‘SUNಚಲನ’ ಮೂಡಿಸಿದ SELCO ಕಾರ್ಯಾಗಾರ: ವಿದ್ಯುತ್ ಎಲ್ಲರಿಗೂ ಎಂಬ ಝೇಂಕಾರ!

Published : Jan 31, 2019, 06:42 PM ISTUpdated : Jan 31, 2019, 08:20 PM IST
‘SUNಚಲನ’ ಮೂಡಿಸಿದ SELCO ಕಾರ್ಯಾಗಾರ: ವಿದ್ಯುತ್ ಎಲ್ಲರಿಗೂ ಎಂಬ ಝೇಂಕಾರ!

ಸಾರಾಂಶ

ಮೊಳಗಿತು ಎಲ್ಲರಿಗೂ ವಿದ್ಯುತ್ ಎಂಬ ಒಕ್ಕೊರಲಿನ ಧ್ವನಿ| SELCO ಫೌಂಡೇಶನ್ ಆಯೋಜಿಸಿದ್ದ SUNಚಲನ ಕಾರ್ಯಾಗಾರ| ಶಕ್ತಿ ಸಂಪನ್ಮೂಲದ ವಿಕೇಂದ್ರೀಕರಣಕ್ಕೆ ಕಾರ್ಯಾಗಾರದ ವೇದಿಕೆ ಆಗ್ರಹ| ಸಮಾರಂಭದಲ್ಲಿ SELCO ಫೌಂಡೇಶನ್ ಮುಖ್ಯಸ್ಥ ಡಾ. ಹರೀಶ್ ಹಂದೆ ಭಾಷಣ

ಬೆಂಗಳೂರು(ಜ.31): ಮಾನವ ಸಮಾಜದ ಪ್ರಮುಖ ಶಕ್ತಿ ಸಂಪನ್ಮೂಲವಾಗಿರುವ ವಿದ್ಯುತ್ ವಿಕೇಂದ್ರೀಕರಣಕ್ಕೆ ಟೊಂಕ ಕಟ್ಟಿ ನಿಂತಿರುವ SELCO ಫೌಂಡೇಶನ್, ವಿದ್ಯುತ್ ವಿಕೇಂದ್ರೀಕರಣದ ಮಹತ್ವ ತಿಳಿಸುವ ಎರಡು ದಿನಗಳ SUNಚಲನ ಕಾರ್ಯಾಗಾರವನ್ನು ಯಶಸ್ವಿಯಾಗಿ ಮುಗಿಸಿದೆ.

ಕಾರ್ಯಾಗಾರದ ಎರಡನೇ ದಿನದ ಸಭೆ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆಧುನಿಕ ಸರ್ಕಾರಗಳು ಕೇವಲ ಸಮಾಜದ ನಿರ್ದಿಷ್ಟ ವರ್ಗದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದು, SELCOದಂತಹ ಸಂಸ್ಥೆಗಳು ತಳ ಮಟ್ಟದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಗಮನ ಸೆಳೆದಿವೆ ಎಂದು ಹೇಳಿದರು.

ಸಮಾಜದ ಶ್ರೀಮಂತ ವರ್ಗದ ಬಳಿ ವಿದ್ಯುತ್ ಅಭಾವದ ಸಮಸ್ಯೆಗೆ ಪರಿಹಾರವಿದ್ದು, ಗ್ರಾಮಗಳಲ್ಲಿ ವಾಸಿಸುವ ಬಡ ಜನರಲ್ಲಿ ಇದಕ್ಕೆ ಪರಿಹಾರವಿಲ್ಲ. ಹಳ್ಳಿಗಳಲ್ಲಿನ ವಿದ್ಯುತ್ ಸಮಸ್ಯೆ ನಿವಾರಣೆಗೆಂದೇ SELCOದಂತಹ ನಿಸ್ವಾರ್ಥ ಸಂಘಟನೆಗಳು ದುಡಿಯುತ್ತಿದ್ದು, ಇದಕ್ಕೆ ಪ್ರಜ್ಞಾವಂತ ವರ್ಗ ಕೈಜೋಡಿಸಬೇಕಿದೆ ಎಂದು ರವಿಕುಮಾರ್ ಮನವಿ ಮಾಡಿದರು.

ಈ ವೇಳೆ ಮಾತನಾಡಿದ SELCO ಫೌಂಡೇಶನ್ ಮುಖ್ಯಸ್ಥ ಡಾ. ಹರೀಶ್ ಹಂದೆ, ಶಕ್ತಿ ಸಂಪನ್ಮೂಲಗಳು ಬಡತನ ಮತ್ತು ದಾರಿದ್ರ್ಯತನದಿಂದ ದೇಶವನ್ನು ಮುಕ್ತಗೊಳಿಸಬಹುದಾಗಿದ್ದು, ವಿದ್ಯುತ್ ವಿಕೇಂದ್ರೀಕರಣ ಇಂದಿನ ತುರ್ತು ಅವಶ್ಯವಾಗಿದೆ ಎಂದು ಹೇಳಿದರು.

SELCO ಫೌಂಡೇಶನ್ ಮೂಲಕ ಕರ್ನಾಟಕದಲ್ಲಿ ನಾವಿದನ್ನು ಸಾಧ್ಯ ಮಾಡಿ ತೋರಿಸಿದ್ದು, ಹಳ್ಳಿ ಹಳ್ಳಿಗೂ ವಿದ್ಯುತ್ ತಲುಪಿಸಲು ದೇಶದ ಪ್ರಜ್ಷಾವಂತ ವರ್ಗ  ನಮ್ಮೊಂದಿಗೆ ಕೈ ಜೋಡಿಸಬೇಕು ಎಂದು ಈ ವೇಳೆ ಡಾ. ಹರೀಶ್ ಹಂದೆ ಮನವಿ ಮಾಡಿದರು.

ಇನ್ನು ಕರುಣಾ ಟ್ರಸ್ಟ್ ನ ಡಾ. ಸುದರ್ಶನ್, ಹಿರಿಯ ಪತ್ರಕರ್ತ ನಾಗೇಶ್ ಹೆಗಡೆ,  DATC ಸಂಸ್ಥೆಯ ಮಾಲತೇಶ್ ಪುಟ್ಟಣ್ಣವರ್ ಕೂಡ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.

ಶಕ್ತಿ ಸಂಪನ್ಮೂಲದ ವಿಕೇಂದ್ರೀಕರಣ: ತುರ್ತಾಗಿ ಆಗ್ಬೇಕಣ್ಣ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಆಜಾನ್‌ ಚರ್ಚೆ ವೇಳೆ ದೀಪಾವಳಿ ಪಟಾಕಿ ವಿಚಾರ ಎತ್ತಿದ ಖಂಡ್ರೆ ಕೈ-ಬಿಜೆಪಿ ನಡುವೆ ಗದ್ದಲ
Namma Hola Namma Dari Scheme: ರೈತರಿಗೆ ಶುಭ ಸುದ್ದಿ, ನಿಮ್ಮ ಜಮೀನಿಗೆ ರಸ್ತೆ ಸಂಪರ್ಕ ಈಗ ಸುಲಭ!