
ಮಂಗಳೂರು(ಅ.09): ರಾಜ್ಯದ ಕರಾವಳಿ(Coastal Karnataka), ಮಲೆನಾಡು(Malnad) ಭಾಗದಲ್ಲಿ ಹೈ ಅಲರ್ಟ್ ನಡುವೆಯೇ ಮತ್ತೆ ಸ್ಯಾಟಲೈಟ್ ಫೋನ್(satellite Phone) ರಿಂಗಣಿಸಿದೆ. ಈ ಭಾಗದ ಐದಕ್ಕೂ ಹೆಚ್ಚು ಕಡೆ ಸ್ಯಾಟಲೈಟ್ ಫೋನ್ ಕರೆ ಸಕ್ರಿಯ ಆಗಿರುವುದು ಬೆಳಕಿಗೆ ಬಂದಿದೆ. ದೇಶಾದ್ಯಂತ ಉಗ್ರರ ಆತಂಕ ಇರುವ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ವಿಭಾಗ(Intelligence Department) ಈಗಾಗಲೇ ಸ್ಯಾಟಲೈಟ್ ಫೋನ್ ಕುರಿತು ಎಚ್ಚರಿಕೆ ನೀಡಿದ್ದು, ಹೈಅಲರ್ಟ್(High Alert) ಆಗಿರುವಂತೆ ಸೂಚಿಸಿದೆ.
ದೇಶದಲ್ಲಿ ಉಪಗ್ರಹ ಇಂಟರ್ನೆಟ್ ಆರಂಭಕ್ಕೆ ಶ್ರೀಮಂತರ ಪೈಪೋಟಿ!
ರಾಜ್ಯ ಕರಾವಳಿ ಹಾಗೂ ಮಲೆನಾಡು(Malnad) ಭಾಗದ ಗುಡ್ಡಗಾಡು ಪ್ರದೇಶದಲ್ಲಿ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಕೇಂದ್ರ ಗುಪ್ತಚರ ವಿಭಾಗ ಮೊದಲೇ ಮಾಹಿತಿ ಕಲೆಹಾಕಿತ್ತು. ಇಲ್ಲಿಂದ ಪದೇ ಪದೆ ಸ್ಯಾಟಲೈಟ್ ಫೋನ್ ಕಾರ್ಯಾಚರಿಸುತ್ತಿರುವುದು ಹಿಂದೆಯೇ ಬೆಳಕಿಗೆ ಬಂದಿತ್ತು. ಇದೀಗ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಮೂಡುಬಿದಿರೆ ಮತ್ತು ಮುಡಿಪು, ಚಿಕ್ಕಮಗಳೂರಿನ(Chikkamagaluru) ಎರಡು ಕಡೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ದಟ್ಟಅರಣ್ಯ ಪ್ರದೇಶದಲ್ಲಿ ಒಂದು ವಾರದ ಹಿಂದೆ ಸ್ಯಾಟಲೈಟ್ ಫೋನ್ ಆ್ಯಕ್ಟಿವ್ ಆಗಿರುವ ಮಾಹಿತಿ ಲಭಿಸಿದೆ.
3 ಬಾರಿ:
ಕೇಂದ್ರ ಗುಪ್ತಚರ ವಿಭಾಗ ಒಂದು ವರ್ಷದಿಂದ ಈ ಬಗ್ಗೆ ನಿಗಾ ಇರಿಸಿದ್ದು, ಒಂದೇ ವರ್ಷದಲ್ಲಿ ಸ್ಯಾಟಲೈಟ್ ಫೋನ್ ಕರೆ ಪತ್ತೆಯಾಗುತ್ತಿರುವುದು ಇದು ಮೂರನೇ ಬಾರಿ. ಈ ವಿಚಾರ ಇತ್ತೀಚೆಗೆ ವಿಧಾನಮಂಡಲ ಅಧಿವೇಶನದಲ್ಲೂ ಪ್ರಸ್ತಾಪಗೊಂಡಿತ್ತು. ಗೃಹ ಸಚಿವರು ಸ್ಯಾಟಲೈಟ್ ಫೋನ್ ಕರೆ ಬಗ್ಗೆ ಸದನದಲ್ಲಿ ಮಾತನಾಡಿದ್ದರು.
ರಾಜ್ಯದಲ್ಲಿ ಈ ವರ್ಷ 220 ಸಲ ಸ್ಯಾಟಲೈಟ್ ಫೋನ್ ಬಳಸಿ ಕರೆ!
ಹೈಅಲರ್ಟ್ ನಡುವೆಯೂ ರಾಜ್ಯದಲ್ಲಿ ಸ್ಯಾಟಲೈಟ್ ಫೋನ್ಗಳು ಮತ್ತೆ ಆ್ಯಕ್ಟಿವ್ ಆಗಿರುವ ಬಗ್ಗೆ ಗುಪ್ತಚರ ವಿಭಾಗ ತನಿಖೆ ಚುರುಕುಗೊಳಿಸಿದೆ. ರಾಜ್ಯದ ಐದು ಕಡೆ ಸ್ಯಾಟಲೈಟ್ ಫೋನ್ ಕರೆ ಪತ್ತೆಯಾಗಿದೆ. ಸ್ಯಾಟಲೈಟ್ ಫೋನ್ ಮೂಲಕ ಅಪರಿಚಿತರು ಸಂಪರ್ಕ ಸಾಧಿಸುತ್ತಿದ್ದು, ಯಾರೊಂದಿಗೆ, ಯಾರಾರಯರು ಸಂಪರ್ಕದಲ್ಲಿ ಇದ್ದಾರೆ ಎಂಬ ಮಾಹಿತಿ ಇನ್ನೂ ನಿಗೂಢವಾಗಿಯೇ ಇದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಸ್ಯಾಟಲೈಟ್ ಫೋನ್ಗಳು ಸಕ್ರಿಯ ಆಗಿರುವ ಕುರಿತು ಕೇಂದ್ರದ ಗುಪ್ತಚರ ವರದಿಯನ್ನು ಆಧರಿಸಿ ‘ಕನ್ನಡಪ್ರಭ’ ಸೆ.16ರಂದು ವರದಿ ಪ್ರಕಟಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ