ಜ್ವರಕ್ಕೆ ಕಾರಣ ಪತ್ತೆ ಹಚ್ಚುವ ಉಪಕರಣ ಕಂಡು ಹಿಡಿದ ಯುವ ವಿಜ್ಞಾನಿ ಕೋಮಲ್‌!

Published : Oct 09, 2023, 07:43 AM IST
ಜ್ವರಕ್ಕೆ ಕಾರಣ ಪತ್ತೆ ಹಚ್ಚುವ ಉಪಕರಣ ಕಂಡು ಹಿಡಿದ ಯುವ ವಿಜ್ಞಾನಿ ಕೋಮಲ್‌!

ಸಾರಾಂಶ

ಜ್ವರಕ್ಕೆ ಕಾರಣವನ್ನು ಖಚಿತವಾಗಿ ಪತ್ತೆ ಹಚ್ಚು ಉಪಕರಣ ಕಂಡು ಹಿಡಿದ ಕೋಮಲ್‌ ಮನುಷ್ಯರಿಗೆ ಬರುವ ಜ್ವರದ ಕಾರಣವನ್ನು ನಿಖರವಾಗಿ ಪತ್ತೆ ಹಚ್ಚುವ ಸೆಲ್‌ ಫೇಸ್‌ (cell Face) ಎಂಬ ಆಧುನಿಕ ತಂತ್ರಜ್ಞಾನದ ಸಲಕರಣೆಯೊಂದನ್ನು ಅರಕಲಗೂಡು ಮೂಲದ ಯುವ ವಿಜ್ಞಾನಿ ಡಾ. ಕೋಮಲ್ ಕುಮಾರ್‌ ಸಂಶೋಧಿಸಿದ್ದಾರೆ. 

ಅರಕಲಗೂಡು (ಅ.09): ಜ್ವರಕ್ಕೆ ಕಾರಣವನ್ನು ಖಚಿತವಾಗಿ ಪತ್ತೆ ಹಚ್ಚು ಉಪಕರಣ ಕಂಡು ಹಿಡಿದ ಕೋಮಲ್‌ ಮನುಷ್ಯರಿಗೆ ಬರುವ ಜ್ವರದ ಕಾರಣವನ್ನು ನಿಖರವಾಗಿ ಪತ್ತೆ ಹಚ್ಚುವ ಸೆಲ್‌ ಫೇಸ್‌ (cell Face) ಎಂಬ ಆಧುನಿಕ ತಂತ್ರಜ್ಞಾನದ ಸಲಕರಣೆಯೊಂದನ್ನು ಅರಕಲಗೂಡು ಮೂಲದ ಯುವ ವಿಜ್ಞಾನಿ ಡಾ. ಕೋಮಲ್ ಕುಮಾರ್‌ ಸಂಶೋಧಿಸಿದ್ದಾರೆ. ಈ ಕುರಿತು ಇವರು ಮಂಡಿಸಿರುವ ಪ್ರಬಂಧವು ಇಂಗ್ಲೆಂಡ್ ದೇಶದ ಪ್ರತಿಷ್ಠಿತ ವಿಜ್ಞಾನ ಮಾಧ್ಯಮ ಸೆಲೆಕ್ಟ್ ಸೈನ್ಸ್ ( SELECTSEIENCE)ನಲ್ಲಿ ಪ್ರಕಟವಾಗಿದೆ.

ಕೋಮಲ್‌ ಕುಮಾರ್‌ ಜರ್ಮನಿ ದೇಶದ ಟುಮ್‌ (TUM) ಸಂಸ್ಥೆಯ ಪ್ರೊ. ಅಲಿವರ್‌ ಹೈಡನ್‌ ಮತ್ತು ಪ್ರೊ. ಪರ್ಸಿನೊಲ್ಲೆ ಮಾರ್ಗದರ್ಶನದಲ್ಲಿ ಸಂಶೋಧಿಸಿರುವ ಈ ಉಪಕರಣದಿಂದ ಮನುಷ್ಯರಿಗೆ ಬರುವ ಜ್ವರವು ವೈರಸ್‌ನಿಂದ ಬಂದಿದೆಯೆ ಅಥವಾ ಬ್ಯಾಕ್ಟೀರಿಯಾದಿಂದ ಬಂದಿದೆಯೆ ಎಂಬುದನ್ನು ಖಚಿತವಾಗಿ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸಹಾಯಕವಾಗಿದೆ. ಇದುವರೆಗಿನ ವೈದ್ಯಕೀಯ ತಂತ್ರಜ್ಞಾನದ ಸಲಕರಣೆಗಳಲ್ಲಿ ಜ್ವರದ ಕಾರಣದ ಪತ್ತೆ ಕಾರ್ಯ ಶೇ.50ರಷ್ಟು ಮಾತ್ರ ಸಾಧ್ಯತೆ ಇತ್ತು. 

ಆನೇಕಲ್ ಪಟಾಕಿ ದುರಂತ, ಮಾಲೀಕನ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ: ಸಿದ್ದರಾಮಯ್ಯ

ಹೊಸ ಆವಿಷ್ಕಾರದ ತಂತ್ರಜ್ಞಾನದ ಸಲಕರಣೆ ಮೂಲಕ ಶೇ.100 ರಷ್ಟು ಖಚಿತವಾಗಿ ಕಾರಣವನ್ನು ಪತ್ತೆ ಮಾಡಿ ಅಗತ್ಯ ಚಿಕಿತ್ಸೆ ನೀಡಲು ಸಹಕಾರಿಯಾಗಿದೆ ಎಂದು ಕೋಮಲ್‌ ಕುಮಾರ್‌ ತಿಳಿಸಿದ್ದಾರೆ. ಪಟ್ಟಣದ ರತ್ನಮ್ಮ ಹಾಗೂ ದಿ ಜವರಪ್ಪ ಅವರ ಪುತ್ರರಾದ ಡಾ. ಜೆ. ಕೋಮಲ್ ಕುಮಾರ್‌ ಸಿಂಗಪೂರ್ ನ ಪ್ರತಿಷ್ಠಿತ ಸಂಶೋಧನಾ ಕೇಂದ್ರ ಟುಮ್ ಕ್ರಿಯೇಟ್ (TUMCREATE) ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ