ನಟ ಸೈಫ್ ಪುತ್ರಿ ಸಾರಾ ಅಲಿಖಾನ್‌ ಹುಬ್ಬಳ್ಳಿ ಚಂದ್ರಮೌಳೇಶ್ವರ ದೇಗುಲಕ್ಕೆ ಭೇಟಿ: ಬಾಲಿವುಡ್ ತಾರೆಯ ಫೋಟೋ ವೈರಲ್!

Published : Apr 05, 2025, 07:14 AM ISTUpdated : Apr 05, 2025, 10:50 AM IST
ನಟ ಸೈಫ್ ಪುತ್ರಿ ಸಾರಾ ಅಲಿಖಾನ್‌ ಹುಬ್ಬಳ್ಳಿ ಚಂದ್ರಮೌಳೇಶ್ವರ ದೇಗುಲಕ್ಕೆ ಭೇಟಿ: ಬಾಲಿವುಡ್ ತಾರೆಯ ಫೋಟೋ ವೈರಲ್!

ಸಾರಾಂಶ

ಬಾಲಿವುಡ್‌ ನಟಿ ಸಾರಾ ಅಲಿಖಾನ್‌ ಇತ್ತೀಚಿಗೆ ಹುಬ್ಬಳ್ಳಿಯ ಪುರಾತನ ದೇವಸ್ಥಾನವಾಗಿರುವ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಆ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಹುಬ್ಬಳ್ಳಿ (ಏ.5): ಬಾಲಿವುಡ್‌ ನಟಿ ಸಾರಾ ಅಲಿಖಾನ್‌ ಇತ್ತೀಚಿಗೆ ಹುಬ್ಬಳ್ಳಿಯ ಪುರಾತನ ದೇವಸ್ಥಾನವಾಗಿರುವ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಆ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ನಟ ಸೈಫ್‌ ಅಲಿಖಾನ್‌ ಪುತ್ರಿ ಸಾರಾ ಅಲಿಖಾನ್‌ ಹುಬ್ಬಳ್ಳಿಯ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು, ದೇವಸ್ಥಾನದ ಎದುರಿಗೆ ವಿವಿಧ ಭಂಗಿಗಳಲ್ಲಿ ಪೋಟೋ ತೆಗೆಸಿಕೊಂಡಿದ್ದಾರೆ. ಜತೆಗೆ ಆ ಚಿತ್ರಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಶಾಸಕ ಮೆಚ್ಚುಗೆ: ಸಾರಾ ಅಲಿಖಾನ್‌ ಹಾಕಿರುವ ಸ್ಟೋರಿಯ ಸ್ಕ್ರೀನ್‌ಶಾಟ್‌ನ್ನು ಶಾಸಕ ಮಹೇಶ ಟೆಂಗಿನಕಾಯಿ ಫೇಸ್‌ಬುಕ್‌ ಹಾಗೂ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಚಾಲುಕ್ಯರಿಂದ ನಿರ್ಮಾಣವಾದ ಹಾಗೂ ಅಮರ ಶಿಲ್ಪಕಲೆಗೆ ಪ್ರಸಿದ್ಧಿ ಪಡೆದಿರುವ ಹುಬ್ಬಳ್ಳಿಯ ಉಣಕಲ್‌ನಲ್ಲಿರುವ ಐತಿಹಾಸಿಕ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಶಿವ ಭಕ್ತೆಯಾದ ಬಾಲಿವುಡ್ ನಟಿ ಸಾರಾ ಅಲಿ ಖಾನ್ ಭೇಟಿ ನೀಡಿದ ವಿಷಯ ತಿಳಿದು ಸಂತೋಷವಾಗಿದೆ.

ಇದನ್ನೂ ಓದಿ: ಗುಟ್ಟಾಗಿ ಎಂಗೇಜ್​ಮೆಂಟ್​ ಮಾಡಿಕೊಂಡ್ರಾ ಸಾರಾ ಅಲಿಖಾನ್​? ಸೈಫ್​ ಪುತ್ರಿಯ ಕೈಹಿಡೀತೀರೋದ್ಯಾರು?

ಇಂತಹ ಐತಿಹಾಸಿಕ ಪ್ರೇಕ್ಷಣೀಯ ಸ್ಥಳಗಳಿಗೆ ಸೆಲೆಬ್ರಿಟಿಗಳು ಭೇಟಿ ನೀಡಿದಾಗ ನಮ್ಮ ದೇಶದ ಸಂಸ್ಕೃತಿ ಹಾಗೂ ಪರಂಪರೆ ಎಲ್ಲೆಡೆ ಪಸರಿಸುವುದಲ್ಲದೇ, ನಮ್ಮ ನಗರವು ಪ್ರವಾಸಿ ತಾಣವಾಗಿ ಬಿಂಬಿತಗೊಳ್ಳುವ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತದೆ ಎಂದು ಅಭಿನಂದನೆಯ ಮಾತು ಬರೆದುಕೊಂಡಿದ್ದಾರೆ.

ದೇವಸ್ಥಾನದ ಬಗ್ಗೆ ಕೊಂಚ:ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣಗೊಂಡಿರುವ ಚಂದ್ರಮೌಳೇಶ್ವರ ದೇವಸ್ಥಾನ ಅತ್ಯದ್ಭುತ ಶಿಲ್ಪಕಲೆಯಿಂದ ಗಮನ ಸೆಳೆಯುತ್ತಿದ್ದು, ಈ ದೇವಸ್ಥಾನ ಪುರಾತತ್ವ ಇಲಾಖೆಯ ಆಡಳಿತಕ್ಕೊಳಪಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ