Breaking: ಸೋಮವಾರ ನಡೆಯಬೇಕಿದ್ದ ಪಿಯುಸಿ ಪರೀಕ್ಷೆ ಮುಂದೂಡಿಕೆ

Published : Mar 22, 2020, 05:36 PM ISTUpdated : Mar 22, 2020, 05:51 PM IST
Breaking: ಸೋಮವಾರ ನಡೆಯಬೇಕಿದ್ದ ಪಿಯುಸಿ ಪರೀಕ್ಷೆ ಮುಂದೂಡಿಕೆ

ಸಾರಾಂಶ

ಸಾರಿಗೆ ಬಸ್ ಬಂದ್ ಹಿನ್ನೆಲೆಯಲ್ಲಿ ತೀವ್ರ ಗೊಂದಲದಲ್ಲಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸ್ಪಷ್ಟನೆ ಕೊಟ್ಟಿದೆ. ಸೋಮವಾರ ನಡೆಯಬೇಕಿದ್ದ ಪರೀಕ್ಷೆಯನ್ನ ರದ್ದುಪಡಿಸಿದೆ. ಹಾಗಾದ್ರೆ ಯಾವಾಗ ನಡೆಯುತ್ತೆ?

ಬೆಂಗಳೂರು, (ಮಾ.22): ನಾಳೆ ಅಂದ್ರೆ ಸೋಮವಾರ ನಡೆಯಬೇಕಿದ್ದ ಕೊನೆಯ ಪಿಯುಸಿ ಪರೀಕ್ಷೆಯನ್ನ ಮುಂದೂಡಲಾಗಿದೆ.

ಮಾರ್ಚ್ 23ರಂದು ಕೊನೆಯ ಇಂಗ್ಲೀಷ್ ಪರೀಕ್ಷೆ ನಡೆಯಬೇಕಿತ್ತು. ಆದ್ರೆ, ಅದನ್ನು ರಾಜ್ಯ ಶಿಕ್ಷಣ ಇಲಾಖೆ ಮುಂದೂಡಿ ಇಂದು (ಭಾನುವಾರ) ಆದೇಶ ಹೊರಡಿಸಿದೆ.

ಸಾರಿಗೆ ಬಂದ್: ಸಚಿವರೇ ವಿದ್ಯಾರ್ಥಿಗಳು PU ಎಕ್ಸಾಂಗೆ ಹೋಗುವುದೇಗೆ..?

ಮಾರ್ಚ್ 31ರ ನಂತರ ಬಾಕಿ ಇರುವ ಈ ಇಂಗ್ಲೀಷ್ ಪರೀಕ್ಷೆಯ ದಿನಾಂಕವನ್ನ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.

 ರಾಜ್ಯಾದಾದ್ಯಂತ ಸಾರಿಗೆ ಬಸ್ ಬಂದ್ ಆಗಲಿದ್ದು,  ಸೋಮವಾರ ನಡೆಯುವ ಪರೀಕ್ಷೆ ಎಂದಿನಂತೆ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದರು. ಬಳಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿ, ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದರು. 

ಸಚಿವರುಗಳು ತಲೆಗೊಂದು ಹೇಳಿಕೆ ಪಿಯುಸಿ ವಿದ್ಯಾರ್ಥಿಗಳಿಗೆ ತೀವ್ರ ಗೊಂದಲ ಸೃಷ್ಟಿಸಿತ್ತು. ರಾಜ್ಯ ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದೇ ಪಿಯು ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಸುದ್ದಿ ಮಾಧ್ಯಮಗಳಲ್ಲಿ ನಿರಂತರ ಸುದ್ದಿ ಪ್ರಸಾರವಾಗತ್ತಿತ್ತು. ಬಳಿಕ ಎಚ್ಚೇತ್ತ ಸುರೇಶ್ ಕುಮಾರ್ ಅವರು ಕೊನೆಗೆ ಪರೀಕ್ಷೆಯನ್ನೇ ಮುಂದೂಡುವ ಅಂತಿಮ ಕ್ರಮಕೈಗೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್