ಬೆಳಗಾವಿ ಎಪಿಎಂಸಿ: ಅವಿರೋಧ ಆಯ್ಕೆಯೋ ಚುನಾವಣೆಯೋ?

Published : Oct 14, 2018, 05:56 PM ISTUpdated : Oct 14, 2018, 06:00 PM IST
ಬೆಳಗಾವಿ ಎಪಿಎಂಸಿ: ಅವಿರೋಧ ಆಯ್ಕೆಯೋ ಚುನಾವಣೆಯೋ?

ಸಾರಾಂಶ

ಬೆಳಗಾವಿ ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ! ಅವಿರೋಧ ಆಯ್ಕೆ ಮೂಲಕ ಅಭ್ಯರ್ಥಿ ಆಯ್ಕೆಗೆ ಒಲವು! ಶಾಸಕ ಸತೀಶ್ ಜಾರಕಿಹೋಳಿ ಭರವಸೆ! ಎಪಿಎಂಸಿ ಅಭಿವೃದ್ಧಿ ದೃಷ್ಠಿಯಿಂದ ಅವಿರೋಧ ಆಯ್ಕೆ

ಬೆಳಗಾವಿ(ಅ.14): ನಾಳೆ ಬೆಳಗಾವಿಯ ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯಲಿದ್ದು, ಅವಿರೋಧ ಆಯ್ಕೆ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ಶಾಸಕ ಸತೀಶ್ ಜಾರಕಿಹೋಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಈ ಕುರಿತು ಮಾತನಾಡಿದ ಸತೀಶ್, ಆಯ್ಕೆಯಾದ ಎಲ್ಲಾ ಎಪಿಎಂಸಿ ಸದಸ್ಯರು ಒಗ್ಗಟ್ಟಾಗಿ ಇದ್ದಾರೆ ಎಂದು ತಿಳಿಸಿದರು. ಪಕ್ಷ, ಗುಂಪು ಎಂಬ ಯಾವುದೇ ವ್ಯತ್ಯಾಸವಿಲ್ಲದೇ ಎಪಿಎಂಸಿ ಅಭಿವೃದ್ಧಿ ದೃಷ್ಠಿಯಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.

"

ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡುವುದು ತಮ್ಮ ಆದ್ಯತೆಯಾಗಿದ್ದು, ಇಂದು ಸಂಜೆ ಮುಖಂಡರು, ಎಪಿಎಂಸಿ ಸದಸ್ಯರ ಜೊತೆ ಸಭೆ ನಡೆಸುತ್ತೇನೆ ಎಂದು ಸತೀಶ್ ಮಾಹಿತಿ ನೀಡಿದರು.

ಕಳೆದ ಬಾರಿ ನಡೆದ ತುರುಸಿನ ಪೈಪೋಟಿ ಈ ಬಾರಿ ಆಗದು ಎಂದು ವಿಶ್ವಾಸ ವ್ಯಕ್ತಪಡಿಸಿದ ಸತೀಶ್, ಎಲ್ಲರ ಅಭಿಪ್ರಾಯ ಪಡೆದು ಈ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!