ರೈತರಿಗೆ ಕಳೆದೊಂದು ವರ್ಷದಲ್ಲಿ 1,970 ಕೋಟಿ ರೂ. ಬೆಳೆ ವಿಮೆ ಪರಿಹಾರ ಕೊಡಿಸಿದ್ದೇವೆ: ಕೃಷಿ ಸಚಿವ ಚಲುವರಾಯಸ್ವಾಮಿ

Published : Jul 22, 2024, 07:21 PM IST
ರೈತರಿಗೆ ಕಳೆದೊಂದು ವರ್ಷದಲ್ಲಿ 1,970 ಕೋಟಿ ರೂ. ಬೆಳೆ ವಿಮೆ ಪರಿಹಾರ ಕೊಡಿಸಿದ್ದೇವೆ: ಕೃಷಿ ಸಚಿವ ಚಲುವರಾಯಸ್ವಾಮಿ

ಸಾರಾಂಶ

ರಾಜ್ಯದ ರೈತರಿಗೆ ಕಳೆದೊಂದು ವರ್ಷದಲ್ಲಿ ಅಂದರೆ 2023-24ನೇ ಸಾಲಿನಲ್ಲಿ 1,970 ಕೋಟಿ ರೂ. ಬೆಳೆ ವಿಮೆ ಪರಿಹಾರ ವಿತರಣೆ ಇತ್ಯರ್ಥಪಡಿಸಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಬೆಂಗಳೂರು (ಜು.22): ರಾಜ್ಯದಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2023-24ನೇ ಸಾಲಿನಲ್ಲಿ 16.77 ಲಕ್ಷ ರೈತರಿಗೆ 1970.39 ಕೋಟಿ  ಬೆಳೆ ವಿಮಾ ಪರಿಹಾರ ವಿತರಣೆಗೆ ಇತ್ಯರ್ಥಪಡಿಸಲಾಗಿದೆ. ಇನ್ನು 2024-25ನೇ ಸಾಲಿಗೆ ಕಪ್ ಮತ್ತು ಕ್ಯಾಪ್ ಮಾದರಿ ಅಳವಡಿಸಿ ಟೆಂಡರ್ ಕರೆಯಲಾಗಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನ ಸಭೆಯಲ್ಲಿ ನವಲಗುಂದ ಕ್ಷೇತ್ರದ ಶಾಸಕರಾದ ಕೋನರೆಡ್ಡಿ  ಎನ್ .ಹೆಚ್ ಪ್ರಶ್ನೆಗೆ ಉತ್ತರಿಸಿದ ಕೃಷಿ ಸಚಿವರು, 2016-17 ನೇ ಸಾಲಿನಿಂದ ಈವರಗೆ ಒಟ್ಟು  89.10 ಲಕ್ಷ ರೈತರಿಗೆ 10,854.74 ಕೋಟಿ ರೂ. ಬೆಳೆ ವಿಮೆಯನ್ನು ಇತ್ಯರ್ಥಪಡಿಸಲಾಗಿದೆ. ಕಳೆದ ವರ್ಷ ತೀವ್ರ ಬರ ಉಂಟಾದ ಹಿನ್ನಲೆಯಲ್ಲಿ ಹಿಂದೆಂದಿಗಿಂತ ಗರಿಷ್ಠ ಪ್ರಮಾಣದ ವಿಮಾ ಪರಿಹಾರ ಇತ್ಯರ್ಥಪಡಿಸಲಾಗಿದೆ. 2016ರ ಹಿಂಗಾರು ಹಂಗಾಮಿನಿಂದ ಕ್ಷೇತ್ರಾಧಾರಿತ ಹಾಗೂ ಇಳುವರಿಯಾಧಾರಿತ ಪಿ.ಎಂ.ಎಫ್.ಬಿ.ವೈ ಯೋಜನೆ ಜಾರಿಯಲ್ಲಿದೆ. ಮಾರ್ಗಸೂಚಿಯ ಅನುಸಾರ ಹೋಬಳಿ / ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯವರು ಕೈಗೊಳ್ಳುವ ಬೆಳೆ ಕಟಾವು ಪ್ರಯೋಗಗಳಿಂದ ಬಂದ ವಾಸ್ತವಿಕ ಇಳುವರಿ ಪರಿಶೀಲಿಸಿ ಕೊರತೆಯ ಅನುಗುಣವಾಗಿ ಬೆಳೆ ವಿಮೆ ನಷ್ಟ ಪಾವತಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ನಟ ದರ್ಶನ್ ಜೈಲಲ್ಲಿ ಪ್ರತಿದಿನ ಬಿರಿಯಾನಿ ತಿನ್ನೋಕಾಗಲ್ಲ, ಬೇಧಿ ಆಗಿದ್ರೆ ಸಪ್ಪೆ ಊಟ ಕೊಡಿ; ಎಸ್‌ಪಿಪಿ ಪ್ರಸನ್ನಕುಮಾರ

ಪ್ರಕೃತಿ ವಿಕೋಪಗಳಾದ ಅಲಿಕಲ್ಲು ಮಳೆ, ಭೂಕುಸಿತ, ಬೆಳೆ ಮುಳುಗಡೆ, ಮೇಘ ಸ್ಪೋಟ, ಗುಡುಗು, ಮಿಂಚುಗಳಿಂದಾಗುವ ಬೆಂಕಿ ಅವಗಡಗಳಿಂದ ಉಂಟಾಗುವ ನಷ್ಟವನ್ನು ನಿರ್ಧರಿಸಿ ಬೆಳೆ ವಿಮೆ ಪರಿಹಾರವನ್ನು ಇತ್ಯರ್ಥಪಡಿಸಿ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ಒದಗಿಸಲಾಗುವುದು. 2024-25 ಮತ್ತು 2025-26ನೇ ಸಾಲುಗಳಿಗೆ ಕರ್ನಾಟಕ ರೈತರ ಸುರಕ್ಷಾ ಪಸಲ್ ಭಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಮಾ ಸಂಸ್ಥೆಯನ್ನು ಆಯ್ಕೆ ಮಾಡುವ ಸಲುವಾಗಿ ಇ-ಟೆಂಡರ್ ಕರೆಯಲಾಗಿದ್ದು ಆರ್ಥಿಕ ಇಲಾಖೆಯ ಆದೇಶದಂತೆ 2024-25 ಹಾಗೂ 2025-26ನೇ ಸಾಲಿಗೆ ಮಾತ್ರ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕಪ್ ಅಂಡ್ ಕ್ಯಾಪ್ ಮಾದರಿ ಅಳವಡಿಸಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದಿಂದ ಒಟ್ಟು 18 ವಿಮಾ ಸಂಸ್ಥೆಗಳು ಎಂಪ್ಯಾನಲ್ ಆಗಿದ್ದು, ಇದರಲ್ಲಿ 5 ಸರ್ಕಾರಿ ಸಂಸ್ಥೆ ಹಾಗೂ 13 ಖಾಸಗಿ ಸಂಸ್ಥೆಗಳು ಒಳಗೊಂಡಿವೆ.  ಮಾರ್ಗಸೂಚಿ ಅನ್ವಯ ಯೋಜನೆ ಅನುಷ್ಠಾನಕ್ಕೆ ಎಂಪ್ಯಾನಲ್ ಪಟ್ಟಿಯಲ್ಲಿರುವ ಎಲ್ಲಾ ವಿಮಾ ಸಂಸ್ಥೆಗಳಿಗೆ ಟೆಂಡರ್ನಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಟೆಂಡರ್ ಪ್ರಕ್ರಿಯೆಯಲ್ಲಿ ಅತೀ ಕಡಿಮೆ ಪ್ರೀಮಿಯಂ ದರದಲ್ಲಿ ಕ್ವೋಟ್ ಮಾಡಿರುವ ವಿಮಾ ಸಂಸ್ಥೆಯನ್ನು ಯೋಜನೆಯ ಅನುಷ್ಠಾನಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ವಿವರಿಸಿದರು.

ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಮುಂದಾದ ಬಿಬಿಎಂಪಿ; ಶೀಘ್ರವೇ ಪಟ್ಟಿ ಪ್ರಕಟ

ಮುಂದಿನ 2 ಸಾಲುಗಳಿಗೆ ರಾಜ್ಯದ 31 ಜಿಲ್ಲೆಗಳ ಪೈಕಿ 18 ಜಿಲ್ಲೆಗಳಲ್ಲಿ ಸರ್ಕಾರಿ ಸಂಸ್ಥೆಗಳಾದ ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ ಹಾಗೂ ಓರಿಯಂಟಲ್ ಜನರಲ್ ಇನ್ಸೂರೆನ್ಸ್ ಸಂಸ್ಥೆಗಳು ಯೋಜನೆಯನ್ನು ಅನುಷ್ಠಾನಗೊಳಿಸುತ್ತಿವೆ ಉಳಿದ 13 ಜಿಲ್ಲೆಗಳಲ್ಲಿ ಖಾಸಗಿ ಸಂಸ್ಥೆಗಳು ಅನುಷ್ಠಾನಗೊಳಿಸುತ್ತವೆ. 80 : 110 ಮಾದರಿ ಅಳವಡಿಸುವುದರಿಂದ ವಿಮಾ ಸಂಸ್ಥೆಗಳು ನಿಗಧಿಪಡಿಸಿರುವ ಪ್ರೀಮಿಯಂ ದರಗಳು ಅತೀ ಕಡಿಮೆಯಾಗಿವೆ. ಹಿಂದಿನ ಸಾಲಿನಲ್ಲಿ ಇದ್ದ ಪ್ರೀಮಿಯಂ ಸರಾಸರಿ ಶೇಕಡಾ 19.41 ಇದ್ದು, ಪ್ರಸ್ತುತ ಶೇಕಡಾ 8.08ಕ್ಕೆ ಇಳಿಕೆಯಾಗಿದೆ ಎಂದು ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಜನರ ಹಿತಾಸಕ್ತಿ ಮರೆತ ಸರ್ಕಾರ-ಕಾಂಗ್ರೆಸ್ ಸರ್ಕಾರವೇ ರಾಜ್ಯಕ್ಕೆ ಹೊರೆ : ಬಿಜೆಪಿ
Karnataka News Live: ಬೆಂಗಳೂರು ನಗರವನ್ನು ಗ್ಯಾಸ್‌ ಚೇಂಬರ್‌ ಆಗಲು ಬಿಡಲ್ಲ - ಈಶ್ವರ್‌ ಖಂಡ್ರೆ