
ಬೆಂಗಳೂರು(ಡಿ.31): ಸೊಂಟದ ಮೂಳೆ ಮುರಿತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಾಲುಮರದ ತಿಮ್ಮಕ್ಕ ಅವರು ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಗುಣಮುಖರಾಗಿದ್ದು, 24 ದಿನಗಳ ನಂತರ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸಾಲು ಮರದ ತಿಮ್ಮಕ್ಕ ಅವರು ಡಿ.6ರಂದು ಮನೆಯಲ್ಲೇ ಕುಸಿದು ಬಿದ್ದಿದ್ದರಿಂದ ಸೊಂಟದ ಮೂಳೆ ಮುರಿದಿತ್ತು. ಹಾಸನ ಜಿಲ್ಲೆಯ ಬೇಳೂರಿನ ತಮ್ಮ ನಿವಾಸದಲ್ಲಿ ತಿಮ್ಮಕ್ಕ ಬಿದ್ದಿದ್ದರು.
ಮೂಳೆ ಪೆಟ್ಟು: ಸಾಲುಮರದ ತಿಮ್ಮಕ್ಕಗೆ ಇಂದು ಶಸ್ತ್ರಚಿಕಿತ್ಸೆ
ಅವರನ್ನು ಹಾಸನದ ಮಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸೋಮವಾರ ಆ್ಯಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿರುವ ವೈದ್ಯರು, ತಿಮ್ಮಕ್ಕ ಅವರು ಆಸ್ಪತ್ರೆಗೆ ದಾಖಲಾದ ಕೂಡಲೇ ಸ್ಕಾ್ಯನಿಂಗ್ ನಡೆಸಿದ್ದು ಸೊಂಟದ ಮೂಳೆ ಕ್ರ್ಯಾಕ್ ಆಗಿರುವುದು ಕಂಡು ಬಂದಿತ್ತು. ಹೀಗಾಗಿ ಸಣ್ಣ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದೀಗ ಸಂಪೂರ್ಣ ಗುಣಮುಖರಾಗಿರುವುದರಿಂದ ಬಿಡುಗಡೆ ಮಾಡಿದ್ದೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ