'ಹಿಂದು ಅಶ್ಲೀಲ ಪದ' ಸತೀಶ್ ಜಾರಕಿಹೊಳಿ ಹೇಳಿಕೆಗೆ ಈಶ್ವರಪ್ಪ ಆಕ್ರೋಶ

Published : Nov 08, 2022, 02:43 PM ISTUpdated : Nov 08, 2022, 02:44 PM IST
'ಹಿಂದು ಅಶ್ಲೀಲ ಪದ' ಸತೀಶ್ ಜಾರಕಿಹೊಳಿ ಹೇಳಿಕೆಗೆ ಈಶ್ವರಪ್ಪ ಆಕ್ರೋಶ

ಸಾರಾಂಶ

ಹಿಂದು ಎನ್ನುವ ಪದಕ್ಕೆ, ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಮಾತು ಆಡಿದರೇ ತಿಂದ ಅನ್ನ ಕರಗುವುದಿಲ್ಲ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಕೆ.ಎಸ್.ಈಶ್ವರಪ್ಪ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ (ನ.8): ಹಿಂದು ಎನ್ನುವ ಪದಕ್ಕೆ, ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಮಾತು ಆಡಿದರೇ ತಿಂದ ಅನ್ನ ಕರಗುವುದಿಲ್ಲ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಕೆ.ಎಸ್.ಈಶ್ವರಪ್ಪ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು, ಅವರ ಹೇಳಿಕೆಯನ್ನು ಸುರ್ಜೇವಾಲಾ ಖಂಡನೆ ಮಾಡಿದ್ದಾರೆ. ಅವರು ಹೇಳಿದ ಮೇಲೂ ನನ್ನ ಮಾತಿಗೆ ಬದ್ದ ಎನ್ನುವ ಮೂಲಕ ಜಾರಕಿಹೊಳಿ ಸೊಕ್ಕಿನ ಮಾತಾಡಿದ್ದಾರೆ. ಕಾಂಗ್ರೆಸ್ಸಿಗರಿಗೆ ಶಕ್ತಿ ಇದ್ದರೆ ಕ್ರಮ ಕೈಗೊಳ್ಳಲಿ. ಪಕ್ಷದಿಂದ ಅಮಾನತುಗೊಳಿಸಲಿ ಎಂದು ಒತ್ತಾಯಿಸಿದರು.

ಜಾರಕಿಹೊಳಿ ಹಿಂದು ಅಶ್ಲೀಲ ಹೇಳಿಕೆ ಹಿನ್ನೆಲೆ; ಇಂದಿನಿಂದ ಸ್ವಾಭಿಮಾನಿ ಹಿಂದು ಅಭಿಯಾನ -ಸುನೀಲ್ ಕುಮಾರ್

ಸೋನಿಯಾಗಾಂಧಿ ಹಾಗೂ ಮುಸಲ್ಮಾನರನ್ನು ಮೆಚ್ಚಿಸಲು ಈ ರೀತಿ ಮಾತನಾಡುತ್ತಿದ್ದಾರೆ. ವಾಲ್ಮೀಕಿ ರಕ್ತ ಹಂಚಿಕೊಂಡು ಜಾರಕಿಹೊಳಿ ಹುಟ್ಟಿದ್ದಾರೆ. ಮೊದಲು ಹಿಂದುಗಳ ಕ್ಷಮೆ ಕೇಳಬೇಕು. ಕ್ಷಮೆ ಕೇಳದಿದ್ದರೆ ಮುಂದಿನ ಚುನಾವಣೆಯಲ್ಲಿ ಹಿಂದುಗಳು ಬುದ್ದಿ ಕಲಿಸುತ್ತಾರೆ ಎಂದರು.

ಜನ ಸಂಕಲ್ಪ ಯಾತ್ರೆ ಕುರಿತು ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಸಿದ್ದರಾಮೋತ್ಸವ ಕಾರ್ಯಕ್ರಮದ ಬಗ್ಗೆ ಲೆಕ್ಕ ಕೊಡಿ ಮೊದಲು. ಸಿದ್ದರಾಮಯ್ಯ ಈ ಮೊದಲು ಸೋನಿಯಾಗಾಂಧಿ ಮೆಚ್ಚಿಸಬೇಕಿತ್ತು. ಈಗ ಖರ್ಗೆ ಅವರನ್ನು ಮೆಚ್ಚಿಸಲು ಹೊರಟ್ಟಿದ್ದಾರೆ. ಖರ್ಗೆ ಮೆಚ್ಚಿಸಿ ಎಲ್ಲಾದರೂ ಟಿಕೇಟ್ ಪಡೆಯಬೇಕು ಅಂತಾ ಒದ್ದಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಚಾಮುಂಡೇಶ್ವರಿಯಲ್ಲಿ ಸೋತು‌ ಬಾದಾಮಿಗೆ ಹೋದರು. ಈಗ ಬಾದಾಮಿಯಲ್ಲಿ ಸೋಲ್ತೀನಿ ಅಂತಾ ಗೊತ್ತಾಗಿ ಬೇರೆ ಕ್ಷೇತ್ರ ಹುಡುಕಾಡುತ್ತಿದ್ದಾರೆ. ಅವರು ಗೆಲ್ಲೋದು ಕಷ್ಟ, ಇನ್ನು ಖರ್ಗೆ ಅವರಿಗೆ ಗಿಫ್ಟ್ ಏನು ಕೊಡ್ತಾರೆ ? ಅವರ ಮಾತೇ ಹಾಸ್ಯಾಸ್ಪದ ಎಂದು ಹೇಳಿದರು. ಹಿಂದು ಅನ್ನೋದು ಅಶ್ಲೀಲ ಪದ, ಇದು ಪರ್ಷಿಯಾದಿಂದ ಬಂದಿದ್ದು: ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ