ಬೆಂಕಿ ಹಚ್ಚಿಕೊಂಡಿದ್ದ ಯಶ್ ಅಭಿಮಾನಿ ಸಾವು!

Published : Jan 09, 2019, 08:55 AM IST
ಬೆಂಕಿ ಹಚ್ಚಿಕೊಂಡಿದ್ದ ಯಶ್ ಅಭಿಮಾನಿ ಸಾವು!

ಸಾರಾಂಶ

ಯಶ್‌ ಹುಟ್ಟುಹಬ್ಬ ಆಚರಿಸದ್ದಕ್ಕೆ ಬೆಂಕಿ ಹಚ್ಚಿಕೊಂಡ ಅಭಿಮಾನಿ ಸಾವು| ರಾಕಿಂಗ್‌ ಸ್ಟಾರ್‌ ಮನೆ ಎದುರೇ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ| ಪಾವಗಡ ತಾಲೂಕಿನ ರವಿಗೆ ಶೇ.80 ಸುಟ್ಟಗಾಯ

ಬೆಂಗಳೂರು[ಜ.09]: ತಮ್ಮ ನೆಚ್ಚಿನ ನಟ ‘ರಾಕಿಂಗ್‌ ಸ್ಟಾರ್‌’ ಯಶ್ ಹುಟ್ಟು ಹಬ್ಬ ಆಚರಣೆಗೆ ನಿರಾಕರಿಸಿದ್ದರೆಂದು ಬೇಸರಗೊಂಡು, ಹೊಸಕೆರೆಹಳ್ಳಿಯಲ್ಲಿರುವ ಯಶ್‌ ಮನೆ ಎದುರೇ ಬೆಂಕಿ ಹಚ್ಚಿಕೊಂಡು ಆತ್ಮಾಹುತಿಗೆ ಯತ್ನಿಸಿದ್ದ ಅಭಿಮಾನಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಲಗ್ಗೆರೆಯ ನಿವಾಸಿ ರವಿ (28) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ್ದಾತ. ಮಂಗಳವಾರ ನಡೆದ ಘಟನೆಯಲ್ಲಿ ಶೇ.80 ರಷ್ಟು ಗಾಯಗೊಂಡಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಜೀವನ್ಮರಣ ಹೋರಾಟ ನಡೆಸುತ್ತಿದ್ದ ರವಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜನೆ ಕೊನೆಯುಸಿರೆಳೆದಿದ್ದಾನೆ. ಘಟನೆ ನಡೆದ ವೇಳೆ ಮನೆಯಲ್ಲಿ ಯಶ್‌ ಇರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಯಾವ ಕಾರಣಕ್ಕೆ ಯಶ್ ಬರ್ತ್‌ಡೆ ಸೆಲಬರೇಶನ್ ಬೇಡ ಅಂದ್ರು!

ರವಿ ಮೂಲತಃ ಪಾವಗಡ ತಾಲೂಕಿನವನಾಗಿದ್ದು, ಹಲವು ವರ್ಷಗಳಿಂದ ತನ್ನ ಪೋಷಕರ ಜತೆ ಲಗ್ಗೆರೆಯಲ್ಲಿ ನೆಲೆಸಿದ್ದ. ವೃತ್ತಿಯಲ್ಲಿ ಬಡಗಿಯಾದ ರವಿ, ಯಶ್‌ ಅವರ ಅಪ್ಪಟ ಅಭಿಮಾನಿಯಾಗಿದ್ದ. ಪ್ರತಿ ವರ್ಷ ಜ.8 ರಂದು ತನ್ನ ಮೆಚ್ಚಿನ ನಟನಿಗೆ ಹುಟ್ಟು ಹಬ್ಬದ ಶುಭ ಕೋರಲು ಅವರ ಮನೆಗೆ ಬರುತ್ತಿದ್ದ. ಆದರೆ ಈ ವರ್ಷ ಕನ್ನಡ ಚಿತ್ರರಂಗದ ಹಿರಿಯ ನಟ ಅಂಬರೀಷ್‌ ನಿಧನ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಜನ್ಮ ದಿನ ಆಚರಣೆಗೆ ನಿರಾಕರಿಸಿದ್ದ ಯಶ್‌, ಈ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ವಿಡಿಯೋ ಸಂದೇಶ ಮೂಲಕ ತಮ್ಮ ಅಭಿಮಾನಿಗಳಲ್ಲಿ ಶುಭ ಕೋರಲು ಮನೆಗೆ ಬರಬೇಡಿ ಎಂದು ವಿನಂತಿಸಿದ್ದರು. ಇದೇ ವೇಳೆ, ಇತ್ತೀಚಿನ ಐಟಿ ದಾಳಿ ಪ್ರಕರಣವು ಅವರಿಗೆ ಇರಿಸು ಮುರಿಸು ಉಂಟು ಮಾಡಿತ್ತು. ಇದೂ ಕೂಡ ಅವರು ಜನ್ಮದಿನ ಆಚರಿಸಿಕೊಳ್ಳದಿರಲು ಪ್ರಮುಖ ಕಾರಣ ಎಂನ್ನಲಗಿತ್ತು.

ಆದರೂ ಪ್ರತಿ ವರ್ಷದಂತೆ ರವಿ ಸೇರಿದಂತೆ ನೂರಾರು ಅಭಿಮಾನಿಗಳು, ಯಶ್‌ ಅವರಿಗೆ ಶುಭಕೋರಲು ಹೊಸಕೆರೆಹಳ್ಳಿಯಲ್ಲಿರುವ ಅವರ ಮನೆ ಮುಂದೆ ಬೆಳಗ್ಗೆಯಿಂದಲೇ ನೆರೆದಿದ್ದರು. ಆದರೆ ತಮ್ಮ ಮಾತಿಗೆ ಬದ್ಧರಾದ ಯಶ್‌, ಜನ್ಮದಿನ ಆಚರಿಸದೇ ತಮ್ಮ ಕುಟುಂಬದ ಸದಸ್ಯರ ಜತೆ ಹೊರ ಹೋಗಿದ್ದರು.

ಇಂಥ ಕೆಲಸ ಮಾಡ್ಕೊಂಡ್ರೆ ನಾನಂತೂ ಬರಲ್ಲ.. ಯಶ್‌ ಬೇಸರಕ್ಕೆ ಕಾರಣವೇನು?

ಈ ವೇಳೆ ಮಧ್ಯಾಹ್ನದವರೆಗೆ ನಟನಿಗೆ ಮನೆ ಮುಂದೆ ಕಾದ ರವಿ, ಕೊನೆಗೆ ಬೇಸತ್ತು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ತಕ್ಷಣವೇ ಅಲ್ಲಿ ಭದ್ರತೆ ನಿಯೋಜಿತರಾಗಿದ್ದ ಪೊಲೀಸರು, ರವಿ ಅವರ ರಕ್ಷಣೆಗೆ ಧಾವಿಸಿದ್ದರು. ನೀರು ಸುರಿದು ಬೆಂಕಿ ನಂದಿಸಿದ ಪೊಲೀಸರು, ಕೂಡಲೇ ಅಂಬ್ಯುಲೆನ್ಸ್‌ನಲ್ಲಿ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಅದರೀಗ ಚಿಕಿತ್ಸೆ ಫಲಕರಿಯಾಗದೆ ರವಿ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ಸಂಬಂಧ ಗಿರಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಟ್ರಾಫಿಕ್ ಸಮಸ್ಯೆ ಮಾತ್ರವಲ್ಲ, ಇಂಗಾಲ ಹೊರಸೂಸುವಿಕೆಯಲ್ಲಿ ಕೂಡ ದೇಶದಲ್ಲೇ ಅಗ್ರ ಸ್ಥಾನ ಪಡೆದ ಬೆಂಗಳೂರು!
ಕನ್ನಡದ 'ತ್ರಿಮೂರ್ತಿ'ಗಳ ಸಂಗಮಕ್ಕೆ ಸಾಕ್ಷಿಯಾಗಲಿದ್ದಾರೆ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್