
ಬೆಳಗಾವಿ (ಫೆ.15):ಬೆಳಗಾವಿ ಮಹಾನಗರ ಪಾಲಿಕೆಯ 22 ನೇ ಅವಧಿಗೆ ನೂತನ ಮೇಯರ್ ಆಗಿ ಸವಿತ ಕಾಂಬಳೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಆ ಮೂಲಕ 5 ವರ್ಷಗಳ ಬಳಿಕ ಬೆಳಗಾವಿ ಮಹಾನಗರಕ್ಕೆ ಕನ್ನಡ ಭಾಷಿಕರೊಬ್ಬರು ಮೇಯರ್ ಆಗಿದ್ದಾರೆ.
ಬಿಜೆಪಿಯ ಮೊದಲ ಕನ್ನಡ ಭಾಷಿಕ ಮೇಯರ್ ಎಂಬ ಕೀರ್ತಿಗೂ ಸವಿತಾ ಕಾಂಬಳೆ ಪಾತ್ರರಾದಂತಾಗಿದೆ. ಇದುವರೆಗೆ ಬಿಜೆಪಿಯಿಂದ ಕನ್ನಡ ಭಾಷಿಕರೊಬ್ಬರು ಮೇಯರ್ ಆಗಿರಲಿಲ್ಲ. ಪಾಲಿಕೆ ಮೇಯರ್ ಆಗಲು ಬಯಸಿದ್ದ ಮರಾಠಿ ಭಾಷಿಕ ಲಕ್ಷ್ಮಿ ರಾಥೋಡ್ ನಾಮಪತ್ರ ಹಿಂಪಡೆದ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆಣ್ಣವರ ನೂತನ ಮೇಯರ್ ಆಗಿ ಸವಿತಾ ಕಾಂಬಳೆ ಹೆಸರು ಘೋಷಣೆ ಮಾಡಿದರು. ಪಾಲಿಕೆ ಸದಸ್ಯೆ ಆಗುವ ಮೊದಲು ಸವಿತಾ ಕಾಂಬಳೆ ವಿವಿಧ ಕಂಪನಿಗಳಲ್ಲಿ ಸಾಮಾನ್ಯ ಕಾರ್ಮಿಕರಾಗಿ ಸೇವೆ ಸಲ್ಲಿಸಿದ್ದರು.
ಬೆಳಗಾವಿ: ಸಿದ್ದು ಸರ್ಕಾರದ ವಿರುದ್ಧ ಪ್ರತಿಭಟನೆ, 27 ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು
ಲೋಕಸಭಾ ಚುನಾವಣೆಗೆ ಕನ್ನಡ ಭಾಷಿಕ, ಮರಾಠಿ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಕನ್ನಡ ಭಾಷಿಕರಾಗಿರುವ ಸಾಮಾನ್ಯ ಕಾರ್ಮಿಕ ಮಹಿಳೆಗೆ ಮೇಯರ್, ಉಪಮೇಯರ್ ಆಗಿ ಮರಾಠಿ ಭಾಷಿಕರಿಗೆ ನೀಡುವ ಮೂಲಕ ರಾಜಕೀಯ ಚಾಣಕ್ಷತನ ತೋರಿದೆ. ಕೇಸರಿ ಪೇಠಾ ತೊಟ್ಟು ಪರಿಷತ್ ಸಭಾಭವನಕ್ಕೆ ಬಂದ ಬಿಜೆಪಿ ಸದಸ್ಯರು ಮೇಯರ್ ಚೇಂಬರ್ನಿಂದ ಬರುವಾಗ ಜೈ ಶ್ರೀರಾಮ್ ಘೋಷಣೆ ಕೂಗಿದ್ದು ವಿಶೇಷವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ