ಬೆಂಗಳೂರಲ್ಲಿ ನಡೆಯಬೇಕಿದ್ದ RSS ಸಭೆಗೂ ಕೊರೋನಾ ಎಫೆಕ್ಟ್

Kannadaprabha News   | Asianet News
Published : Mar 14, 2020, 11:14 AM IST
ಬೆಂಗಳೂರಲ್ಲಿ ನಡೆಯಬೇಕಿದ್ದ RSS ಸಭೆಗೂ ಕೊರೋನಾ ಎಫೆಕ್ಟ್

ಸಾರಾಂಶ

ಎಲ್ಲೆಡೆ ಮಾರಕ ಪರಿಣಾಮವನ್ನು ಉಂಟು ಮಾಡಿರುವ ಕೊರೋನಾ ಎಫೆಕ್ಟ್ ಇದೀಗ ಆರ್ ಎಸ್ ಎಸ್ ಸಭೆ ಮೇಲೂ ತಟ್ಟಿದೆ. ಬೆಂಗಳೂರಿನಲ್ಲಿ ನಡೆಯಬೇಕಿದ್ದ ಸಭೆಯನ್ನು ರದ್ದು ಮಾಡಲಾಗಿದೆ. 

ಬೆಂಗಳೂರು [ಮಾ.14]: ಕೊರೋನಾ ವೈರಸ್ ಭೀತಿಯಿಂದ ಎಲ್ಲೆಡೆ ಹೈ ಅಲರ್ಟ್  ಘೋಷಣೆಯಾಗಿದೆ. ಇದರ ಬಿಸಿ ಇದೀಗ ಆರೆಸ್ಸೆಸ್‌ನ ಪ್ರತಿನಿಧಿ ಸಭೆಗೂ ತಟ್ಟಿದೆ. 

ಬೆಂಗಳೂರಿನ ಮಾಗಡಿ ರಸ್ತೆಯ ಚನ್ನೇನಹಳ್ಳಿಯಲ್ಲಿ ಮಾರ್ಚ್ 15 ರಿಂದ 17ರವರೆಗೆ ನಡೆಯಬೇಕಿದ್ದ ಆರೆಸ್ಸೆಸ್ ಅಖಿಲ ಭಾರತೀಯ ಪ್ರತಿನಿಧಿ ಸಭೆ ಯನ್ನು ರದ್ದು ಮಾಡಲಾಗಿದೆ. 

ಮೋಹನ್ ಭಾಗವತ್ ಉಗ್ರರ ಟಾರ್ಗೆಟ್; ಪೊಲೀಸರ ಮುನ್ನೆಚ್ಚರಿಕೆಯಿಂದ ತಪ್ಪಿತು ದುರಂತ!...

ಸಭೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆಕೊರೋನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಸಭೆಯನ್ನು ರದ್ದು ಮಾಡಿದ್ದಾಗಿ ಸುರೇಶ್ ಭೈಯಾಜಿ ಜೋಶಿ ತಿಳಿಸಿದ್ದಾರೆ. 

ಸರ್ಕಾರದ ಆದೇಶ ಹಿನ್ನೆಲೆಯಲ್ಲಿ ಭಾರತೀಯ ಪ್ರತಿನಿಧಿ ಸಭೆ ರದ್ದು ಮಾಡಲಾಗಿದೆ.  ಈ ಸಭೆಗೆ ಸಾವಿರಾರು ಸಂಖ್ಯೆಯಲ್ಲಿ ಜನರ ಸೇರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರದ್ದು ಮಾಡಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉಡುಪಿ: 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್‌, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!
ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!