ಆರ್‌ಎಸ್‌ಎಸ್‌ ಅವಹೇಳನ ಪ್ರಕರಣ: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಜಾಮೀನು,. ಕೋರ್ಟ್ ಆದೇಶವೇನು? ಮುಂದಿನ ವಿಚಾರಣೆ ಯಾವಾಗ?

Kannadaprabha News   | Kannada Prabha
Published : Aug 30, 2026, 07:05 AM IST
Court Grants bail to priyank kharge over RSS defamation case

ಸಾರಾಂಶ

ಆರ್‌ಎಸ್‌ಎಸ್‌ ಕುರಿತ ಮಾನಹಾನಿ ಆರೋಪ ಪ್ರಕರಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಆದೇಶವೇನು? ಮುಂದಿನ ವಿಚಾರಣೆ ಯಾವಾಗ?

ಬೆಂಗಳೂರು (ಆ.30): ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಕುರಿತು ಅವಹೇಳನ ಹಾಗೂ ಮಾನಹಾನಿ ಆರೋಪ ಪ್ರಕರಣದ ಆರೋಪಿಗಳಾದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಅವರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪ್ರಿಯಾಂಕ್ ಖರ್ಗೆ, ನಲಪಾಡ್ ಕೋರ್ಟ್‌ಗೆ ಹಾಜರು

ನ್ಯಾಯಾಲಯದ ನೋಟಿಸ್‌ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳು ಶನಿವಾರ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿದ್ದರು. ಈ ವೇಳೆ ಆರೋಪಿಗಳ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ತಮ್ಮ ಕಕ್ಷಿದಾರರ ವಿರುದ್ಧದ ಆರೋಪಗಳು ಜಾಮೀನು ನೀಡಬಹುದಾದ ಸ್ವರೂಪದಲ್ಲಿವೆ. ಹೀಗಾಗಿ ಜಾಮೀನು ಮಂಜೂರು ಮಾಡುವಂತೆ ಮನವಿ ಮಾಡಿದರು.

ಸೆ.19ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ

ಇಬ್ಬರು ಆರೋಪಿಗಳ ಜಾಮೀನು ಅರ್ಜಿ ಪುರಸ್ಕರಿಸಿದ ನ್ಯಾಯಾಲಯ, ತಲಾ 1 ಲಕ್ಷ ರು. ಮೌಲ್ಯದ ವೈಯಕ್ತಿಕ ಬಾಂಡ್‌ ಮತ್ತು 10 ಸಾವಿರ ರು. ನಗದು ಭದ್ರತೆ ಒದಗಿಸುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿತು. ಸೆ.19ಕ್ಕೆ ವಿಚಾರಣೆ ಮುಂದೂಡಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ಡಿಕೆಶಿ ಕದ ಹಾಕಿ, ಒತ್ತಾಯದಿಂದ ರಾಜೀನಾಮೆ ಪಡೆದ್ರು: ಬಸವರಾಜ ಹೊರಟ್ಟಿ
ಕೆಪಿಎಸ್ಸಿ ನೇಮಕಾತಿ ಅಕ್ರಮ: ಐಎಎಸ್‌ ಜ್ಞಾನೇಂದ್ರ ಬಂಧನ, ಸಾಹುಕಾರ್‌, ಇತರರಿಗೀಗ ನಡುಕ ಶುರು!