವಕುಮಾರ್‌

Published : Feb 10, 2024, 06:23 AM IST
ಭವಿಷ್ಯದ ಮೆಟ್ರೋ ಎಲಿವೆಟೆಡ್‌ ಕೆಳಗೆ ರಸ್ತೆ: ಡಿ.ಕೆ.ಶಿವಕುಮಾರ್‌

ಸಾರಾಂಶ

ನಗರದಲ್ಲಿ ಭವಿಷ್ಯದ ಎಲ್ಲ ಮೆಟ್ರೋ ಮಾರ್ಗದಲ್ಲಿ ಡಬಲ್‌ ಡೆಕ್ಕರ್‌ (ಮೆಟ್ರೋ ಎಲಿವೆಟೆಡ್‌ನ ಕೆಳ ಹಂತದಲ್ಲಿ ರಸ್ತೆ) ನಿರ್ಮಾಣಕ್ಕೆ ಸೂಚಿಸಲಾಗಿದ್ದು, ಪ್ರಮುಖವಾಗಿ ಈಗ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೆಟ್ರೋ ಮಾರ್ಗದಲ್ಲಿ ಅವಕಾಶವಿರುವಲ್ಲಿ ಈ ಮಾದರಿ ಅನುಸರಿಸುವಂತೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಬೆಂಗಳೂರು (ಫೆ.10): ನಗರದಲ್ಲಿ ಭವಿಷ್ಯದ ಎಲ್ಲ ಮೆಟ್ರೋ ಮಾರ್ಗದಲ್ಲಿ ಡಬಲ್‌ ಡೆಕ್ಕರ್‌ (ಮೆಟ್ರೋ ಎಲಿವೆಟೆಡ್‌ನ ಕೆಳ ಹಂತದಲ್ಲಿ ರಸ್ತೆ) ನಿರ್ಮಾಣಕ್ಕೆ ಸೂಚಿಸಲಾಗಿದ್ದು, ಪ್ರಮುಖವಾಗಿ ಈಗ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೆಟ್ರೋ ಮಾರ್ಗದಲ್ಲಿ ಅವಕಾಶವಿರುವಲ್ಲಿ ಈ ಮಾದರಿ ಅನುಸರಿಸುವಂತೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ನಾಗವಾರ ಮುಖ್ಯರಸ್ತೆಯ ಕೆ.ಜಿ.ಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಟಿಬಿಎಂ ಸುರಂಗ ಕೊರೆದು ಹೊರಬರುವ ಪ್ರಕ್ರಿಯೆ ವೀಕ್ಷಿಸಿದರು. ಬಳಿಕ ಏರ್‌ಪೋರ್ಟ್‌ಗೆ ಸಂಪರ್ಕ ಕಲ್ಪಿಸುವ ಮೆಟ್ರೋ ಯೋಜನೆ ಬಗ್ಗೆ ಮಾತನಾಡಿ, ನಾಗ್ಪುರದಲ್ಲಿ ಈ ರೀತಿಯ ಯೋಜನೆ ಗಮನಿಸಿದ್ದು, ಮುಂದಿನ ಮೆಟ್ರೋ ಕಾಮಗಾರಿಗಳಲ್ಲಿ ಈ ಯೋಜನೆ ಕಾರ್ಯಗತ ಮಾಡುತ್ತೇವೆ. ಮೆಟ್ರೋ ಕಂ ರಸ್ತೆ ನಿರ್ಮಾಣದಿಂದ ಮೇಲ್ಸೇತುವೆ ನಿರ್ಮಾಣಕ್ಕೆ ತಗುಲುವ ಶೇ.60ರಷ್ಟು ವೆಚ್ಚ ತಗ್ಗಲಿದೆ ಎಂದರು.

2025ಕ್ಕೆ ಗುಲಾಬಿ ಸುರಂಗ ಮಾರ್ಗ: ಇನ್ನು ‘ನಮ್ಮ ಮೆಟ್ರೋ’ 2ನೇ ಹಂತದ ಕಾಳೇನ ಅಗ್ರಹಾರದಿಂದ ನಾಗವಾರದ ಮಾರ್ಗ 2025ರ ವೇಳೆಗೆ ಮುಗಿಯಲಿದೆ. ಈ ಮಾರ್ಗದಲ್ಲಿ 13.76 ಕಿಮೀ ಉದ್ದ ಸುರಂಗ ಇರಲಿದ್ದು. ಡೇರಿ ವೃತ್ತದಿಂದ ನಾಗವಾರದವರೆಗೆ 12 ಸುರಂಗ ನಿಲ್ದಾಣ ನಿರ್ಮಾಣ ಆಗಲಿದೆ. ಎತ್ತರಿಸಿದ ಮಾರ್ಗವೂ ಸೇರಿ ಒಟ್ಟು 18 ನಿಲ್ದಾಣಗಳಿರಲಿವೆ. ಸುರಂಗ ಮಾರ್ಗಕ್ಕಾಗಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ಒಂಭತ್ತು ಟಿಬಿಎಂ ಪೈಕಿ ಏಳು ಕೆಲಸ ಮುಗಿಸಿವೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ 28 ಸ್ಥಾನ: ನಿಖಿಲ್ ಕುಮಾರಸ್ವಾಮಿ ವಿಶ್ವಾಸ

ಕೆಜೆಹಳ್ಳಿ ಬಳಿ ಹೊರಬಂದ ಟಿಬಿಎಂ ಭದ್ರಾ: ಟಿಬಿಎಂ ಭದ್ರಾ ಟ್ಯಾನರಿ ರಸ್ತೆ ನಿಲ್ದಾಣದಿಂದ ನಾಗವಾರದ ರ್ಯಾಂಪ್‌ವರೆಗಿನ 4.591 ಕಿ.ಮೀ. ಉದ್ದದ ಸುರಂಗ ಮಾರ್ಗದ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ಕೆ.ಜಿ. ಹಳ್ಳಿ (ಕಾಡಗೊಂಡನಹಳ್ಳಿ) ನಿಲ್ದಾಣದ ಬಳಿ ಗುರುವಾರ ಯಶಸ್ವಿಯಾಗಿ ಹೊರಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್