ಮುಂಬೈ ದಾಳಿಕೋರರನ್ನ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸದಾನಂದ ವಸಂತ್ NIA ಡಿಜಿಯಾಗಿ ಅಧಿಕಾರ ಸ್ವೀಕಾರ

Published : Apr 01, 2024, 08:52 AM IST
ಮುಂಬೈ ದಾಳಿಕೋರರನ್ನ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸದಾನಂದ ವಸಂತ್ NIA ಡಿಜಿಯಾಗಿ ಅಧಿಕಾರ ಸ್ವೀಕಾರ

ಸಾರಾಂಶ

ಎನ್​​ಐಎ ನೂತನ ಡಿಜಿಯಾಗಿ ಸದಾನಂದ್​ ವಸಂತ್ ಅವರಿಗೆ ಸೇವೆಯಿಂದ ನಿವೃತ್ತರಾದ ದಿನಕರ್ ಗುಪ್ತಾರಿಂದ ಅಧಿಕಾರ ಹಸ್ತಾಂತರ ಮಾಡಲಾಯಿತು. ಅವರು ಜೂನ್ 30, 2026 ರಂದು ತಮ್ಮ ನಿವೃತ್ತಿಯಾಗುವವರೆಗೆ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬೆಂಗಳೂರು (ಏ.01): ಎನ್​​ಐಎ ನೂತನ ಡಿಜಿಯಾಗಿ ಸದಾನಂದ್​ ವಸಂತ್ ಅವರಿಗೆ ಸೇವೆಯಿಂದ ನಿವೃತ್ತರಾದ ದಿನಕರ್ ಗುಪ್ತಾರಿಂದ ಅಧಿಕಾರ ಹಸ್ತಾಂತರ ಮಾಡಲಾಯಿತು. ಅವರು ಜೂನ್ 30, 2026 ರಂದು ತಮ್ಮ ನಿವೃತ್ತಿಯಾಗುವವರೆಗೆ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

2008ರಲ್ಲಿ ಮುಂಬೈ ಹೋಟೆಲ್ ಮೇಲಿನ ಭಯೋತ್ಪಾದಕರ ದಾಳಿ ವೇಳೆ ಸದಾನಂದ ಅವರು ಮಹಾರಾಷ್ಟ್ರ ATS ಮುಖ್ಯಸ್ಥರಾಗಿದ್ದರು. ಉಗ್ರರನ್ನು ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2008ರಲ್ಲಿ ರಾಷ್ಟ್ರಪತಿಗಳ ಪೊಲೀಸ್ ಪದಕಕ್ಕೆ ಭಾಜನರಾಗಿದ್ದರು.ಮಹಾರಾಷ್ಟ್ರ ಕೇಡರ್‍ನ 1990-ಬ್ಯಾಚ್ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಯಾಗಿರುವ ಸದಾನಂದ ಅವರು ಡಿಸೆಂಬರ್ 31, 2026 ರಂದು ಅವರ ನಿವೃತ್ತಿಯ ಅವಧಿಯವರೆಗೆ ಎನ್‍ಐಎಯ ಡೈರೆಕ್ಟರ್ ಜನರಲ್ (ಡಿಜಿ) ಆಗಿ ಸೇವೆ ಸಲ್ಲಿಸಲಿದ್ದಾರೆ.

ಬಂಗಾಳ ಡಿಜಿಪಿ, 6 ಗೃಹ ಕಾರ್ಯದರ್ಶಿಗಳ ಎತ್ತಂಗಡಿ: ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಹಿಂಸಾಪೀಡಿತ ಪ.ಬಂಗಾಳದ ಡಿಜಿಪಿ ಹಾಗೂ 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಚುನಾವಣಾ ಆಯೋಗ ಎತ್ತಂಗಡಿ ಮಾಡಿದೆ. ಸಂದೇಶ್‌ಖಾಲಿ ಹಿಂಸೆಯಿಂದ ಸುದ್ದಿಯಲ್ಲಿರುವ ಪ.ಬಂಗಾಳದ ಡಿಜಿಪಿ ರಾಜೀವ್‌ ಕುಮಾರ್‌ ಅವರನ್ನು ವರ್ಗಾಯಿಸಿರುವ ಆಯೋಗ, ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ವಿವೇಕ್‌ ಸಹಾಯ್‌ರನ್ನು ನೇಮಿಸಿದೆ. ಅಲ್ಲದೆ, ಗುಜರಾತ್‌, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಗೃಹ ಕಾರ್ಯದರ್ಶಿಗಳನ್ನೂ ಸಹ ವರ್ಗಾಯಿಸಿದೆ. ಇದಲ್ಲದೆ, ಬೃಹನ್ಮುಂಬಯಿ ಪಾಲಿಕೆ ಆಯುಕ್ತರು, ಸಹಾಯಕ ಆಯುಕ್ತರು ಮತ್ತು ಉಪ ಆಯುಕ್ತರು ಸೋಮವಾರ ಸಂಜೆ 6 ಗಂಟೆ ಒಳಗೆ ಹುದ್ದೆ ಬಿಡಬೇಕು ಎಂದು ಸೂಚಿಸಿದೆ.

ಎಮಿಷನ್‌ ಟೆಸ್ಟ್‌ ನಕಲು ತಡೆಗೆ ಹೊಸ ಸಾಫ್ಟ್‌ವೇರ್‌: ಸಾರಿಗೆ ಇಲಾಖೆ ಹೊಸ ವ್ಯವಸ್ಥೆ!

ಏಕೆ ತೆರವು?: ನೀತಿ ಸಂಹಿತೆ ಜಾರಿಯಾದ ಬಳಿಕ ಚುನಾವಣಾ ಆಯೋಗಕ್ಕೆ ಅಧಿಕಾರಿಗಳನ್ನು ವರ್ಗಾಯಿಸುವ ಪರಮೋಚ್ಚ ಅಧಿಕಾರವಿರುತ್ತದೆ. ಈ ವೇಳೆ, ಆಯೋಗವು ಆಯಾ ರಾಜ್ಯ ಸರ್ಕಾರಗಳಿಗೆ ಹೆಚ್ಚು ನಿಷ್ಠೆ ಹೊಂದಿರುವ ಅಧಿಕಾರಿಗಳನ್ನು ಎತ್ತಂಗಡಿ ಮಾಡಿ ನಿಷ್ಪಕ್ಷಪಾತ ಅಧಿಕಾರಿಗಳನ್ನು ನೇಮಿಸುವುದು ಮಾಮೂಲಿ ಕ್ರಮ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!