ಅಮಾವಾಸ್ಯೆ ದಿನ ಶ್ರೀಗಳು ಮಠ ಬಿಟ್ಟು ಹೋಗುತ್ತಿರಲಿಲ್ಲವೇಕೆ..!

Published : Jan 22, 2019, 09:25 AM IST
ಅಮಾವಾಸ್ಯೆ ದಿನ ಶ್ರೀಗಳು ಮಠ ಬಿಟ್ಟು ಹೋಗುತ್ತಿರಲಿಲ್ಲವೇಕೆ..!

ಸಾರಾಂಶ

ಅಮಾವಾಸ್ಯೆ ದಿನ ಶ್ರೀಗಳು ಮಠ ಬಿಟ್ಟು ಹೊರಗೆ ಹೋಗುತ್ತಿರಲಿಲ್ಲ. ಮಠದ ಭಾಗದಲ್ಲಿರುವ ಮಂಚದ ಮೇಲೆ ಕುಳಿತು ಯಂತ್ರ ಚಿಕಿತ್ಸೆ ಮಾಡುತ್ತಿದ್ದರು. ಜನ ಬಂದು ಸ್ವಾಮೀಜಿಗಳಿಂದ ರಕ್ಷಾ ಕವಚ ನೀಡುತ್ತಿದ್ದರು. 

ತುಮಕೂರು :  ಅಮಾವಾಸ್ಯೆ ದಿನ ಶ್ರೀಗಳು ಮಠ ಬಿಟ್ಟು ಹೊರಗೆ ಹೋಗುತ್ತಿರಲಿಲ್ಲ, ಅಂದು ಬೆಳಿಗ್ಗೆ 7 ಗಂಟೆಯಿಂದ ಮಠದ ಭಾಗದಲ್ಲಿರುವ ಮಂಚದ ಮೇಲೆ ಕುಳಿತು ಯಂತ್ರ ಚಿಕಿತ್ಸೆ ಮಾಡುತ್ತಿದ್ದರು. 

ಈ ಸಂಪ್ರದಾಯ ಅವರ ಗುರುಗಳಾದ ಉದ್ದಾನ ಶಿವಯೋಗಿಗಳಿಂದ ಬಂದದ್ದು, ಕಬ್ಬಿಣದ ದಬ್ಬಳದಲ್ಲಿ ಮಂತ್ರವನ್ನು ರೇಖಿಸಿದ ತಾಮ್ರದ ಹಾಳೆಯನ್ನು ಸುತ್ತಿ ತಾಯತ ಮಾಡಿ ಕಟ್ಟುತ್ತಾರೆ. ತಮ್ಮ ಕಷ್ಟಗಳಿಗೆ ಪರಿಹಾರ ದೊರೆಯುತ್ತದೆ ಎಂಬ ನಂಬಿಕೆಯಿಂದ ಜನ ಅಧಿಕ ಸಂಖ್ಯೆಯಲ್ಲಿ ಬರುತ್ತಾರೆ. ನಂಬಿಕೆಯ ರಕ್ಷಾಕವಚ ಅದಕ್ಕಿರುವುದರಿಂದ ಜನರು ತಾಮುಂದು ಎಂದು ಬರುತ್ತಾರೆ. 

ಭಕ್ತರ  ದೃಷ್ಟಿಯಲ್ಲಿ ಇದು ತಾಮ್ರದ ತಗಡಲ್ಲ, ಗುರುಮಂತ್ರ. ಮಾನಸಿಕ ದುಗುಡಗಳಿಂದ ಬಿಡುಗಡೆ ಮಾಡುವ ದಿವ್ಯ ಸಂಜೀವಿನಿ. ಸರ್ವರೋಗ ನಿವಾರಕ ಎಂಬ ಗಾಢವಾದ ನಂಬಿಕೆ. ನೊಂದ ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುವ ಸ್ಪರ್ಶ ಮಣಿ. ಭಕ್ತರು ಹೋಗುವವರೆಗೂ ಪೂಜ್ಯ ಶ್ರೀಗಳು ಮಂಚಬಿಟ್ಟು ಇಳಿಯುತ್ತಿರಲಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ಗ್ರಾಮೀಣ ಜ್ಞಾನ ಸಮುಚ್ಚಯ' ಪುಸ್ತಕ ಲೋಕಾರ್ಪಣೆ: ರಾಜೇಂದ್ರಕುಮಾರ್ ಆಡಳಿತದ ಸಾಧನೆ ಕೊಂಡಾಡಿದ ಹೊರಟ್ಟಿ
Phone Tapping: ದೇವರಾಣೆ ಮಾಡಿ, ಡಿಕೆಶಿ ಫೋನ್ ಟ್ಯಾಪ್ ಮಾಡಿಲ್ಲವ? ಸಿಎಂಗೆ ಚಲವಾದಿ ಸವಾಲು, ಕಲಬುರಗಿ ಪ್ರಬುದ್ಧರ ಮೇಲೂ ವಾಗ್ದಾಳಿ!