ಕರ್ನಾಟಕದಲ್ಲಿ ಮುಂದುವರಿದ ವರುಣನ ಅಬ್ಬರ: ಸಿಡಿಲಿಗೆ ಕುರಿಗಾಹಿ ಬಲಿ

Published : May 14, 2024, 07:24 AM ISTUpdated : May 14, 2024, 08:33 AM IST
ಕರ್ನಾಟಕದಲ್ಲಿ ಮುಂದುವರಿದ ವರುಣನ ಅಬ್ಬರ: ಸಿಡಿಲಿಗೆ ಕುರಿಗಾಹಿ ಬಲಿ

ಸಾರಾಂಶ

ರಾಜ್ಯದಲ್ಲಿ ಬಿಸಿಲ ಝಳ ಮುಂದುವರಿದಿರುವ ನಡುವೆಯೇ ಮಳೆ ಕೂಡ ಮುಂದುವರಿದಿದ್ದು ಯಾದಗಿರಿ, ಕೋಲಾರ, ಚಿತ್ರದುರ್ಗ, ರಾಯಚೂರು, ಚಿಕ್ಕಮಗಳೂರು, ತುಮಕೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಕೆಲಕಾಲ ಸಾಧಾರಣದಿಂದ ಉತ್ತಮ ಮಳೆಯಾಗಿದೆ.  

ಬೆಂಗಳೂರು(ಮೇ.14): ರಾಜ್ಯದ ಎಂಟಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾನುವಾರ ರಾತ್ರಿಯಿಂದೀಚೆಗೆ ಕೆಲಕಾಲ ಉತ್ತಮ ಮಳೆಯಾಗಿದ್ದು, ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿಯೊಬ್ಬ ಬಲಿಯಾಗಿದ್ದಾನೆ. ಭಾರೀ ಗಾಳಿ ಜತೆಗೆ ಸುರಿದ ಮಳೆ ಹಲವೆಡೆ ಭಾರೀ ಅವಾಂತರವನ್ನೂ ಸೃಷ್ಟಿಸಿದ್ದು, ರಾಯಚೂರಲ್ಲಿ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದರೆ, ಚಿಕ್ಕಮಗಳೂರು ಮತ್ತು ತುಮಕೂರಲ್ಲಿ ಹಲವು ಮರಗಳು ಧರೆಗುರುಳಿವೆ.

ರಾಜ್ಯದಲ್ಲಿ ಬಿಸಿಲ ಝಳ ಮುಂದುವರಿದಿರುವ ನಡುವೆಯೇ ಮಳೆ ಕೂಡ ಮುಂದುವರಿದಿದ್ದು ಯಾದಗಿರಿ, ಕೋಲಾರ, ಚಿತ್ರದುರ್ಗ, ರಾಯಚೂರು, ಚಿಕ್ಕಮಗಳೂರು, ತುಮಕೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಕೆಲಕಾಲ ಸಾಧಾರಣದಿಂದ ಉತ್ತಮ ಮಳೆಯಾಗಿದೆ.

ಇಂದಿನಿಂದ 5 ದಿನ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ..!

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಬಳಿ ಸೋಮವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಸಿಡಿಲು ಬಡಿದು ಗೋವಿಂದಪ್ಪ (22) ಎಂಬ ಕುರಿಗಾಹಿ ಮೃತಪಟ್ಟಿದ್ದಾರೆ. ಗ್ರಾಮದ ಮಹ್ಮದ್ ಕಾಶಿಂ ಅವರ ಜಮೀನಲ್ಲಿ ಹಾಕಿರುವ ಕುರಿ ಹಟ್ಟಿಯಲ್ಲಿ ಮಲಗಿರುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಈ ವೇಳೆ ಹಟ್ಟಿಯಲ್ಲಿದ್ದ 7 ಕುರಿಗಳು ಕೂಡ ಸಾವಿಗೀಡಾಗಿವೆ.

ಚಿಕ್ಕಮಗಳೂರಲ್ಲೂ ಇಡೀ ರಾತ್ರಿ ಸುರಿದ ಮಳೆಯಿಂದಾಗಿ ಹಲವೆಡೆ ಸಾಧಾರಣ ಮಳೆಯಾಗಿದ್ದು, ಭಾರೀ ಗಾಳಿಯಿಂದಾಗಿ ಹಲವೆಡೆ ಮರಗಳು ಉರುಳಿ ಬಿದ್ದಿವೆ. ಭಾರೀ ಗಾಳಿ ಸಹಿತ ಸುರಿದ ಮಳೆಯಿಂದಾಗಿ ಟಿಟಿಯೊಂದು ಶೃಂಗೇರಿ ತಾಲೂಕಿನ ಕುಂಚೇಬೈಲು ಗ್ರಾಮದ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಅದೃಷ್ಟವಶಾತ್ ವಾಹನದಲ್ಲಿದ್ದ 9 ಜನ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಕಾರು ಪಲ್ಟಿ: 

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ಬಿರುಗಾಳಿ ಅಬ್ಬರಕ್ಕೆ ರಸ್ತೆ ಬದಿ ನಿಲ್ಲಿಸಿದ್ದ ಕಾರೊಂದು ಪಲ್ಟಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಈ ಗ್ರಾಮದಲ್ಲಿ ಭಾರೀ ಗಾಳಿಗೆ ಅಡಕೆ, ತೆಂಗಿನ ಮರಗಳೂ ಧರೆಗುರುಳಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

112 ಹುದ್ದೆ ನೇಮಕಾತಿ ಮುಂದುವರಿಕೆಗೆ ಕೆಪಿಎಸ್ಸಿಗೆ ನೀಡಿದ್ದ ಅನುಮತಿ ವಾಪಸ್!
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌