
ಶಿವಮೊಗ್ಗ: ಶಿವಮೊಗ್ಗದಿಂದ ಬೆಂಗಳೂರಿನ ನಡುವೆ ಫೆ.3 ರಂದು ಸಂಜೆ ಜನಶತಾಬ್ಧಿ ರೈಲಿಗೆ ಚಾಲನೆ ನೀಡಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಜನಶತಾಬ್ದಿ ರೈಲಿಗೆ ಚಾಲನೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಫೆ.3 ರಂದು ಸಭಾ ಕಾರ್ಯಕ್ರಮ ನಡೆಯಲಿದ್ದು ಫೆ.4 ರಂದು ಬೆಳಿಗ್ಗೆ 5.30ಕ್ಕೆ ಶಿವಮೊಗ್ಗದಿಂದ ಜನಶತಾಬ್ಧಿ ಹೊರಡಲಿದೆ. 10 ಗಂಟೆಗೆ ಬೆಂಗಳೂರು ತಲುಪಲಿದೆ. ಬೆಂಗಳೂರಿನಿಂದ ಸಂಜೆ 5-30 ಕ್ಕೆ ತೆರಳಲಿದ್ದು ರಾತ್ರಿ ಶಿವಮೊಗ್ಗ 10 ಗಂಟೆ ತಲುಪಲಿದೆ ಎಂದರು.
ವಾರದಲ್ಲಿ ಮೂರು ದಿನ ಈ ರೈಲು ಸಂಚರಿಸಲಿದ್ದು ರೈಲಿನ ದರ 450 ರು. ನಿಗದಿಪಡಿಸಲಾಗಿದೆ. ಸೋಮವಾರ, ಬುಧವಾರ ಹಾಗೂ ಶುಕ್ರವಾರ ರೈಲು ಸಂಚರಿಸಲಿದ್ದು, ಶನಿವಾರ ಹಾಗೂ ಭಾನುವಾರ ಸಂಚರಿಸಲೂ ಮಾತುಕತೆ ನಡೆಯಲಿದೆ ಎಂದರು.
ನಿಲ್ದಾಣ : ಶಿವಮೊಗ್ಗ-ಬೆಂಗಳೂರಿನ ನಡುವೆ ಸಂಚರಿಸಲು ಭದ್ರಾವತಿ, ಬೀರೂರು, ಕಡೂರು, ಅರಸೀಕೆರೆ ಹಾಗೂ ತುಮಕೂರಿನ ನಡುವೆ ನಿಲುಗಡೆ ನೀಡಲಾಗುತ್ತಿದೆ.
ಹೇಗಿರುತ್ತೆ? : ಜನ್ ಶತಾಬ್ಧಿ ರೈಲಿನಲ್ಲಿ ಎಸಿ ಹಾಗೂ ನಾನ್ ಎಸಿ ಎರಡೂ ವ್ಯವಸ್ಥೆ ಇರಲಿದೆ. ಸಾಮಾನ್ಯ ಜನರ ಪ್ರಯಾಣಕ್ಕೆ ಹೆಚ್ಚು ಅನುಕೂಲಕಾರಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ