ಸರ್ಕಾರಿ ಹುದ್ದೆ ನೇಮಕ ಆದೇಶಕ್ಕೆ ಹೈಕೋರ್ಟ್ ಬ್ರೇಕ್‌: ಮುಂದಿನ ವಿಚಾರಣೆಯವರೆಗೆ ನೇಮಕವಿಲ್ಲ

Published : Oct 19, 2025, 05:16 AM IST
Karnataka High Court

ಸಾರಾಂಶ

ಪರಿಶಿಷ್ಟ ಜಾತಿ (ಎಸ್ಸಿ)ಯಲ್ಲಿ ಒಳ ಮೀಸಲಾತಿ ಕಲ್ಪಿಸಿ ಹೊರಡಿಸಿರುವ ಆದೇಶದ ಅನುಸಾರ ನೇಮಕಾತಿಯ ಅಂತಿಮ ಆದೇಶಗಳನ್ನು ಪ್ರಕಟಿಸದಂತೆ ತಾತ್ಕಾಲಿಕ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರು (ಅ.19): ಪರಿಶಿಷ್ಟ ಜಾತಿ (ಎಸ್ಸಿ)ಯಲ್ಲಿ ಒಳ ಮೀಸಲಾತಿ ಕಲ್ಪಿಸಿ ಹೊರಡಿಸಿರುವ ಆದೇಶದ ಅನುಸಾರ ನೇಮಕಾತಿಯ ಅಂತಿಮ ಆದೇಶಗಳನ್ನು ಪ್ರಕಟಿಸದಂತೆ ತಾತ್ಕಾಲಿಕ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಒಳ ಮೀಸಲಾತಿ ಆದೇಶ ಪ್ರಶ್ನಿಸಿ ಕರ್ನಾಟಕ ಅಸ್ಪೃಶ್ಯ ಅಲೆಮಾರಿಗಳ ಮಹಾ ಒಕ್ಕೂಟದಿಂದ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರವು ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಬಹುದು. ಆದರೆ, ಮುಂದಿನ ವಿಚಾರಣೆವರೆಗೆ ನೇಮಕಾತಿ ಆದೇಶವನ್ನು ನೀಡುವಂತಿಲ್ಲ ಎಂದು ಹೇಳಿದ ಹೈಕೋರ್ಟ್ ವಿಚಾರಣೆಯನ್ನು ನ.13ಕ್ಕೆ ಮುಂದೂಡಿದೆ.

ಮೂರೂವರೆ ದಶಕಗಳ ಹೋರಾಟ ಮತ್ತು ಸುಪ್ರೀಂಕೋರ್ಟ್ ಆದೇಶದ ಅನುಸಾರ ಒಳಮೀಸಲಾತಿಗಾಗಿ ಸರ್ಕಾರ ಆಯೋಗವನ್ನು ರಚಿಸಿತ್ತು. ಅದರಂತೆ ಅಧ್ಯಯನ ನಡೆಸಿದ ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿಯಲ್ಲಿ ಅಲೆಮಾರಿಗಳಿಗೆ ಎಸ್ಸಿಯಲ್ಲಿ ಶೇ.1ರಷ್ಟು ಒಳಮೀಸಲಾತಿ ಕಲ್ಪಿಸಬೇಕು ಎಂದು ಉಲ್ಲೇಖಿಸಲಾಗಿದೆ.

ರಾಜ್ಯ ಸರ್ಕಾರಕ್ಕೆ ನೋಟಿಸ್

ಆದರೆ, ರಾಜ್ಯ ಸರ್ಕಾರದ ಅಂತಿಮ ಆದೇಶದಲ್ಲಿ ಅಲೆಮಾರಿಗಳನ್ನು ಕಡೆಗಣಿಸಲಾಗಿದೆ. ಇದರಿಂದ 59 ಅಲೆಮಾರಿ ಸಮುದಾಯಗಳಿಗೆ ಅನ್ಯಾಯವಾಗುತ್ತದೆ ಎಂದು ಒಕ್ಕೂಟದ ಪರ ವಕೀಲರು ವಾದ ಮಂಡಿಸಿದರು. ಪ್ರಾಥಮಿಕ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!