ಬಿಎಂಟಿಸಿ ನೂತನ ಅಧ್ಯಕ್ಷರಾಗಿ ಹ್ಯಾರಿಸ್‌ ಅಧಿಕಾರ ಸ್ವೀಕಾರ

Published : Jan 12, 2019, 09:27 AM IST
ಬಿಎಂಟಿಸಿ ನೂತನ ಅಧ್ಯಕ್ಷರಾಗಿ ಹ್ಯಾರಿಸ್‌ ಅಧಿಕಾರ ಸ್ವೀಕಾರ

ಸಾರಾಂಶ

ಬಿಎಂಟಿಸಿ ನೂತನ ಅಧ್ಯಕ್ಷರಾಗಿ ಹ್ಯಾರಿಸ್‌ ಅಧಿಕಾರ ಸ್ವೀಕಾರ| ನಷ್ಟದಲ್ಲಿರುವ ಸಂಸ್ಥೆಯನ್ನು ಲಾಭದತ್ತ ಕೊಂಡೊಯ್ಯುವ ಭರವಸೆ

ಬೆಂಗಳೂರು[ಜ.12]: ಸಾರ್ವಜನಿಕರಿಗೆ ಉತ್ತಮ ಸೇವೆ ಕಲ್ಪಿಸುವ ಜತೆಗೆ ನಷ್ಟದಲ್ಲಿರುವ ಬಿಎಂಟಿಸಿಯನ್ನು ಲಾಭದತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುವುದು ಎಂದು ಶಾಸಕ ಹಾಗೂ ಬಿಎಂಟಿಸಿ ಅಧ್ಯಕ್ಷ ಎನ್‌.ಎ.ಹ್ಯಾರಿಸ್‌ ಹೇಳಿದರು.

ಶುಕ್ರವಾರ ಶಾಂತಿನಗರದ ಬಿಎಂಟಿಸಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ನೂತನ ಅಧ್ಯಕ್ಷರಾಗಿ ಕಾರ್ಯಾಭಾರ ವಹಿಸಿಕೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಂಸ್ಥೆಯ ಲಾಭ ನಷ್ಟಮುಖ್ಯವಲ್ಲ. ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸಂಪರ್ಕ ಒದಗಿಸುವುದು ನಮ್ಮ ಮೊದಲ ಆದ್ಯತೆ. ಇದುವರೆಗೂ ನಿಗಮದಲ್ಲಿ ಏನಾಗಿದೆ, ಏನಾಗಿಲ್ಲ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ತಿಳಿದುಕೊಂಡು ಹಂತ ಹಂತವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಬಿಎಂಟಿಸಿ ನಿಗಮದಲ್ಲಿ ತಂತ್ರಜ್ಞಾನವನ್ನು ಹೇಗೆ ಬಳಕೆ ಮಾಡಿಕೊಳ್ಳಬೇಕು, ಮೆಟ್ರೋಗೆ ಬಿಎಂಟಿಸಿ ಹೇಗೆ ಸಂಪರ್ಕ ಮಾಡಬೇಕೆಂಬ ನಿಟ್ಟಿನಲ್ಲಿ ರೂಪುರೇಷೆ ಸಿದ್ಧಪಡಿಸಿ ಕೆಲವು ಬದಲಾವಣೆ ಮಾಡಲಾಗುವುದು. ನಿಗಮವನ್ನು ಇನ್ನಷ್ಟುಡಿಜಿಟಲ್‌ ಮಾಡಿ ಜನರ ಹತ್ತಿರಕ್ಕೆ ಕೊಂಡೊಯ್ಯುವ ಗುರಿ ಹೊಂದಿದ್ದೇನೆ ಎಂದರು.

ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಮಾತನಾಡಿದರು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌.ವಿ.ಪ್ರಸಾದ್‌ ಸೇರಿದಂತೆ ನಿಗಮದ ಸಿಬ್ಬಂದಿ ನೂತನ ಅಧ್ಯಕ್ಷರಿಗೆ ಶುಭಕೋರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗರ್ಭಧರಿಸಿ 9 ತಿಂಗಳು ಪೂರೈಸಿದ ಹಸುವಿಗೆ ಸೀಮಂತ ಮಾಡಿದ ಮಂಡ್ಯ ರೈತ
ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌