
ಬೆಂಗಳೂರು (ಫೆ.16): ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೃಷಿ ಇಲಾಖೆ ರಾಯಭಾರಿಯನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.
"
ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ದರ್ಶನ್ರನ್ನು ನೇಮಿಸಿ ಆದೇಶಿಸಿದೆ. ಕೃಷಿ ಇಲಾಖೆಯ ರಾಯಭಾರಿಯಾಗಿ ಕೆಲಸ ನಿರ್ವಹಿಸಲು ಯಾವುದೇ ಸಂಭಾವನೆ ಇಲ್ಲದೇ ದುಡಿಯುವುದಾಗಿ ದರ್ಶನ್ ಒಪ್ಪಿಕೊಂಡಿದ್ದಾರೆ.
ರಾಬರ್ಟ್ ತೆಲುಗು ಡಬ್ಬಿಂಗ್ ರೈಟ್ಸ್ ಎಷ್ಟು ಮೊತ್ತಕ್ಕೆ ಮಾರಾಟವಾಗಿದೆ ಗೊತ್ತಾ? ...
ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ರೈತರೊಂದಿಗೆ ಒಂದು ದಿನ ಕಾರ್ಯಕ್ರಮವನ್ನು ದರ್ಶನ್ ಮೆಚ್ಚಿದ್ದರು. ಸ್ವತಃ ಕೃಷಿಕರೂ ಆಗಿರುವ ದರ್ಶನ್ ಬಿ.ಸಿ.ಪಾಟೀಲ್ ಅವರೊಂದಿಗೆ ಚರ್ಚಿಸಿ ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ದರ್ಶನ್ ಅವರನ್ನು ನೇಮಕ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ