ರೋಹಿಣಿ ಸಿಂಧೂರಿ ಸೇರಿದಂತೆ 6 IAS ಅಧಿಕಾರಿಗಳ ವರ್ಗಾವಣೆ

Published : Sep 28, 2020, 07:28 PM ISTUpdated : Sep 28, 2020, 07:37 PM IST
ರೋಹಿಣಿ ಸಿಂಧೂರಿ ಸೇರಿದಂತೆ 6 IAS ಅಧಿಕಾರಿಗಳ ವರ್ಗಾವಣೆ

ಸಾರಾಂಶ

ರೋಹಿಣಿ ಸಿಂಧೂರಿ ಸೇರಿದಂತೆ ಆರು IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ  ರಾಜ್ಯ ಸರ್ಕಾರ ಇಂದು (ಸೋಮವಾರ) ಆದೇಶ ಹೊರಡಿಸಿದೆ. 

ಬೆಂಗಳೂರು, (ಸೆ.28):  ಆರು  IAS ಅಧಿಕಾರಿಗಳನ್ನು ಟ್ರಾನ್ಸ್‌ಫರ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಿಸಿದ್ದು, ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. 

 ಆಗಸ್ಟ್ 29ಕ್ಕೆ ಮೈಸೂರು ಜಿಲ್ಲಾಧಿಕಾರಿಯಾಗಿ ಬಿ.ಶರತ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಕೇವಲ ಒಂದೇ ಒಂದು ತಿಂಗಳಿನಲ್ಲಿಯೇ ಇದೀಗ ಅವರನ್ನು ವರ್ಗಾವಣೆ ಮಾಡಿರುವಂತ ರಾಜ್ಯ ಸರ್ಕಾರ, ಅವರ ಸ್ಥಾನಕ್ಕೆ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಿ ಆದೇಶಿಸಿದೆ.

ನೇತ್ರಾಣಿಯಲ್ಲಿ ಪತಿ ಜೊತೆ ಸಮುದ್ರದಾಳಕ್ಕೆ ಧುಮುಕಿದ ರೋಹಿಣಿ ಸಿಂಧೂರಿ

 ಧಾರ್ಮಿಕ ಮತ್ತು ಚಾರಿಟಬಲ್ ಎಂಡೋಮೆಂಟ್ ನ ಕಮೀಷನರ್ ಆಗಿದ್ದ ರೋಹಿಣಿ ಸಿಂಧೂರಿಯವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಆದ್ರೆ, ಮೈಸೂರು ಜಿಲ್ಲಾಧಿಕಾರಿಯಾಗಿ ಬಿ.ಶರತ್ ಅವರಿಗೆ ಸ್ಥಳ ನಿಯುಕ್ತಿಗೊಳಿಸದೇ ವರ್ಗಾವಣೆ ಮಾಡಿದೆ.

ಆದ್ರೆ, ಪ್ರಸ್ತುತ ಜಿಲ್ಲಾಧಿಕಾರಿ ಬಿ.ಶರತ್​ಗೆ ಸ್ಥಳ ತೋರಿಸದೆ ರಾಜ್ಯ ವರ್ಗಾವಣೆ ಮಾಡಿದೆ. ಒಂದು ತಿಂಗಳ ಹಿಂದಷ್ಟೇ ಮೈಸೂರು DC ಆಗಿ ಬಿ.ಶರತ್​ರನ್ನ ನೇಮಕ ಮಾಡಲಾಗಿತ್ತು. ಬಿ.ಶರತ್ ಕಲಬುರಗಿಯಿಂದ ಮೈಸೂರಿಗೆ ವರ್ಗಾವಣೆಯಾಗಿದ್ದರು.

ವರ್ಗಾವಣೆಗೊಂಡ ಇನ್ನುಳಿದ 5 IAS ಅಧಿಕಾರಿಗಳು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್