ಸಹೋದರ ರಮೇಶ್ ಬಗ್ಗೆ ಮಾತನಾಡಿದ ಸತೀಶ್ ಜಾರಕಿಹೊಳಿ: ಹೇಳಿದ್ದೇನು?

Published : Jan 31, 2019, 08:11 AM IST
ಸಹೋದರ ರಮೇಶ್ ಬಗ್ಗೆ ಮಾತನಾಡಿದ ಸತೀಶ್ ಜಾರಕಿಹೊಳಿ: ಹೇಳಿದ್ದೇನು?

ಸಾರಾಂಶ

ಸ್ವ ಇಚ್ಛೆಯಿಂದ ರಮೇಶ| ಪಕ್ಷದಿಂದ ಹೋಗಿದ್ದಾರೆ: ಸತೀಶ| 1 ತಿಂಗಳಿಂದ ಅವರೆಲ್ಲಿದ್ದಾರೋ ಗೊತ್ತಿಲ್ಲ

ಬೆಂಗಳೂರು[ಜ.31]: ಗೋಕಾಕ್‌ ಶಾಸಕ ರಮೇಶ್‌ ಜಾರಕಿಹೊಳಿ ನನ್ನ ಸಹೋದರನಾದರೂ ಇಬ್ಬರ ವ್ಯವಹಾರ ಹಾಗೂ ವಸತಿ ಪ್ರತ್ಯೇಕವಾಗಿಯೇ ಇದೆ. ಅವರನ್ನು ಯಾರೂ ಬಲವಂತವಾಗಿ ಹಿಡಿದಿಟ್ಟುಕೊಂಡಿಲ್ಲ. ಅವರೇ ಸ್ವ ಇಚ್ಛೆಯಿಂದ ಪಕ್ಷದಿಂದ ಹೋಗಿದ್ದಾರೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್‌ ಜಾರಕಿಹೊಳಿ ಅವರು ಕಳೆದ ಒಂದು ತಿಂಗಳಿನಿಂದ ನನ್ನ ಸಂಪರ್ಕಕ್ಕೆ ಲಭ್ಯವಾಗಿಲ್ಲ. ರಮೇಶ್‌ ಜಾರಕಿಹೊಳಿ ಎಲ್ಲಿದ್ದಾರೆಂಬುದು ನನಗೆ ಗೊತ್ತಿಲ್ಲ. ರಮೇಶ್‌ ಜಾರಕಿಹೊಳಿ ಅವರನ್ನು ಯಾರೂ ಸಹ ಬಲವಂತವಾಗಿ ಹಿಡಿದಿಟ್ಟುಕೊಂಡಿಲ್ಲ. ಅವರೇ ಸ್ವ ಇಚ್ಛೆಯಿಂದ ಪಕ್ಷದಿಂದ ಹೋಗಿದ್ದಾರೆ. ಈಗಾಗಲೇ ಕೆಪಿಸಿಸಿ ಶೋಕಾಸ್‌ ನೋಟಿಸ್‌ ನೀಡಿರುವುದರಿಂದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ರಮೇಶ್‌ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಹೇಳಿದರು.

ಅವರನ್ನು ನಾನು ಭೇಟಿಯಾಗಿ ಒಂದು ತಿಂಗಳಾಗಿದೆ. ಗೋಕಾಕ್‌ನಲ್ಲೂ ಇಲ್ಲ. ಎಲ್ಲಿಯೂ ಭೇಟಿ ಮಾಡಲು ಸಾಧ್ಯವಾಗಿಲ್ಲ. ಯಾರಿಗೂ ಅವರ ಬಗೆಗಿನ ವಿಚಾರ ತಿಳಿದಿಲ್ಲ. ಬಂದ ಮೇಲೆ ಅವರೊಂದಿಗೆ ಮಾತನಾಡುತ್ತೇನೆ. ರಾಜಕೀಯ, ವ್ಯಾವಹಾರಿಕವಾಗಿ ಅವರ ಜತೆ ಸಂಪರ್ಕ ಕಡಿಮೆ. ಕಾದು ನೋಡುತ್ತಿದ್ದೇವೆ. ಸದ್ಯದಲ್ಲೇ ಸಿದ್ದರಾಮಯ್ಯ ಅವರ ಮುಂದೆ ಹಾಜರಾಗಬಹುದು ಎಂದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನೊಂದವರಿಗೆ ನ್ಯಾಯ ಕೊಡಿಸುವಲ್ಲಿ ರಾಜ್ಯ ಮೊದಲ ಸ್ಥಾನ: ಗೃಹಸಚಿವ ಪರಮೇಶ್ವರ್
ಜಿಎಸ್‌ಟಿ ದರ ಬದಲಾವಣೆ ಬಳಿಕ ವಾಣಿಜ್ಯ ತೆರಿಗೆ ಸಂಗ್ರಹ ಕುಸಿತ