ಗೋಹತ್ಯೆ ನಿಷೇಧ ಕಾಯ್ದೆ ಪುನರ್‌ ಪರಿಶೀಲಿಸಿ: ಉಜ್ಜಯನಿ ಜಗದ್ಗುರು

Published : Aug 14, 2023, 05:03 AM IST
ಗೋಹತ್ಯೆ ನಿಷೇಧ ಕಾಯ್ದೆ ಪುನರ್‌ ಪರಿಶೀಲಿಸಿ: ಉಜ್ಜಯನಿ ಜಗದ್ಗುರು

ಸಾರಾಂಶ

ಯಾವುದೇ ಕಾರಣಕ್ಕೂ ಗೋಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯಬಾರದು. ಲವ್‌ ಜಿಹಾದ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾಧು ಸಂತರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮುದಗಲ್‌ (ಆ.14) :  ಪವಿತ್ರವಾದ ಹಿಂದೂ ಧರ್ಮದಲ್ಲಿ ಗೋವಿಗೆ ವಿಶೇಷವಾದ ಸ್ಥಾನ ಮಾನವಿದೆ. ಈ ಹಿಂದೆ ಜಾರಿಗೆ ತಂದ ಬಿಜೆಪಿ ಸರಕಾರದ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಈಗಿನ ಸರಕಾರ ರದ್ದು ಗೊಳಿಸಿರುವದು ಹಿಂದೂ ಧರ್ಮಕ್ಕೆ ನೋವನ್ನುಂಟು ಮಾಡಿದೆ. ಸರಕಾರ ಅದನ್ನು ಮರು ಪರಿಶೀಲಿಸಿ ಗೋ ಹತ್ಯೆ ಕಾಯ್ದೆಯನ್ನು ಪುನರ್‌ ಪರಿಶೀಲಿಸಬೇಕು, ಅದನ್ನು ಮರಳಿ ಜಾರಿಗೆಗೆ ತರಬೇಕು ಎಂದು ಉಜ್ಜಯನಿ ಪೀಠದ ಜಗದ್ಗುರು ಡಾ: ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡರು.

ಸಮಿಪದ ಸುಕ್ಷೇತ್ರ ಸಜ್ಜಲಗುಡ್ಡದ ಯಾತ್ರಿ ನಿವಾಸದಲ್ಲಿ ರವಿವಾರ ಉಜ್ಜಯನಿ ಸಂಸ್ಥಾನ ಪೂಜಾ ಕೈಂಕರ್ಯದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರಕಾರ ಮಠ ಮಾನ್ಯಗಳಿಗೆ ನೀಡಿದ ಅನುದಾನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರ ಕುರಿತು ಕೇಳಿರುವುದಕ್ಕೆ ಸಿಎಂ ಪ್ರತಿಕ್ರಿಯನ್ನು ಗಮನಿಸಲಾಗಿದೆ. ನೈಜವಾದ ಕಾಮಗಾರಿಗಳು ಎಲ್ಲಿ ನಡೆದಿವೆಯೋ ಅಲ್ಲಿ ಅನುದಾನವನ್ನು ಬಿಡುಗಡೆಗೊಳಿಸಲಾಗುವುದು ಎಂದು ಹೇಳಿರುವದನ್ನು ಗಮನಿಸಬೇಕಾಗಿದೆ.

 

ರೈತರ ಅನುಕೂಲಕ್ಕೆ ತಕ್ಕಂತೆ ಗೋಹತ್ಯೆ ನಿಷೇಧ ಕಾಯ್ದೆಗೆ ಚಿಂತನೆ: ಸಚಿವ ರಾಜಣ್ಣ

ಮಠ ಮಾನ್ಯಗಳ ಅಭಿವೃದ್ಧಿಗೆ ಮುಖ್ಯಮಂತಿ ್ರಗಳು ಮುಂದಾಗುವ ವಿಶ್ವಾಸ ವ್ಯಕ್ತಪಡಿಸಿದರು. ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಮರಳಿ ಪಡೆದಿರುವದರ ಕುರಿತು ಕೇಳಿರುವದಕ್ಕೆ ಸರಕಾರ ಈ ವಿಷಯದಲ್ಲಿ ಎಡವಿದೆ, ಇದರಿಂದ ನಮಗೂ ನೋವು ತಂದಿದೆ. ಹಿಂದೂ ಧರ್ಮದಲ್ಲಿ ಗೋವಿಗೆ ವಿಶೇಷ ಸ್ಥಾನಮಾನವಿದ್ದು, ಯಾವುದೇ ಧಾರ್ಮಿಕ ಕಾರ್ಯಕ್ರಮಗಳಲ್ಲಿ, ಮನೆಗಳ, ಮಠ ಮಾನ್ಯಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಗೋವು ಪ್ರವೇಶಿಸಿದ ನಂತರ ನಾವು ನೀವೆಲ್ಲ ಪ್ರವೇಶ ಮಾಡುವದು ಧಾರ್ಮಿಕ ನಂಬಿಕೆಯಾಗಿದೆ. ಸರಕಾರ ಇದನ್ನು ಪುನರ್‌ ಪರಿಶೀಲಿಸಬೇಕು, ಮರಳಿ ಗೋ-ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದರು. ಆದರೂ ಸರಕಾರದ ನಿರ್ಧಾರವನ್ನು ನಾವು ನೀವೆಲ್ಲ ನಿರೀಕ್ಷಿಸಬೇಕಾಗಿದೆ ಎಂದರು.

ಈ ಸಮಯದಲ್ಲಿ ಗುಡದೂರಿನ ಶ್ರೀ ನೀಲಕಂಠಯ್ಯ ತಾತನವರು, ಶ್ರೀ ಸಿದ್ಧಲಿಂಗ ಶಿವಾಚಾರ್ಯರು ವಿರುಪಾಪೂರ, ಶಿವಬಸಯ್ಯ ಸಜ್ಜಲಗುಡ್ಡ ಸೇರಿದಂತೆ ಇತರರಿದ್ದರು.

ಗೋಹತ್ಯೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಹಿಂಜಾವೇ ಮುಖಂಡ ಒತ್ತಾಯ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ