Bengaluru ಕೆಂಪೇಗೌಡ ಟೌನ್‌ ಪ್ಲಾನಿಂಗ್‌ ನಿರ್ಮಾಣಕ್ಕೆ 50 ಕೋಟಿ: ರಾಜ್ಯ ಸರ್ಕಾರ ಸೂಚನೆ

Published : Apr 20, 2026, 08:31 AM IST
Greater Bengaluru

ಸಾರಾಂಶ

ರಾಜ್ಯ ಸರ್ಕಾರ ಬೆಂಗಳೂರಿನ ಐದು ನಗರ ಪಾಲಿಕೆಗಳ 2026-27ನೇ ಸಾಲಿನ ಬಜೆಟ್‌ಗೆ ಕೆಲವು ಮಾರ್ಪಾಡುಗಳೊಂದಿಗೆ ಅನುಮೋದನೆ ನೀಡಿದೆ. ಈ ಆದೇಶದ ಅನ್ವಯ ಕೆಂಪೇಗೌಡ ಇನ್ಸ್‌ಟಿಟ್ಯೂಟ್ ಆಫ್ ಟೌನ್ ಪ್ಲಾನಿಂಗ್‌ ನಿರ್ಮಾಣಕ್ಕೆ 50 ಕೋಟಿ ರೂ. ಸೇರಿದಂತೆ ವಿವಿಧ ಕೆಂಪೇಗೌಡ ಯೋಜನೆಗಳಿಗೆ ಅನುದಾನ ಮೀಸಲಿಡಲು ಸೂಚಿಸಲಾಗಿದೆ.

ಬೆಂಗಳೂರು: ಕೆಂಪೇಗೌಡ ಇನ್ಸ್‌ಟಿಟ್ಯೂಟ್ ಆಫ್ ಟೌನ್ ಪ್ಲಾನಿಂಗ್‌ ನಿರ್ಮಾಣಕ್ಕೆ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳು 2026-27ನೇ ಸಾಲಿನಲ್ಲಿ ತಲಾ 10 ಕೋಟಿ ರು.ನಂತೆ 50 ಕೋಟಿ ರು. ಮೀಸಲಿಡಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಬೆಂಗಳೂರು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಪಾಲಿಕೆಗಳ ಆಯುಕ್ತರು ಇತ್ತೀಚೆಗೆ ಮಂಡಿಸಿದ 2026-27ನೇ ಸಾಲಿನ ಬಜೆಟ್‌ಗೆ ಅನುಮೋದನೆ ಕೋರಿ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆಯಲಾಗಿತ್ತು. ಅದಕ್ಕೆ ಕೆಲವೊಂದು ಮಾರ್ಪಾಡುಗಳನ್ನು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

10 ಕೋಟಿ ರು.ಯಂತೆ ಒಟ್ಟು 50 ಕೋಟಿ ರು

ಪಿಂಚಣಿ ಮತ್ತು ನಿವೃತ್ತಿ ಸೌಲಭ್ಯಗಳ ಪಾವತಿಗೆ ಐದು ಪಾಲಿಕೆಗಳು ತಲಾ 85 ಕೋಟಿ ರು.ಯನ್ನು ಮೀಸಲಿಟ್ಟಿದೆ. ಅದನ್ನು 75 ಕೋಟಿ ರು.ಗೆ ಮಿತಿಗೊಳಿಸಬೇಕು. ಇದರಲ್ಲಿ ಪ್ರತಿ ಪಾಲಿಕೆಗೆ ಉಳಿಯುವ 10 ಕೋಟಿ ರು.ಯಂತೆ ಒಟ್ಟು 50 ಕೋಟಿ ರು. ಅನ್ನು ಕೆಂಪೇಗೌಡ ಇನ್ಸ್‌ಟಿಟ್ಯೂಟ್ ಆಫ್ ಟೌನ್ ಪ್ಲಾನಿಂಗ್‌ ನಿರ್ಮಾಣಕ್ಕೆ ಮೀಸಲಿಡಲು ಸೂಚಿಸಲಾಗಿದೆ.

ಇದನ್ನೂ ಓದಿ: ಪ್ರತಿ ದಿನ ಬೆಂಗಳೂರಲ್ಲಿ ಖರ್ಚಾಗುವ ಹಣ ಎಷ್ಟು? ಇಷ್ಟೊಂದು ಹಣ ಎಲ್ಲಿ ಹೋಗುತ್ತಿದೆ?

ಹುತ್ತರಿದುರ್ಗದಲ್ಲಿರುವ ನಾಡಪ್ರಭ ಕೆಂಪೇಗೌಡ ಸ್ಮಾರಕ ರಕ್ಷಣೆ ಮತ್ತು ಅಭಿವೃದ್ಧಿಗಾಗಿ ಐದು ಪಾಲಿಕೆಗಳಿಂದ ತಲಾ 2 ಕೋಟಿ ರು.ಯಂತೆ 10 ಕೋಟಿ ರು. ಒದಗಿಸಲು ತಿಳಿಸಲಾಗಿದೆ. ಮಾಗಡಿಯಲ್ಲಿರುವ ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿಗೆ ಐದು ಪಾಲಿಕೆಗಳಿಂದ ಈ ಸಾಲಿನಲ್ಲಿ 30 ಕೋಟಿ ರು. ಅನುದಾನ ಒದಗಿಸಬೇಕು.

ಕೆಂಪೇಗೌಡ ಜಯಂತಿ ಆಚರಣೆಗೂ ಹಣ ಮೀಸಲಿಡಬೇಕು

ಅಲ್ಲದೇ, ಕೆಂಪೇಗೌಡ ಜಯಂತಿ ಆಚರಣೆಗೆ 369 ವಾರ್ಡ್‌ಗಳಿಂದ ತಲಾ 1 ಲಕ್ಷ ರು.ನಂತೆ 3.89 ಕೋಟಿ ರು. ಮೀಸಲಿಡಬೇಕು ಎಂದು ನಗರಾಭಿವೃದ್ಧಿ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ: ಕಟ್ಟಡ ಖಾತೆಗೆ ₹3 ಲಕ್ಷ ಕೇಳಿದ ಜಿಬಿಎ ಅಧಿಕಾರಿಗಳು: ಹಣದ ಸಮೇತ ಲೋಕಾಯುಕ್ತಕ್ಕೆ ಬಲೆಗೆ ಬಿದ್ದ ವೆಂಕಟೇಶ, ಶ್ರೀನಿವಾಸ!

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಒಟಿ, ಒರಿಜಿನಲ್‌ ಚಾಯ್ಸ್‌, ಹಯ್ವಾರ್ಡ್ಸ್, ರಾಜಾ ವಿಸ್ಕಿ ಬೆಲೆಯಲ್ಲಿ ಭಾರೀ ಏರಿಕೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು ಕಸಕ್ಕೆ ಹೊಸ ಸೂತ್ರ: ಇನ್ಮುಂದೆ 4 ವಿಧದ ವಿಂಗಡಣೆ ಕಡ್ಡಾಯ; BSWML ಸೂಚನೆ