ಶಕ್ತಿಯೋಜನೆ ಎಫೆಕ್ಟ್: ಸೀಟು ಬಿಡುವಂತೆ ವೃದ್ಧನ ಮೇಲೆ ನಾಲ್ವರು ಮಹಿಳೆಯರಿಂದ ಹಲ್ಲೆ

Published : Oct 13, 2023, 09:46 AM IST
ಶಕ್ತಿಯೋಜನೆ ಎಫೆಕ್ಟ್: ಸೀಟು ಬಿಡುವಂತೆ ವೃದ್ಧನ ಮೇಲೆ ನಾಲ್ವರು ಮಹಿಳೆಯರಿಂದ ಹಲ್ಲೆ

ಸಾರಾಂಶ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವುದಕ್ಕಾಗಿ ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದಿದೆ. ಶಕ್ತಿಯೋಜನೆ ಜಾರಿಯಾದ ಬಳಿಕ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಇದೀಗ ಮತ್ತೊಂದು ಅವಾಂತರ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿ (ಅ.13) :  ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವುದಕ್ಕಾಗಿ ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದಿದೆ. ಶಕ್ತಿಯೋಜನೆ ಜಾರಿಯಾದ ಬಳಿಕ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಇದೀಗ ಮತ್ತೊಂದು ಅವಾಂತರ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಬಸ್‌ನಲ್ಲಿ ಆಸನಕ್ಕಾಗಿ ವಯೋವೃದ್ಧನ ಮೇಲೆ ಮಹಿಳೆಯರು ಮನಸೋ ಇಚ್ಛೆ ಥಳಿಸಿರುವ ಅಮಾನವೀಯ ಘಟನೆ ನಡೆದಿದೆ. ಯಾದಗಿರಿಯಿಂದ ಸೇಡಂ ಗೆ ಹೊರಟ್ಟಿದ್ದ ಬಸ್ ನಲ್ಲಿ ನಡೆದಿರುವ ದುರ್ಘಟನೆ. ಬಸ್‌ನಲ್ಲಿ ಕುಳಿತಿದ್ದ ವೃದ್ಧ. ಈ ವೇಳೆ ಬಸ್ ಹತ್ತಿದ್ದ ನಾಲ್ವರು ಮಹಿಳೆಯರು. ಸೀಟು ಬಿಡುವಂತೆ ಹೇಳಿದ್ದಾರೆ. ಆದರೆ ಮುಂದಿನ ಸೀಟು ಖಾಲಿ ಇವೆ ಅಲ್ಲಿ ಕುಳಿತುಕೊಳ್ಳಿ ಎಂದಿರುವ ವೃದ್ಧ. ಅಷ್ಟಕ್ಕೆ ನಾಲ್ವರು ಮಹಿಳೆಯರು ವಯೋವೃದ್ಧನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. 

ಮನೆ ಕರೆಂಟ್ ಬಿಲ್ ಹೆಚ್ಚಿಗೆ ಬಂದಿದ್ದಕ್ಕೆ ಕೈ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ ವ್ಯಕ್ತಿ!

ಈ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿರುವ ಸಹಪ್ರಯಾಣಿಕರು. ಸ್ಥಳಕ್ಕೆ ಬಂದ ಪೊಲೀಸರು ವೃದ್ಧನ ಮೇಲೆ ಹಲ್ಲೆ ನಡೆಸಿದ ಮಹಿಳೆಯರು ವಶಕ್ಕೆ ಪಡೆದು ವಿಚಾರಣೆಗೆ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ